ಬ್ರೇಕಿಂಗ್ ನ್ಯೂಸ್
16-12-20 01:57 pm Mangalore Correspondent ಕರಾವಳಿ
ಮಂಗಳೂರು, ಡಿ.16: ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಒಬ್ಬರಿಗೆ ದುಷ್ಕರ್ಮಿಯೊಬ್ಬ ತಲವಾರಿನಲ್ಲಿ ಕಡಿದು ಪರಾರಿಯಾದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ಮಂಗಳೂರಿನ ರಥಬೀದಿ ಬಳಿಯ ನ್ಯೂ ಚಿತ್ರಾ ಟಾಕೀಸ್ ಮುಂಭಾಗದಲ್ಲಿ ಘಟನೆ ನಡೆದಿದೆ. ಬಂದರು ಠಾಣೆಯ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಮತ್ತು ಇಬ್ಬರು ಸಿಬಂದಿ ತಪಾಸಣೆ ನಿರತರಾಗಿದ್ದರು. ಈ ವೇಳೆ, ಬೈಕಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಯೊಬ್ಬ ಮುಖ್ಯ ಪೇದೆ ಗಣೇಶ್ ಕಾಮತ್ ಮೇಲೆ ಹಲ್ಲೆ ಮಾಡಿದ್ದಾನೆ. ಗಣೇಶ್ ಕಾಮತ್ ಕೈಗೆ ತಲವಾರು ಏಟು ಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಮತ್, ಅಪಾಯದಿಂದ ಪಾರಾಗಿದ್ದಾರೆ.
ಬಂದರು ಠಾಣೆ ವ್ಯಾಪ್ತಿಯಲ್ಲೇ ಘಟನೆ ನಡೆದಿದ್ದು ಯಾವುದೋ ದ್ವೇಷದಿಂದ ಹಲ್ಲೆ ನಡೆಸಿರುವ ಸಾಧ್ಯತೆಯಿದೆ. ಆರೋಪಿಯನ್ನು ಪೊಲೀಸರು ಹುಡುಕಾಡುತ್ತಿದ್ದಾರೆ. ಆರೋಪಿ ಸ್ಥಳೀಯನೇ ಆಗಿರುವ ಬಗ್ಗೆ ಶಂಕೆಯಿದೆ.
ಮೂರು ವರ್ಷಗಳ ಹಿಂದೆಯೂ ಹಲ್ಲೆ
ಕರ್ತವ್ಯದಲ್ಲಿದ್ದ ಪೊಲೀಸ್ ಮೇಲೆ ಈ ಹಿಂದೆಯೂ ಹಲ್ಲೆ ನಡೆದಿತ್ತು. 2017, ಎಪ್ರಿಲ್ 5ರಂದು ಉರ್ವಾ ಠಾಣೆಯ ಎಎಸ್ಐ ಐತಪ್ಪ ಎಂಬವರ ಮೇಲೆ ಲೇಡಿಹಿಲ್ ಸರ್ಕಲ್ ನಲ್ಲಿ ಹಲ್ಲೆ ನಡೆದಿತ್ತು. ರಾತ್ರಿ ವೇಳೆ ಕರ್ತವ್ಯದಲ್ಲಿದ್ದ ಐತಪ್ಪ ಅವರಿಗೆ ನಸುಕಿನಲ್ಲಿ ದಾಳಿ ನಡೆದಿತ್ತು. ಬೈಕಿನಲ್ಲಿ ಬಂದಿದ್ದ ಇಬ್ಬರು ಕಬ್ಬಿಣದ ರಾಡ್ ನಲ್ಲಿ ಹೊಡೆದು ಹಲ್ಲೆ ನಡೆಸಿದ್ದರು.
Video:
A Head Constable of Bunder police station Ganesh Kanath was attacked by a Motor-Cycle Brone miscreant while he was on duty near New Chitra Talkies near cart street in Mangalore.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm