ಬ್ರೇಕಿಂಗ್ ನ್ಯೂಸ್
12-02-25 10:58 pm Mangalore Correspondent ಕರಾವಳಿ
ಮಂಗಳೂರು, ಫೆ.12: ಇತ್ತೀಚೆಗಷ್ಟೇ ಮಂಗಳೂರಿನ ಹಲವು ಕಡೆಯ ಪ್ರತಿಷ್ಠಿತ ಶಾಲೆಗಳಿಗೆ ಇಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಆನಂತರ, ಪೊಲೀಸರು ತಪಾಸಣೆ ನಡೆಸಿದರೂ, ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿರಲಿಲ್ಲ. ಇದೀಗ ಮತ್ತೆ ಸುರತ್ಕಲ್ ಠಾಣೆ ವ್ಯಾಪ್ತಿಯ ರಾಯನ್ ಇಂಟರ್ನ್ಯಾಶನಲ್ ಸ್ಕೂಲ್ ಮತ್ತು ಪಾಂಡೇಶ್ವರ ಠಾಣೆ ವ್ಯಾಪ್ತಿಯ ಪ್ರೆಸಿಡೆನ್ಸಿ ಶಾಲೆಗಳಿಗೆ ಬೆದರಿಕೆ ಸಂದೇಶ ಹಾಕಲಾಗಿದೆ.
ಐಇಡಿ ಬಳಸಿ ಮಾನವ ಸಹಿತ ಸುಸೈಡ್ ಬಾಂಬ್ ದಾಳಿ ನಡೆಸುವ ಬೆದರಿಕೆ ಒಡ್ಡಲಾಗಿದೆ. ಎರಡೂ ಕಡೆಯ ಶಾಲೆಗಳಲ್ಲಿ ಪೊಲೀಸರು, ಬಾಂಬ್ ಸ್ಕ್ವಾಡ್ ಗಳು ತಪಾಸಣೆ ನಡೆಸಿದ್ದು, ಸಂಶಯಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಸುರತ್ಕಲ್ ಪೊಲೀಸರ ಪ್ರಕಾರ, ರಾಯನ್ ಸ್ಕೂಲಿಗೆ ಅಣ್ಣಾ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿನಿ ಇತ್ತೀಚೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉಲ್ಲೇಖಿಸಿ ಬೆದರಿಕೆ ಒಡ್ಡಲಾಗಿದ್ಯಂತೆ. ಈ ಸ್ಕೂಲಿಗೂ ಅಣ್ಣಾ ಯುನಿವರ್ಸಿಟಿಗೂ ಏನು ಸಂಬಂಧ ಅಂತ ಸಂದೇಶದಲ್ಲಿ ತಿಳಿಸಿಲ್ಲ. ಫೆ.11ರ ಮಧ್ಯಾಹ್ನ 1.30ರ ಸುಮಾರಿಗೆ ಎರಡೂ ಕಡೆ ಇಮೇಲ್ಗಳು ಬಂದಿದ್ದವು.
ಇತ್ತೀಚೆಗೆ ಮಂಗಳೂರಿನ ನೀರುಮಾರ್ಗದ ಕೇಂಬ್ರಿಜ್ ಸ್ಕೂಲ್, ಪ್ರೆಸಿಡೆನ್ಸಿ ಸೇರಿದಂತೆ ಹಲವು ಶಾಲೆಗಳಿಗೆ ಇಮೇಲ್ ಬೆದರಿಕೆ ಸಂದೇಶಗಳು ಬಂದಿದ್ದವು. ಅದೇ ದಿನ ಉಡುಪಿಯ ಕೆಲವು ಶಾಲೆಗಳಿಗೂ ಬೆದರಿಕೆ ಬಂದಿತ್ತು. ಕೆಲವು ಕಡೆ ಸಿಬಂದಿ ಮತ್ತು ಮಕ್ಕಳು ಹೊರಗೆ ಬಂದು ಗಾಬರಿಪಟ್ಟಿದ್ದರು. ಆನಂತರ, ಪೊಲೀಸರ ತಪಾಸಣೆ ಬಳಿಕ ಹುಸಿ ಕರೆ ಅನ್ನುವುದು ಪತ್ತೆಯಾಗಿತ್ತು.
Bomb hoax Threat via mail received again to two more schools in Mangalore. One to rayan school at kulai at presidency school at pandeshwar. Recently Three private schools in Mangaluru and a private residential school in Udupi received emails threatening of explosive substances on their premises. The police did a thorough check and found the threats to be hoaxes.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm