ಬ್ರೇಕಿಂಗ್ ನ್ಯೂಸ್
16-12-20 10:42 pm Headline Karnataka News Network ಕರಾವಳಿ
ಮಂಜೇಶ್ವರ, ಡಿ.16: ಮಂಜೇಶ್ವರ ಬ್ಲಾಕ್ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಯುಡಿಎಫ್ ಸಮಬಲದ ಸಾಧನೆ ಮಾಡಿದ್ದು ಯಾರೇ ಅಧಿಕಾರ ಪಡೆಯಲು ಇತರೇ ಮಂದಿಯನ್ನು ಅವಲಂಬಿಸಬೇಕಾದ ಅನಿವಾರ್ಯತೆಗೆ ಸಿಲುಕಿವೆ.
ಯುಡಿಎಫ್ 6 ಸ್ಥಾನಗಳನ್ನು ಗೆದ್ದರೆ, ಬಿಜೆಪಿಯೂ ಅಷ್ಟೇ ಸ್ಥಾನಗಳನ್ನು ಗೆದ್ದುಕೊಂಡಿದೆ. ಬ್ಲಾಕ್ ಪಂಚಾಯತ್ ನಲ್ಲಿ ಎಲ್ ಡಿಎಫ್ ಅನ್ನು ಹಿಂದಿಕ್ಕಿ ಹೆಚ್ಚು ಸ್ಥಾನಗಳನ್ನು ಪಡೆದಿದ್ದು ಇದೇ ಮೊದಲು. ಎಲ್ ಡಿಎಫ್ ಕೇವಲ 2 ಕಡೆ ಗೆಲುವು ಪಡೆದರೆ, ಒಂದು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಗೆಲುವು ಕಂಡಿದ್ದಾರೆ. ಬಡಾಜೆ ಡಿವಿಷನ್ ನಲ್ಲಿ ಸ್ವತಂತ್ರ ಅಭ್ಯರ್ಥಿ ಗೆಲುವು ಪಡೆದಿದ್ದಾರೆ.


ಮುಳಿಗದ್ದೆ , ಪೆರ್ಮುದೆ, ಎಣ್ಮಕಜೆ, ಪೆರ್ಲ, ಮಜಿರ್ಪಳ್ಳ, ಕಡಂಬಾರು ಡಿವಿಷನ್ನಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇಚ್ಲಾಂಗೋಡು, ಕುಂಜತ್ತೂರು, ಬಂದ್ಯೋಡು, ನಯಾಬಝಾರ್, ಉಪ್ಪಳ, ಮಂಜೇಶ್ವರ ಡಿವಿಷನ್ನಲ್ಲಿ ಯುಡಿಎಫ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ವರ್ಕಾಡಿ ಮತ್ತು ಪುತ್ತಿಗೆ ಡಿವಿಷನ್ನಲ್ಲಿ ಎಲ್ ಡಿಎಫ್ ಗೆಲುವು ಸಾಧಿಸಿದೆ.
ಮಜೀರ್ಪಳ್ಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಈ ಹಿಂದೆ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಹರ್ಷಾದ್ ವರ್ಕಾಡಿ ಅಚ್ಚರಿಯ ಸೋಲು ಕಂಡಿದ್ದಾರೆ. ಕಳೆದ ಬಾರಿ ಅವರು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಗೆಲುವು ಕಂಡಿದ್ದರು. ಹರ್ಷಾದ್ ವಿರುದ್ಧ ಈ ಬಾರಿ ಮೀಯಪದವು ನಿವಾಸಿ, ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಕೆ.ವಿ.ರಾಧಾಕೃಷ್ಣ ಗೆಲುವು ಸಾಧಿಸಿದ್ದಾರೆ. ಕಡಂಬಾರು ಕ್ಷೇತ್ರದಲ್ಲಿ ಬಿಜೆಪಿಯ ಅಶ್ವಿನಿ ಪಜ್ವ ಗೆದ್ದಿದ್ದಾರೆ.
ಅತಿ ಹೆಚ್ಚು ಸ್ಥಾನಗಳಲ್ಲಿ ಜಯ ಕಂಡಿರುವ ಬಿಜೆಪಿ ಮಂಜೇಶ್ವರ ಬ್ಲಾಕ್ ಪಂಚಾಯತ್ ನಲ್ಲಿ ಅಧಿಕಾರ ಪಡೆಯುವತ್ತ ಮುನ್ನುಗ್ಗಿದೆ. ಆದರೆ, ಅಧಿಕಾರ ಗಳಿಸುವುದು ಮಾತ್ರ ಕಷ್ಟದ ಕೆಲಸವೇ ಸರಿ.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm