ಬ್ರೇಕಿಂಗ್ ನ್ಯೂಸ್
16-12-20 01:57 pm Mangalore Correspondent ಕರಾವಳಿ
ಮಂಗಳೂರು, ಡಿ.16: ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಒಬ್ಬರಿಗೆ ದುಷ್ಕರ್ಮಿಯೊಬ್ಬ ತಲವಾರಿನಲ್ಲಿ ಕಡಿದು ಪರಾರಿಯಾದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ಮಂಗಳೂರಿನ ರಥಬೀದಿ ಬಳಿಯ ನ್ಯೂ ಚಿತ್ರಾ ಟಾಕೀಸ್ ಮುಂಭಾಗದಲ್ಲಿ ಘಟನೆ ನಡೆದಿದೆ. ಬಂದರು ಠಾಣೆಯ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಮತ್ತು ಇಬ್ಬರು ಸಿಬಂದಿ ತಪಾಸಣೆ ನಿರತರಾಗಿದ್ದರು. ಈ ವೇಳೆ, ಬೈಕಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಯೊಬ್ಬ ಮುಖ್ಯ ಪೇದೆ ಗಣೇಶ್ ಕಾಮತ್ ಮೇಲೆ ಹಲ್ಲೆ ಮಾಡಿದ್ದಾನೆ. ಗಣೇಶ್ ಕಾಮತ್ ಕೈಗೆ ತಲವಾರು ಏಟು ಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಮತ್, ಅಪಾಯದಿಂದ ಪಾರಾಗಿದ್ದಾರೆ.
ಬಂದರು ಠಾಣೆ ವ್ಯಾಪ್ತಿಯಲ್ಲೇ ಘಟನೆ ನಡೆದಿದ್ದು ಯಾವುದೋ ದ್ವೇಷದಿಂದ ಹಲ್ಲೆ ನಡೆಸಿರುವ ಸಾಧ್ಯತೆಯಿದೆ. ಆರೋಪಿಯನ್ನು ಪೊಲೀಸರು ಹುಡುಕಾಡುತ್ತಿದ್ದಾರೆ. ಆರೋಪಿ ಸ್ಥಳೀಯನೇ ಆಗಿರುವ ಬಗ್ಗೆ ಶಂಕೆಯಿದೆ.
ಮೂರು ವರ್ಷಗಳ ಹಿಂದೆಯೂ ಹಲ್ಲೆ
ಕರ್ತವ್ಯದಲ್ಲಿದ್ದ ಪೊಲೀಸ್ ಮೇಲೆ ಈ ಹಿಂದೆಯೂ ಹಲ್ಲೆ ನಡೆದಿತ್ತು. 2017, ಎಪ್ರಿಲ್ 5ರಂದು ಉರ್ವಾ ಠಾಣೆಯ ಎಎಸ್ಐ ಐತಪ್ಪ ಎಂಬವರ ಮೇಲೆ ಲೇಡಿಹಿಲ್ ಸರ್ಕಲ್ ನಲ್ಲಿ ಹಲ್ಲೆ ನಡೆದಿತ್ತು. ರಾತ್ರಿ ವೇಳೆ ಕರ್ತವ್ಯದಲ್ಲಿದ್ದ ಐತಪ್ಪ ಅವರಿಗೆ ನಸುಕಿನಲ್ಲಿ ದಾಳಿ ನಡೆದಿತ್ತು. ಬೈಕಿನಲ್ಲಿ ಬಂದಿದ್ದ ಇಬ್ಬರು ಕಬ್ಬಿಣದ ರಾಡ್ ನಲ್ಲಿ ಹೊಡೆದು ಹಲ್ಲೆ ನಡೆಸಿದ್ದರು.
Video:
A Head Constable of Bunder police station Ganesh Kanath was attacked by a Motor-Cycle Brone miscreant while he was on duty near New Chitra Talkies near cart street in Mangalore.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 05:39 pm
HK News Staffer
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm