ಬ್ರೇಕಿಂಗ್ ನ್ಯೂಸ್
30-01-25 10:42 pm Mangalore Correspondent ಕರಾವಳಿ
ಬಂಟ್ವಾಳ, ಜ.30: ಕಲ್ಲಡ್ಕ ಮೇಲ್ಸೇತುವೆ ಹಾಗೂ ಸರ್ವೀಸ್ ರಸ್ತೆಯ ಕಾಮಗಾರಿ ಬಹುತೇಕ ಮಾರ್ಚ್ ಅಂತ್ಯದಲ್ಲಿ ಕಂಪ್ಲೀಟ್ ಆಗಲಿದ್ದು, ಎಪ್ರಿಲ್ ತಿಂಗಳಲ್ಲಿ ಸಂಚಾರಕ್ಕೆ ಮುಕ್ತಗೊಳಿಸುವ ಭರವಸೆಯನ್ನು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಹಿಸಿಕೊಂಡ ಕೆಎನ್ ಆರ್ ಸಿ ಕಂಪನಿ ನೀಡಿರುವುದಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಜೊತೆ ಬಿ.ಸಿ.ರೋಡಿನಿಂದ ಉಪ್ಪಿನಂಗಡಿ ವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಕಾಂಚನದಲ್ಲಿರುವ ಕೆ.ಎನ್.ಆರ್.ಸಿ. ಕಂಪೆನಿಯ ಪ್ಲಾಂಟ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಬಿಸಿ ರೋಡಿನಿಂದ ಪೆರಿಯಶಾಂತಿ ವರೆಗೆ ಸುಮಾರು 45 ಕಿ.ಮೀ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಮಳೆಗಾಲದ ಮೊದಲು ಮುಗಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಭರವಸೆಯನ್ನು ಕಂಪೆನಿ ನೀಡಿದೆ. ಬ್ಲಾಸ್ಟಿಂಗ್ ಸಮಸ್ಯೆ ಇರುವ ಕಡೆ ಮಾತ್ರ ಕಾಮಗಾರಿ ತುಸು ವಿಳಂಬವಾಗಬಹುದು ಬಿಟ್ಟರೆ ಉಳಿದ ಎಲ್ಲಾ ಕಡೆ ಸಂಚಾರಕ್ಕೆ ಮುಕ್ತ ಮಾಡುವುದಾಗಿ ಅವರು ತಿಳಿಸಿದರು.
ಮೆಲ್ಕಾರ್ ಸಮೀಪದ ನರಹರಿ ಹಾಗೂ ನೀರಕಟ್ಟೆ ಎಂಬಲ್ಲಿ ತಡೆಗೋಡೆ ಹಾಗೂ ಬ್ಲಾಸ್ಟಿಂಗ್ ಸಮಸ್ಯೆ ಇದ್ದು ರಸ್ತೆ ಕಾಮಗಾರಿಯನ್ನು ಪೂರ್ತಿಗೊಳಿಸುವಲ್ಲಿ ತುಸು ವಿಳಂಬವಾಗಬಹುದು. ಅದು ಬಿಟ್ಟರೆ ಉಳಿದಂತೆ ಎಲ್ಲಿಯೂ ರಸ್ತೆ ನಿರ್ಮಾಣಕ್ಕೆ ಅಡೆತಡೆಗಳಿಲ್ಲ. ಹೆದ್ದಾರಿ ನಿರ್ಮಾಣದ ವೇಳೆ ಕೆಲವು ಕಡೆಗಳಲ್ಲಿ ರಸ್ತೆ ಸಮಸ್ಯೆ, ಮಳೆಗಾಲದಲ್ಲಿ ಜಮೀನಿಗೆ ನೀರು ನುಗ್ಗುವ ಸಮಸ್ಯೆ, ಕ್ರಾಸಿಂಗ್ ಹೀಗೆ ಇನ್ನಿತರ ಸಣ್ಣಪುಟ್ಟ ವ್ಯತ್ಯಾಸಗಳು ಇವೆ. ಈ ಬಗ್ಗೆ ಅಧಿಕಾರಿಗಳಲ್ಲಿ ಮಾಹಿತಿ ಪಡೆದು ಮುಂದಿನ ಕ್ರಮದ ಬಗ್ಗೆ ಚರ್ಚಿಸುವುದಾಗಿ ಅವರು ತಿಳಿಸಿದರು.
ಆರಂಭದಲ್ಲಿ ಬಿಸಿರೋಡಿನಲ್ಲಿ ನಿರ್ಮಾಣ ಹಂತದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಕಾಮಗಾರಿಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಬಿಲ್ಲವ ಸಂಘದ ಪ್ರಮುಖರು ವೃತ್ತದ ಸುತ್ತ ಜಾಗವನ್ನು ಅಗಲೀಕರಣಗೊಳಿಸಿ, ವೃತ್ತದ ಸೌಂದರ್ಯವನ್ನು ಇನ್ನಷ್ಟು ಹೆಚ್ಚು ಮಾಡುವಂತೆ ಮನವಿ ಮಾಡಿದರು. ಪಾಣೆಮಂಗಳೂರು, ಮೆಲ್ಕಾರ್, ಮಾಣಿ, ಪೇರಮೊಗ್ರು, ಉಪ್ಪಿನಂಗಡಿ, ಸುಬ್ರಹ್ಮಣ್ಯ ಕ್ರಾಸ್ ಕಡೆಗಳಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್ ಹಾಗೂ ಕಲ್ಲಡ್ಕದಲ್ಲಿ ಅಂತಿಮ ಹಂತದಲ್ಲಿರುವ ಫ್ಲೈ ಓವರ್ ಕಾಮಗಾರಿ ವೀಕ್ಷಿಸಿದರು.
Dakshina Kannada Member of Parliament Capt. Brijesh Chowta said on Thursday that he is hopeful that 90% of National Highway 75 widening work between B.C. Road and Periyashanti is likely to be over by this May end.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm