ಬ್ರೇಕಿಂಗ್ ನ್ಯೂಸ್
23-02-25 03:20 pm Mangalore Correspondent ಕರಾವಳಿ
ಮಂಗಳೂರು, ಫೆ.23: ಪಿಕಪ್ ವಾಹನದ ಧಾವಂತಕ್ಕೆ ಹಿಂಬದಿಗೆ ಡಿಕ್ಕಿಯಾಗಿದ್ದರಿಂದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮೂವರು ಪಾದಚಾರಿಗಳ ಮೇಲೆ ಹರಿದಿದ್ದು ಓರ್ವ ಯುವಕ ಸಾವನ್ನಪ್ಪಿದ ಘಟನೆ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಸಿಂಧನೂರಿನ ದೀಪು ಗೌಡ(45) ಸಾವನ್ನಪ್ಪಿದ ವ್ಯಕ್ತಿ. ಘಟನೆಯಲ್ಲಿ ಕೊಪ್ಪಳ ಜಿಲ್ಲೆಯ ಕರಟಗಿಯ ಪ್ರದೀಪ್ ಕೊಲ್ಕಾರ್(35), ಮಂಗಳೂರಿನ ಕೋಡಿಕೆರೆ ನಿವಾಸಿ ನಾಗರಾಜ್(37) ಗಂಭೀರ ಗಾಯಗೊಂಡಿದ್ದಾರೆ. ಕುಳಾಯಿ ಹೆದ್ದಾರಿ ಬದಿಯ ಶಂಕರ ಭವನ ಹೋಟೆಲ್ ನಲ್ಲಿ ಮೂವರು ಊಟ ಮುಗಿಸಿಕೊಂಡು ರಾಹೆ 66 ದಾಟುತ್ತಿದ್ದಾಗ ಕಾರು ಜವರಾಯನಂತೆ ಬಂದೆರಗಿದೆ.
ಉಡುಪಿ ಕಡೆಯಿಂದ ಬಂದ KA-19-AA-0746 ನಂಬರ್ನ ಪಿಕಪ್ ವಾಹನ ಮುಂದಿನಿಂದ ಸಾಗುತ್ತಿದ್ದ ಕಾರಿನ ಹಿಂಭಾಗಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಇದರಿಂದ ಕಾರು ರಸ್ತೆಯ ಎಡ ಬದಿಗೆ ತಳ್ಳಲ್ಪಟ್ಟು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ದೀಪು ಗೌಡ, ಪ್ರದೀಪ್ ಮತ್ತು ನಾಗರಾಜ್ ಎಂಬವರಿಗೆ ಡಿಕ್ಕಿಯಾಗಿದೆ. ಈ ವೇಳೆ, ಪ್ರದೀಪ್ ಮತ್ತು ನಾಗರಾಜ್ ರಸ್ತೆಗೆ ಎಸೆಯಲ್ಪಟ್ಟರೆ, ದೀಪು ಗೌಡ ಅವರನ್ನು ಕಾರು ತಳ್ಳಿಕೊಂಡು ಸಾಗಿದೆ. ದೀಪು ಗೌಡ ತಲೆಗೆ ಮತ್ತು ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಪ್ರದೀಪ್ ಮತ್ತು ನಾಗರಾಜ್ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಬಗ್ಗೆ ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore accident at surathkal, Pickup van rams over pedestrians, two injured, 45 year old killed. The deceased dhas been identified as Deepu Gowda native of Raichur.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm