ಬ್ರೇಕಿಂಗ್ ನ್ಯೂಸ್
01-02-25 07:47 pm Mangalore Correspondent ಕರಾವಳಿ
ಮಂಗಳೂರು, ಫೆ.1: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಧಾನಿ ದೆಹಲಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಪ್ರತಿದಿನ ಸಂಚರಿಸಲಿದೆ. ಫೆ.1ರಿಂದಲೇ ಈ ವಿಮಾನ ಯಾನ ಆರಂಭಗೊಂಡಿದ್ದು, ಬೆಳಗ್ಗೆ 6.40ಕ್ಕೆ ಮಂಗಳೂರಿನಿಂದ ಹೊರಟು 9.35ಕ್ಕೆ ದೆಹಲಿಗೆ ತಲುಪಿದೆ. ಆಮೂಲಕ ಕರಾವಳಿಯಿಂದ ರಾಜಧಾನಿ ದೆಹಲಿಯನ್ನು ಏರ್ ಇಂಡಿಯಾ ಇನ್ನಷ್ಟು ಹತ್ತಿರವಾಗಿಸಿದೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ಐಎಕ್ಸ್ 1552 ಹೆಸರಿನ ವಿಮಾನವು ಮಂಗಳೂರಿನಿಂದ 167 ಪ್ರಯಾಣಿಕರನ್ನು ಹೊತ್ತು ದೆಹಲಿಗೆ ತಲುಪಿದೆ. ಇದೇ ವೇಳೆಗೆ ಪ್ರತಿಯಾಗಿ ದೆಹಲಿಯಿಂದಲೂ ಬೆಳಗ್ಗೆ 6.40ಕ್ಕೆ ಹೊರಟು 9.35ಕ್ಕೆ ಮಂಗಳೂರಿಗೆ ವಿಮಾನ ಆಗಮಿಸಿದೆ. ದೆಹಲಿಯಿಂದ ಹೊರಟ ವಿಮಾನವನ್ನು ಕ್ಯಾಪ್ಟನ್ ವಿನೀತ್ ಕುಮಾರ್ ಮತ್ತು ಸಿಬಂದಿ ಮುನ್ನಡೆಸಿದ್ದಾರೆ. ದೆಹಲಿಯಿಂದ ಬಂದ ವಿಮಾನದಲ್ಲಿ 144 ಪ್ರಯಾಣಿಕರು ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರಿನಿಂದ ಹೊರಟ ವಿಮಾನಕ್ಕೆ ಏರೋ ಡ್ರೋಮ್ ರೆಸ್ಕ್ಯು ತಂಡದಿಂದ ನೀರು ಹಾಯಿಸುವ ಮೂಲಕ ಶುಭ ಹಾರೈಕೆ ನೀಡಲಾಯಿತು. ಕಳೆದ ಜನವರಿ 4ರಿಂದ ಪ್ರತಿ ಶನಿವಾರ ಮಂಗಳೂರಿನಿಂದ ಪುಣೆಗೆ ಹೊಸ ವಿಮಾನ ಸಂಚಾರ ಆರಂಭಿಸಿತ್ತು. ಇದರ ಬೆನ್ನಲ್ಲೇ ರಾಜಧಾನಿ ದೆಹಲಿಗೂ ಪ್ರತಿ ದಿನದ ವಿಮಾನ ಸಂಚಾರ ಆರಂಭಿಸಿದೆ. ನೇರ ವಿಮಾನ ಸಂಚಾರದಿಂದ ಮಂಗಳೂರಿನಿಂದ ಬಿಸಿನೆಸ್ ಇನ್ನಿತರ ಉದ್ದೇಶಕ್ಕೆ ದೆಹಲಿಗೆ ಹೋಗುವವರಿಗೆ ಸುಗಮವಾಗಲಿದೆ. ಈಗಾಗಲೇ ಇಂಡಿಗೋ ಸಂಸ್ಥೆಯಿಂದ ದಿನವೂ ಸಂಜೆ ದೆಹಲಿಗೆ ವಿಮಾನ ಸಂಚಾರ ಇದೆ. ಇದರೊಂದಿಗೆ ಬೆಳಗ್ಗೆ, ಸಂಜೆ ಡೈಲಿ ವಿಮಾನ ಸಂಚಾರ ಮಾಡಿದಂತಾಗಿದೆ.
Air India Express commenced a direct flight service between Mangalore and Delhi. The initiative offers a direct daily morning service between the two cities.
04-01-26 10:27 pm
Bangalore Correspondent
Janardhan Reddy, DK Shivakumar: ನನಗೆ ಜೀವ ಬೆದರ...
04-01-26 07:24 pm
ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ...
03-01-26 10:40 pm
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
04-01-26 06:38 pm
Mangalore Correspondent
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
04-01-26 11:10 pm
Mangalore Correspondent
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm