ಬ್ರೇಕಿಂಗ್ ನ್ಯೂಸ್
16-12-20 10:42 pm Headline Karnataka News Network ಕರಾವಳಿ
ಮಂಜೇಶ್ವರ, ಡಿ.16: ಮಂಜೇಶ್ವರ ಬ್ಲಾಕ್ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಯುಡಿಎಫ್ ಸಮಬಲದ ಸಾಧನೆ ಮಾಡಿದ್ದು ಯಾರೇ ಅಧಿಕಾರ ಪಡೆಯಲು ಇತರೇ ಮಂದಿಯನ್ನು ಅವಲಂಬಿಸಬೇಕಾದ ಅನಿವಾರ್ಯತೆಗೆ ಸಿಲುಕಿವೆ.
ಯುಡಿಎಫ್ 6 ಸ್ಥಾನಗಳನ್ನು ಗೆದ್ದರೆ, ಬಿಜೆಪಿಯೂ ಅಷ್ಟೇ ಸ್ಥಾನಗಳನ್ನು ಗೆದ್ದುಕೊಂಡಿದೆ. ಬ್ಲಾಕ್ ಪಂಚಾಯತ್ ನಲ್ಲಿ ಎಲ್ ಡಿಎಫ್ ಅನ್ನು ಹಿಂದಿಕ್ಕಿ ಹೆಚ್ಚು ಸ್ಥಾನಗಳನ್ನು ಪಡೆದಿದ್ದು ಇದೇ ಮೊದಲು. ಎಲ್ ಡಿಎಫ್ ಕೇವಲ 2 ಕಡೆ ಗೆಲುವು ಪಡೆದರೆ, ಒಂದು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಗೆಲುವು ಕಂಡಿದ್ದಾರೆ. ಬಡಾಜೆ ಡಿವಿಷನ್ ನಲ್ಲಿ ಸ್ವತಂತ್ರ ಅಭ್ಯರ್ಥಿ ಗೆಲುವು ಪಡೆದಿದ್ದಾರೆ.


ಮುಳಿಗದ್ದೆ , ಪೆರ್ಮುದೆ, ಎಣ್ಮಕಜೆ, ಪೆರ್ಲ, ಮಜಿರ್ಪಳ್ಳ, ಕಡಂಬಾರು ಡಿವಿಷನ್ನಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇಚ್ಲಾಂಗೋಡು, ಕುಂಜತ್ತೂರು, ಬಂದ್ಯೋಡು, ನಯಾಬಝಾರ್, ಉಪ್ಪಳ, ಮಂಜೇಶ್ವರ ಡಿವಿಷನ್ನಲ್ಲಿ ಯುಡಿಎಫ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ವರ್ಕಾಡಿ ಮತ್ತು ಪುತ್ತಿಗೆ ಡಿವಿಷನ್ನಲ್ಲಿ ಎಲ್ ಡಿಎಫ್ ಗೆಲುವು ಸಾಧಿಸಿದೆ.
ಮಜೀರ್ಪಳ್ಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಈ ಹಿಂದೆ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಹರ್ಷಾದ್ ವರ್ಕಾಡಿ ಅಚ್ಚರಿಯ ಸೋಲು ಕಂಡಿದ್ದಾರೆ. ಕಳೆದ ಬಾರಿ ಅವರು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಗೆಲುವು ಕಂಡಿದ್ದರು. ಹರ್ಷಾದ್ ವಿರುದ್ಧ ಈ ಬಾರಿ ಮೀಯಪದವು ನಿವಾಸಿ, ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಕೆ.ವಿ.ರಾಧಾಕೃಷ್ಣ ಗೆಲುವು ಸಾಧಿಸಿದ್ದಾರೆ. ಕಡಂಬಾರು ಕ್ಷೇತ್ರದಲ್ಲಿ ಬಿಜೆಪಿಯ ಅಶ್ವಿನಿ ಪಜ್ವ ಗೆದ್ದಿದ್ದಾರೆ.
ಅತಿ ಹೆಚ್ಚು ಸ್ಥಾನಗಳಲ್ಲಿ ಜಯ ಕಂಡಿರುವ ಬಿಜೆಪಿ ಮಂಜೇಶ್ವರ ಬ್ಲಾಕ್ ಪಂಚಾಯತ್ ನಲ್ಲಿ ಅಧಿಕಾರ ಪಡೆಯುವತ್ತ ಮುನ್ನುಗ್ಗಿದೆ. ಆದರೆ, ಅಧಿಕಾರ ಗಳಿಸುವುದು ಮಾತ್ರ ಕಷ್ಟದ ಕೆಲಸವೇ ಸರಿ.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
26-10-25 05:38 pm
HK News Desk
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm