ಬ್ರೇಕಿಂಗ್ ನ್ಯೂಸ್
01-02-25 07:47 pm Mangalore Correspondent ಕರಾವಳಿ
ಮಂಗಳೂರು, ಫೆ.1: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಧಾನಿ ದೆಹಲಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಪ್ರತಿದಿನ ಸಂಚರಿಸಲಿದೆ. ಫೆ.1ರಿಂದಲೇ ಈ ವಿಮಾನ ಯಾನ ಆರಂಭಗೊಂಡಿದ್ದು, ಬೆಳಗ್ಗೆ 6.40ಕ್ಕೆ ಮಂಗಳೂರಿನಿಂದ ಹೊರಟು 9.35ಕ್ಕೆ ದೆಹಲಿಗೆ ತಲುಪಿದೆ. ಆಮೂಲಕ ಕರಾವಳಿಯಿಂದ ರಾಜಧಾನಿ ದೆಹಲಿಯನ್ನು ಏರ್ ಇಂಡಿಯಾ ಇನ್ನಷ್ಟು ಹತ್ತಿರವಾಗಿಸಿದೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ಐಎಕ್ಸ್ 1552 ಹೆಸರಿನ ವಿಮಾನವು ಮಂಗಳೂರಿನಿಂದ 167 ಪ್ರಯಾಣಿಕರನ್ನು ಹೊತ್ತು ದೆಹಲಿಗೆ ತಲುಪಿದೆ. ಇದೇ ವೇಳೆಗೆ ಪ್ರತಿಯಾಗಿ ದೆಹಲಿಯಿಂದಲೂ ಬೆಳಗ್ಗೆ 6.40ಕ್ಕೆ ಹೊರಟು 9.35ಕ್ಕೆ ಮಂಗಳೂರಿಗೆ ವಿಮಾನ ಆಗಮಿಸಿದೆ. ದೆಹಲಿಯಿಂದ ಹೊರಟ ವಿಮಾನವನ್ನು ಕ್ಯಾಪ್ಟನ್ ವಿನೀತ್ ಕುಮಾರ್ ಮತ್ತು ಸಿಬಂದಿ ಮುನ್ನಡೆಸಿದ್ದಾರೆ. ದೆಹಲಿಯಿಂದ ಬಂದ ವಿಮಾನದಲ್ಲಿ 144 ಪ್ರಯಾಣಿಕರು ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರಿನಿಂದ ಹೊರಟ ವಿಮಾನಕ್ಕೆ ಏರೋ ಡ್ರೋಮ್ ರೆಸ್ಕ್ಯು ತಂಡದಿಂದ ನೀರು ಹಾಯಿಸುವ ಮೂಲಕ ಶುಭ ಹಾರೈಕೆ ನೀಡಲಾಯಿತು. ಕಳೆದ ಜನವರಿ 4ರಿಂದ ಪ್ರತಿ ಶನಿವಾರ ಮಂಗಳೂರಿನಿಂದ ಪುಣೆಗೆ ಹೊಸ ವಿಮಾನ ಸಂಚಾರ ಆರಂಭಿಸಿತ್ತು. ಇದರ ಬೆನ್ನಲ್ಲೇ ರಾಜಧಾನಿ ದೆಹಲಿಗೂ ಪ್ರತಿ ದಿನದ ವಿಮಾನ ಸಂಚಾರ ಆರಂಭಿಸಿದೆ. ನೇರ ವಿಮಾನ ಸಂಚಾರದಿಂದ ಮಂಗಳೂರಿನಿಂದ ಬಿಸಿನೆಸ್ ಇನ್ನಿತರ ಉದ್ದೇಶಕ್ಕೆ ದೆಹಲಿಗೆ ಹೋಗುವವರಿಗೆ ಸುಗಮವಾಗಲಿದೆ. ಈಗಾಗಲೇ ಇಂಡಿಗೋ ಸಂಸ್ಥೆಯಿಂದ ದಿನವೂ ಸಂಜೆ ದೆಹಲಿಗೆ ವಿಮಾನ ಸಂಚಾರ ಇದೆ. ಇದರೊಂದಿಗೆ ಬೆಳಗ್ಗೆ, ಸಂಜೆ ಡೈಲಿ ವಿಮಾನ ಸಂಚಾರ ಮಾಡಿದಂತಾಗಿದೆ.
Air India Express commenced a direct flight service between Mangalore and Delhi. The initiative offers a direct daily morning service between the two cities.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am