Bantwal accident, Mangalore: ಚಾಲಕಿಯ ಧಾವಂತಕ್ಕೆ ಅಂಗಡಿಗೆ ನುಗ್ಗಿದ ಕಾರು ; ತನ್ನ ಪಾಡಿಗೆ ಕುಳಿತುಕೊಂಡಿದ್ದ ವೃದ್ಧ ಮಹಿಳೆ ದುರಂತ ಸಾವು ! 

25-02-25 02:34 pm       Mangalore Correspondent   ಕರಾವಳಿ

ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಅಂಗಡಿಗೆ ನುಗ್ಗಿದ್ದು ಅಂಗಡಿ ಹೊರಗಡೆ ಕುಳಿತುಕೊಂಡಿದ್ದ ವೃದ್ಧೆಯೊಬ್ಬರು ಕಾರಿನ ಹೊಡೆತಕ್ಕೆ ಸಿಲುಕಿ ದುರಂತ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮದ ಪಾಲೆದಮರ ಎಂಬಲ್ಲಿ ನಡೆದಿದೆ. 

ಮಂಗಳೂರು, ಫೆ.25 : ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಅಂಗಡಿಗೆ ನುಗ್ಗಿದ್ದು ಅಂಗಡಿ ಹೊರಗಡೆ ಕುಳಿತುಕೊಂಡಿದ್ದ ವೃದ್ಧೆಯೊಬ್ಬರು ಕಾರಿನ ಹೊಡೆತಕ್ಕೆ ಸಿಲುಕಿ ದುರಂತ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮದ ಪಾಲೆದಮರ ಎಂಬಲ್ಲಿ ನಡೆದಿದೆ. 

ಅಪಘಾತದ ಭೀಕರ ದೃಶ್ಯ ಅಂಗಡಿ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಕಾರಿನ ಧಾವಂತಕ್ಕೆ ಸಾಕ್ಷಿಯಾಗಿದೆ. ವಾಮದಪದವು ನಿವಾಸಿ ಸುಮತಿ(91) ಮೃತಪಟ್ಟ ವೃದ್ಧ ಮಹಿಳೆ. 

ಕಾರನ್ನು ಶೋಭಾ ಎಂಬವರು ಚಲಾಯಿಸುತ್ತಿದ್ದು ಅಂಗಡಿ ಮುಂದೆ ತಲುಪಿದಾಗ ನಿಯಂತ್ರಣ ಕಳೆದುಕೊಂಡು ಅಂಗಡಿಯತ್ತ ನುಗ್ಗಿ ಬಂದಿದೆ. ಮೊದಲಿಗೆ ಅಂಗಡಿಗೆ ಬಂದಿದ್ದ ಗ್ರಾಹಕ ಲೂಯಿಸ್ ಡಿಕೋಸ್ತಾ ಅವರಿಗೆ ಕಾರು ಡಿಕ್ಕಿ ಹೊಡೆದಿದ್ದು ದೂರಕ್ಕೆ ಬಿದ್ದಿದ್ದಾರೆ. ಬಳಿಕ ಅಂಗಡಿ ಮುಂದೆ ಕುಳಿತಿದ್ದ ವೃದ್ಧೆ ಸುಮತಿಗೆ ಕಾರು ನೇರವಾಗಿ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡಿದ್ದ ಸುಮತಿ ಅವರನ್ನು ಮಂಗಳೂರು ಹೊರವಲಯದ ಖಾಸಗಿ ‌ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

A heartbreaking accident occurred in Bantwal, Mangalore, where a 91-year-old woman named Sumathi lost her life after being struck by a vehicle while sitting near her son's shop. The incident has garnered significant attention, with a video of the accident circulating widely on social media.