ಬ್ರೇಕಿಂಗ್ ನ್ಯೂಸ್
27-01-25 10:57 pm Mangalore Correspondent ಕರಾವಳಿ
ಮಂಗಳೂರು, ಜ.27: ಪ್ರಕರಣ ಒಂದರಲ್ಲಿ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದ ಸ್ಕೂಟರ್ ಅನ್ನು ಬಿಡುಗಡೆ ಮಾಡಲು ಕೋರ್ಟ್ ಆದೇಶ ಆಗಿದ್ದರೂ ಬಿಡುಗಡೆ ಮಾಡಬೇಕಿದ್ದರೆ 5 ಸಾವಿರ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಹಮ್ಮದ್ ಶರೀಫ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ವ್ಯಕ್ತಿಯೊಬ್ಬರಿಗೆ ಸ್ಕೂಟರ್ ಬಿಟ್ಟು ಕೊಡಬೇಕಿದ್ದರೆ 5 ಸಾವಿರ ರೂ. ಕೊಡಬೇಕೆಂದು ಮಹಮ್ಮದ್ ಶರೀಫ್ ಹೇಳಿದ್ದು, ಅವರು ಹಣ ಕಡಿಮೆ ಮಾಡುವಂತೆ ಕೇಳಿಕೊಂಡಾಗ ಠಾಣೆಯ ಬರಹಗಾರ್ತಿ ನಾಗರತ್ನ ಎಚ್.ಸಿ ಅವರನ್ನು ಭೇಟಿ ಮಾಡಲು ತಿಳಿಸಿದ್ದರು. ಅದರಂತೆ, ನಾಗರತ್ನ ಬಳಿ ಹೋದಾಗ ಬೈದು 3 ಸಾವಿರ ಲಂಚ ನೀಡುವಂತೆ ಹೇಳಿದ್ದಾರೆ. ಕಾನೂನು ಪ್ರಕಾರ ಮಾಡಬೇಕಿದ್ದ ಸರ್ಕಾರಿ ಕೆಲಸಕ್ಕೆ ಲಂಚ ನೀಡಲು ಒಪ್ಪದ ಫಿರ್ಯಾದಿ ವ್ಯಕ್ತಿ ನೇರವಾಗಿ ಲೋಕಾಯುಕ್ತ ಗಮನಕ್ಕೆ ತಂದಿದ್ದಾರೆ.
ಲೋಕಾಯುಕ್ತ ಠಾಣೆಯಲ್ಲಿ ಮಹಮ್ಮದ್ ಶರೀಫ್ ಹಾಗೂ ನಾಗರತ್ನ ವಿರುದ್ಧ ಪ್ರಕರಣ ದಾಖಲಿಸಿದ ಅಧಿಕಾರಿಗಳು ಜ.27ರಂದು ಟ್ರಾಪ್ ಮಾಡಿದ್ದು, ಮಹಮ್ಮದ್ ಶರೀಫ್ ಹಾಗೂ ಸಿಬಂದಿ ಪ್ರವೀಣ್ ನಾಯ್ಕ ಮೂರು ಸಾವಿರ ರೂ. ಲಂಚದ ಹಣ ಸ್ವೀಕರಿಸುವಾಗಲೇ ಬಲೆಗೆ ಬಿದ್ದಿದ್ದಾರೆ. ಆರೋಪಿತ ಅಧಿಕಾರಿ ಮತ್ತು ಸಿಬಂದಿಯನ್ನು ಲೋಕಾಯುಕ್ತ ತಂಡ ವಶಕ್ಕೆ ಪಡೆದು ತನಿಖೆ ಕೈಗೊಂಡಿದೆ. ಲೋಕಾಯುಕ್ತ ಪ್ರಭಾರ ಎಸ್ಪಿ ಡಾ.ನಂದಿನಿ ಬಿ.ಎನ್, ಡಿವೈಎಸ್ಪಿ ಡಾ.ಗಾನ ಪಿ.ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ, ಚಂದ್ರಶೇಖರ್ ಕೆ.ಎನ್, ಉಡುಪಿ ಪೊಲೀಸ್ ಠಾಣೆಯ ನಿರೀಕ್ಷಕ ಮಂಜುನಾಥ ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿದ್ದರು.
Mangalore North police station traffic inspector Muhammad Sharief caught by lokayukta for taking bribe for releasing a two wheeler even after court order.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm