ಬ್ರೇಕಿಂಗ್ ನ್ಯೂಸ್
27-01-25 10:57 pm Mangalore Correspondent ಕರಾವಳಿ
ಮಂಗಳೂರು, ಜ.27: ಪ್ರಕರಣ ಒಂದರಲ್ಲಿ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದ ಸ್ಕೂಟರ್ ಅನ್ನು ಬಿಡುಗಡೆ ಮಾಡಲು ಕೋರ್ಟ್ ಆದೇಶ ಆಗಿದ್ದರೂ ಬಿಡುಗಡೆ ಮಾಡಬೇಕಿದ್ದರೆ 5 ಸಾವಿರ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಹಮ್ಮದ್ ಶರೀಫ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ವ್ಯಕ್ತಿಯೊಬ್ಬರಿಗೆ ಸ್ಕೂಟರ್ ಬಿಟ್ಟು ಕೊಡಬೇಕಿದ್ದರೆ 5 ಸಾವಿರ ರೂ. ಕೊಡಬೇಕೆಂದು ಮಹಮ್ಮದ್ ಶರೀಫ್ ಹೇಳಿದ್ದು, ಅವರು ಹಣ ಕಡಿಮೆ ಮಾಡುವಂತೆ ಕೇಳಿಕೊಂಡಾಗ ಠಾಣೆಯ ಬರಹಗಾರ್ತಿ ನಾಗರತ್ನ ಎಚ್.ಸಿ ಅವರನ್ನು ಭೇಟಿ ಮಾಡಲು ತಿಳಿಸಿದ್ದರು. ಅದರಂತೆ, ನಾಗರತ್ನ ಬಳಿ ಹೋದಾಗ ಬೈದು 3 ಸಾವಿರ ಲಂಚ ನೀಡುವಂತೆ ಹೇಳಿದ್ದಾರೆ. ಕಾನೂನು ಪ್ರಕಾರ ಮಾಡಬೇಕಿದ್ದ ಸರ್ಕಾರಿ ಕೆಲಸಕ್ಕೆ ಲಂಚ ನೀಡಲು ಒಪ್ಪದ ಫಿರ್ಯಾದಿ ವ್ಯಕ್ತಿ ನೇರವಾಗಿ ಲೋಕಾಯುಕ್ತ ಗಮನಕ್ಕೆ ತಂದಿದ್ದಾರೆ.
ಲೋಕಾಯುಕ್ತ ಠಾಣೆಯಲ್ಲಿ ಮಹಮ್ಮದ್ ಶರೀಫ್ ಹಾಗೂ ನಾಗರತ್ನ ವಿರುದ್ಧ ಪ್ರಕರಣ ದಾಖಲಿಸಿದ ಅಧಿಕಾರಿಗಳು ಜ.27ರಂದು ಟ್ರಾಪ್ ಮಾಡಿದ್ದು, ಮಹಮ್ಮದ್ ಶರೀಫ್ ಹಾಗೂ ಸಿಬಂದಿ ಪ್ರವೀಣ್ ನಾಯ್ಕ ಮೂರು ಸಾವಿರ ರೂ. ಲಂಚದ ಹಣ ಸ್ವೀಕರಿಸುವಾಗಲೇ ಬಲೆಗೆ ಬಿದ್ದಿದ್ದಾರೆ. ಆರೋಪಿತ ಅಧಿಕಾರಿ ಮತ್ತು ಸಿಬಂದಿಯನ್ನು ಲೋಕಾಯುಕ್ತ ತಂಡ ವಶಕ್ಕೆ ಪಡೆದು ತನಿಖೆ ಕೈಗೊಂಡಿದೆ. ಲೋಕಾಯುಕ್ತ ಪ್ರಭಾರ ಎಸ್ಪಿ ಡಾ.ನಂದಿನಿ ಬಿ.ಎನ್, ಡಿವೈಎಸ್ಪಿ ಡಾ.ಗಾನ ಪಿ.ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ, ಚಂದ್ರಶೇಖರ್ ಕೆ.ಎನ್, ಉಡುಪಿ ಪೊಲೀಸ್ ಠಾಣೆಯ ನಿರೀಕ್ಷಕ ಮಂಜುನಾಥ ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿದ್ದರು.
Mangalore North police station traffic inspector Muhammad Sharief caught by lokayukta for taking bribe for releasing a two wheeler even after court order.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm