ಬ್ರೇಕಿಂಗ್ ನ್ಯೂಸ್
16-02-25 05:02 pm Mangalore Correspondent ಕರಾವಳಿ
ಮಂಗಳೂರು, ಫೆ.16: ಯುವ ಮನಸ್ಸುಗಳನ್ನು ರಂಗಭೂಮಿಯತ್ತ ಸೆಳೆಯುವ ಉದ್ದೇಶದಿಂದ ನಿರ್ದಿಗಂತ ತಂಡವು ನಾಟಕೋತ್ಸವ ನಡೆಸುತ್ತಿದ್ದು ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ‘ಸೌಹಾರ್ದದ ಬಳಿ ; ನಮ್ಮ ಕರಾವಳಿ’ ಎಂಬ ಶೀರ್ಷಿಕೆಯಡಿ ಫೆಬ್ರವರಿ 28ರಿಂದ ಮಾರ್ಚ್ 3ರವರೆಗೆ ನಾಟಕೋತ್ಸವ ನಡೆಯಲಿದೆ ಎಂದು ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ತುಳು, ಕೊಂಕಣಿ ಸೇರಿದಂತೆ ರಂಗಭೂಮಿ ನಿರ್ದೇಶಕರಿಂದ ರಚನೆಗೊಂಡಿರುವ 8 ನಾಟಕಗಳ ಪ್ರದರ್ಶನ ಇರಲಿದೆ. ಜೊತೆಗೆ, ವಿವಿಧ ರೀತಿಯ ಕಾರ್ಯಾಗಾರ, ವಿಚಾರಗೋಷ್ಠಿ, ಬೀದಿನಾಟಕಗಳನ್ನು ಆಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ. ನಾಟಕೋತ್ಸವವನ್ನು ಸಂತ ಅಲೋಶಿಯಸ್ ಕಾಲೇಜಿನ ಕುಲಪತಿ ರೆ.ಡಾ. ಪ್ರವೀಣ್ ಮಾರ್ಟಿಸ್ ಉದ್ಘಾಟಿಸಲಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಆಶಯ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ನಾಟಕೋತ್ಸವದಲ್ಲಿ ಬಿಜಾಪುರದ ಸ್ಪಿನ್ನಿಂಗ್ ಟ್ರೀ ಥಿಯೇಟರ್ ತಂಡ ಪ್ರಸ್ತುತ ಪಡಿಸಲಿರುವ ‘ಫಾರ್ ಎ ಬೈಟ್ ಆಫ್ ಫುಡ್’, ಮಂಗಳೂರು ಯಕ್ಷಮಿತ್ರರು ತಂಡದಿಂದ ‘ಕೋಟಿ ಚೆನ್ನಯ’ ಯಕ್ಷಗಾನ, ಧಾರವಾಡದ ಆಟಮಾಟ ತಂಡ ಹಾಗೂ ಮಹದೇವ ಹಡಪದ ನಿರ್ದೇಶನದ ‘ಗುಡಿಯ ನೋಡಿರಣ್ಣ’, ಸಂತ ಅಲೋಶಿಯಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ತಂಡದಿಂದ ‘ಹ್ಯಾಂಗಾನ್’ ಕೊಂಕಣಿ ನಾಟಕ, ಕೇರಳದ ಲಿಟಲ್ ಅರ್ತ್ ಸ್ಕೂಲ್ ಆಫ್ ಥಿಯೇಟರ್ ತಂಡದಿಂದ ‘ಕುಹೂ: ಆಂತಾಲಜಿ ಆನ್ ದ ರೈಲ್ಸ್’, ನಿರ್ದಿಗಂತ ತಂಡದಿಂದ ‘ರಸೀದಿ ಟಿಕೇಟ್’, ಹಾಗೂ ‘ತಿಂಡಿಗೆ ಬಂದ ತುಂಡೇರಾಯ’ ನಾಟಕಗಳು ಪ್ರದರ್ಶನಗೊಳ್ಳಲಿವೆ ಎಂದು ಪ್ರಕಾಶರಾಜ್ ವಿವರಿಸಿದ್ದಾರೆ.
ಇದೇ ವೇಳೆ, ಡಾ. ಗಣನಾಥ ಎಕ್ಕಾರು ಅವರು ‘ಬದಲಾಗುತ್ತಿರುವ ಯಕ್ಷಗಾನದ ಸ್ವರೂಪ’ ಎಂಬ ಬಗ್ಗೆ ವಿಷಯ ಮಂಡನೆ ಮಾಡಲಿದ್ದಾರೆ. ಸಂತ ಅಲೋಶಿಯಸ್ ಕಾಲೇಜು ತಂಡದಿಂದ ಕಾಲೇಜು ಬ್ಯಾಂಡ್ ಜ್ಯಾಮಿಂಗ್ ನಡೆಯಲಿದೆ. ಡಾ. ಮೋಹನ್ ಕುಂಟಾರ್ ಅವರು ‘ಕರಾವಳಿಯ ಭಾಷಾ ಸಂಬಂಧದ ಕೊಡುಕೊಳ್ವಿಕೆಯ ಸ್ವರೂಪ’ ವಿಷಯದಲ್ಲಿ ಮಾತನಾಡಲಿದ್ದಾರೆ. ಶಾರದಾ ಜಿ. ಬಂಗೇರ ಅವರು ಪಾಡ್ದನ ಹಾಡಲಿದ್ದು, ಐರಿನ್ ರೆಬಲ್ಲೋ ಮತ್ತು ತಂಡದಿಂದ ವೊವಿಯೊ ಕೊಂಕಣಿ ಹಾಡು ಹಾಗೂ ಸೇಸು ಗೌಡ ಕಲಾ ಟ್ರಸ್ಟ್ನಿಂದ ಕುಡುಬಿ ಹಾಡುಗಳು ಪ್ರಸ್ತುತಗೊಳ್ಳಲಿವೆ. ವೆಂಕಟರಮಣ ಐತಾಳ್ರವರು ‘ಸ್ಥಳೀಯ ಚರಿತ್ರೆಗಳು ಮತ್ತು ಕುಸಿಯುತ್ತಿರುವ ಬಹುತ್ವದ ನೆಲೆ’ ವಿಷಯದ ಕುರಿತು ಮಾತನಾಡಲಿದ್ದಾರೆ. ಅಲ್ಲದೆ, ಕರಗ, ಡೋಲು, ಕಾವ್ಯ ವಾಚನ ಸೇರಿದಂತೆ ಹಲವಾರು ರೀತಿಯ ಕಾರ್ಯಕ್ರಮಗಳು ನಡೆಯಲಿವೆ.
“ನಾಟಕೋತ್ಸವ ಸಮಾರೋಪವು ಮಾರ್ಚ್ 3ರ ಸಂಜೆ ನಡೆಯಲಿದ್ದು ಕಾರ್ಯಕ್ರಮದಲ್ಲಿ ಮಲಯಾಳಂ ನಟಿ ಪಾರ್ವತಿ ತಿರುವೊತ್ತು ಭಾವಹಿಸಲಿದ್ದಾರೆ. ಅಂದು, ನಿರ್ದಿಗಂತ ತಂಡದಿಂದ ಅಮಿತ್ ರೆಡ್ಡಿ ನಿರ್ದೇಶನದ ‘ಮೈ ಮನಗಳ ಸುಳಿಯಲ್ಲಿ’ ನಾಟಕ ಪ್ರದರ್ಶನಗೊಳ್ಳಲಿದೆ.
Nirdiganta, an incubation centre for theatre and arts established by actor Prakash Raj in K. Shetihalli, Srirangapatna, will host the ‘Nirdiganta Utsava’ in Mangaluru from February 28 to March 3.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm