ಬ್ರೇಕಿಂಗ್ ನ್ಯೂಸ್
28-01-25 04:40 pm Mangalore Correspondent ಕರಾವಳಿ
ಮಂಗಳೂರು, ಜ.28: ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಇಂಡಿಗೋ ವಿಮಾನದಲ್ಲಿ ತೆರಳುತ್ತಿದ್ದಾಗ ಮಹಿಳೆಯ ಜೊತೆಗಿದ್ದ ಮಗುವಿನ ಚಿನ್ನದ ಸರ ಬಿದ್ದು ಹೋಗಿದ್ದು, ಅದನ್ನು ಸಿಐಎಸ್ಎಫ್ ಸಿಬಂದಿ ಸಕಾಲಿಕ ಪ್ರಯತ್ನದಿಂದ ಮತ್ತೆ ವಾಪಸ್ ಮಾಡಿಸಿದ ಘಟನೆ ನಡೆದಿದೆ.
ಜ.26ರಂದು ಬೆಳಗ್ಗೆ 8.30ಕ್ಕೆ ರಚನಾ ಮಾರ್ಲ ಎಂಬ ಮಹಿಳೆ ತನ್ನ ಮಗುವಿನ ಜೊತೆಗೆ ಏರ್ಪೋರ್ಟ್ ನಲ್ಲಿ ಚೆಕ್ಕಿಂಗ್ ಆಗಿ ವಿಮಾನದ ಬಳಿ ತಲುಪುತ್ತಿದ್ದಂತೆ ಮಗುವಿನ ಸರ ಇಲ್ಲದಿರುವುದು ಗಮನಕ್ಕೆ ಬಂದಿತ್ತು. ಆನಂತರ, ಹೊರಗೆ ಬಂದು ಸರ ಬಿದ್ದು ಹೋಗಿದೆಯೇ ಎಂದು ಪರಿಶೀಲನೆ ಮಾಡುವುದಕ್ಕೆ ಸಮಯ ಇರಲಿಲ್ಲ. ಹೀಗಾಗಿ ಏರ್ಪೋರ್ಟಿನ ಸಿಐಎಸ್ಎಫ್ ಭದ್ರತಾ ಸಿಬಂದಿಗೆ ಸರ ಬಿದ್ದುಹೋಗಿರುವ ಬಗ್ಗೆ ದೂರು ಕೊಟ್ಟು ಬೆಂಗಳೂರಿಗೆ ತೆರಳಿದ್ದರು.
ಆನಂತರ, ಸಿಐಎಸ್ಎಫ್ ಭದ್ರತಾ ಸಿಬಂದಿ ತಪಾಸಣೆ ನಡೆಸಿದಾಗ ಏರ್ಪೋರ್ಟ್ ಮೇಲಂತಸ್ತಿನಲ್ಲಿ ಕಾರಿನಿಂದ ಇಳಿದು ಒಳಗೆ ಬರುವಾಗಲೇ ಮಗುವಿನ ಸರ ಬಿದ್ದು ಹೋಗಿರುವುದು ಪತ್ತೆಯಾಗಿತ್ತು. ಅಲ್ಲದೆ, ಆ ಸರವನ್ನು ಇನ್ನೊಬ್ಬ ವಾಹನದ ಚಾಲಕ ಹೆಕ್ಕಿ ತನ್ನ ಜೊತೆಗೆ ತೆಗೆದುಕೊಂಡು ಹೋಗಿದ್ದು ದೃಶ್ಯದಲ್ಲಿತ್ತು. ಹೀಗಾಗಿ ಆ ವಾಹನದ ನಂಬರ್ ಮೂಲಕ ಚಾಲಕನ ಪತ್ತೆ ಮಾಡಿ ಪೊಲೀಸರು ಕರೆ ಮಾಡಿದ್ದರು. ಈ ವೇಳೆ, ಸರ ಬಿದ್ದು ಸಿಕ್ಕಿರುವುದನ್ನು ಒಪ್ಪಿಕೊಂಡ ಚಾಲಕ, ಅದನ್ನು ವಾರೀಸುದಾರರಿಗೆ ನೀಡಲು ರೆಡಿ ಇದ್ದೇನೆ ಎಂದೂ ಹೇಳಿದ್ದ.
ಸಿಐಎಸ್ಎಫ್ ಕಡೆಯಿಂದ ಮರಳಿ ಆ ಮಹಿಳೆಗೆ ಫೋನ್ ಕರೆ ಮಾಡಿ ವಿಷಯ ತಿಳಿಸಿದ್ದರು. ತನಗೆ ಸರ ಸಿಕ್ಕಿದರಾಯ್ತು, ಕಂಪ್ಲೇಂಟ್ ಕೊಡುವ ಆಸಕ್ತಿ ಇಲ್ಲ ಎಂದರು. ಅದರಂತೆ, ಸಿಐಎಸ್ಎಫ್ ಅಧಿಕಾರಿಗಳು ಚಾಲಕನನ್ನು ಕರೆಸಿ ವಿಮಾನ ನಿಲ್ದಾಣದ ಕಚೇರಿಯಲ್ಲಿ ತಪ್ಪೊಪ್ಪಿಗೆ ಪತ್ರ ಬರೆಸಿ ಚಿನ್ನದ ಸರವನ್ನು ಪಡೆದು ಬಿಟ್ಟು ಕಳಿಸಿದ್ದಾರೆ. ಮಹಿಳೆಯ ಕುಟುಂಬಸ್ಥರು ಬಳಿಕ ಏರ್ಪೋರ್ಟಿಗೆ ಬಂದು ಚಿನ್ನದ ಸರವನ್ನು ಪಡೆದುಕೊಂಡು ಹೋಗಿದ್ದಾರೆ. ಈ ಬಗ್ಗೆ ಸ್ವತಃ ಮಹಿಳೆ ರಚನಾ ಮಾರ್ಲ ವಿಡಿಯೋ ಮಾಡಿದ್ದು, ಸಿಐಎಸ್ಎಫ್ ಭದ್ರತಾ ಸಿಬಂದಿ ಒಂದೇ ದಿನದಲ್ಲಿ ಸಿಸಿಟಿವಿ ನೋಡಿ ಸರವನ್ನು ಪತ್ತೆ ಮಾಡಿದ್ದಲ್ಲದೆ, ಕುಟುಂಬಸ್ಥರನ್ನು ಕರೆಸಿ ಅವರ ಕೈಗೊಪ್ಪಿಸಿದ್ದಾರೆ. ಆ ಸರದ ಜೊತೆಗೆ ಭಾವನಾತ್ಮಕ ನಂಟಿದೆ. ಇದಕ್ಕಾಗಿ ಪತ್ತೆ ಮಾಡಿ ಸರ ಮರಳಿಸಿದ ಭದ್ರತಾ ಸಿಬಂದಿಗೆ ತುಂಬ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.
Mangalore CISF restore lost gold chain lost in the airport. Women who lost the chain also shared video of testimony about the CISF officala being prompt in their service.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm