ಬ್ರೇಕಿಂಗ್ ನ್ಯೂಸ್
28-01-25 04:40 pm Mangalore Correspondent ಕರಾವಳಿ
ಮಂಗಳೂರು, ಜ.28: ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಇಂಡಿಗೋ ವಿಮಾನದಲ್ಲಿ ತೆರಳುತ್ತಿದ್ದಾಗ ಮಹಿಳೆಯ ಜೊತೆಗಿದ್ದ ಮಗುವಿನ ಚಿನ್ನದ ಸರ ಬಿದ್ದು ಹೋಗಿದ್ದು, ಅದನ್ನು ಸಿಐಎಸ್ಎಫ್ ಸಿಬಂದಿ ಸಕಾಲಿಕ ಪ್ರಯತ್ನದಿಂದ ಮತ್ತೆ ವಾಪಸ್ ಮಾಡಿಸಿದ ಘಟನೆ ನಡೆದಿದೆ.
ಜ.26ರಂದು ಬೆಳಗ್ಗೆ 8.30ಕ್ಕೆ ರಚನಾ ಮಾರ್ಲ ಎಂಬ ಮಹಿಳೆ ತನ್ನ ಮಗುವಿನ ಜೊತೆಗೆ ಏರ್ಪೋರ್ಟ್ ನಲ್ಲಿ ಚೆಕ್ಕಿಂಗ್ ಆಗಿ ವಿಮಾನದ ಬಳಿ ತಲುಪುತ್ತಿದ್ದಂತೆ ಮಗುವಿನ ಸರ ಇಲ್ಲದಿರುವುದು ಗಮನಕ್ಕೆ ಬಂದಿತ್ತು. ಆನಂತರ, ಹೊರಗೆ ಬಂದು ಸರ ಬಿದ್ದು ಹೋಗಿದೆಯೇ ಎಂದು ಪರಿಶೀಲನೆ ಮಾಡುವುದಕ್ಕೆ ಸಮಯ ಇರಲಿಲ್ಲ. ಹೀಗಾಗಿ ಏರ್ಪೋರ್ಟಿನ ಸಿಐಎಸ್ಎಫ್ ಭದ್ರತಾ ಸಿಬಂದಿಗೆ ಸರ ಬಿದ್ದುಹೋಗಿರುವ ಬಗ್ಗೆ ದೂರು ಕೊಟ್ಟು ಬೆಂಗಳೂರಿಗೆ ತೆರಳಿದ್ದರು.
ಆನಂತರ, ಸಿಐಎಸ್ಎಫ್ ಭದ್ರತಾ ಸಿಬಂದಿ ತಪಾಸಣೆ ನಡೆಸಿದಾಗ ಏರ್ಪೋರ್ಟ್ ಮೇಲಂತಸ್ತಿನಲ್ಲಿ ಕಾರಿನಿಂದ ಇಳಿದು ಒಳಗೆ ಬರುವಾಗಲೇ ಮಗುವಿನ ಸರ ಬಿದ್ದು ಹೋಗಿರುವುದು ಪತ್ತೆಯಾಗಿತ್ತು. ಅಲ್ಲದೆ, ಆ ಸರವನ್ನು ಇನ್ನೊಬ್ಬ ವಾಹನದ ಚಾಲಕ ಹೆಕ್ಕಿ ತನ್ನ ಜೊತೆಗೆ ತೆಗೆದುಕೊಂಡು ಹೋಗಿದ್ದು ದೃಶ್ಯದಲ್ಲಿತ್ತು. ಹೀಗಾಗಿ ಆ ವಾಹನದ ನಂಬರ್ ಮೂಲಕ ಚಾಲಕನ ಪತ್ತೆ ಮಾಡಿ ಪೊಲೀಸರು ಕರೆ ಮಾಡಿದ್ದರು. ಈ ವೇಳೆ, ಸರ ಬಿದ್ದು ಸಿಕ್ಕಿರುವುದನ್ನು ಒಪ್ಪಿಕೊಂಡ ಚಾಲಕ, ಅದನ್ನು ವಾರೀಸುದಾರರಿಗೆ ನೀಡಲು ರೆಡಿ ಇದ್ದೇನೆ ಎಂದೂ ಹೇಳಿದ್ದ.
ಸಿಐಎಸ್ಎಫ್ ಕಡೆಯಿಂದ ಮರಳಿ ಆ ಮಹಿಳೆಗೆ ಫೋನ್ ಕರೆ ಮಾಡಿ ವಿಷಯ ತಿಳಿಸಿದ್ದರು. ತನಗೆ ಸರ ಸಿಕ್ಕಿದರಾಯ್ತು, ಕಂಪ್ಲೇಂಟ್ ಕೊಡುವ ಆಸಕ್ತಿ ಇಲ್ಲ ಎಂದರು. ಅದರಂತೆ, ಸಿಐಎಸ್ಎಫ್ ಅಧಿಕಾರಿಗಳು ಚಾಲಕನನ್ನು ಕರೆಸಿ ವಿಮಾನ ನಿಲ್ದಾಣದ ಕಚೇರಿಯಲ್ಲಿ ತಪ್ಪೊಪ್ಪಿಗೆ ಪತ್ರ ಬರೆಸಿ ಚಿನ್ನದ ಸರವನ್ನು ಪಡೆದು ಬಿಟ್ಟು ಕಳಿಸಿದ್ದಾರೆ. ಮಹಿಳೆಯ ಕುಟುಂಬಸ್ಥರು ಬಳಿಕ ಏರ್ಪೋರ್ಟಿಗೆ ಬಂದು ಚಿನ್ನದ ಸರವನ್ನು ಪಡೆದುಕೊಂಡು ಹೋಗಿದ್ದಾರೆ. ಈ ಬಗ್ಗೆ ಸ್ವತಃ ಮಹಿಳೆ ರಚನಾ ಮಾರ್ಲ ವಿಡಿಯೋ ಮಾಡಿದ್ದು, ಸಿಐಎಸ್ಎಫ್ ಭದ್ರತಾ ಸಿಬಂದಿ ಒಂದೇ ದಿನದಲ್ಲಿ ಸಿಸಿಟಿವಿ ನೋಡಿ ಸರವನ್ನು ಪತ್ತೆ ಮಾಡಿದ್ದಲ್ಲದೆ, ಕುಟುಂಬಸ್ಥರನ್ನು ಕರೆಸಿ ಅವರ ಕೈಗೊಪ್ಪಿಸಿದ್ದಾರೆ. ಆ ಸರದ ಜೊತೆಗೆ ಭಾವನಾತ್ಮಕ ನಂಟಿದೆ. ಇದಕ್ಕಾಗಿ ಪತ್ತೆ ಮಾಡಿ ಸರ ಮರಳಿಸಿದ ಭದ್ರತಾ ಸಿಬಂದಿಗೆ ತುಂಬ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.
Mangalore CISF restore lost gold chain lost in the airport. Women who lost the chain also shared video of testimony about the CISF officala being prompt in their service.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am