ಬ್ರೇಕಿಂಗ್ ನ್ಯೂಸ್
25-02-25 10:58 pm Mangalore Correspondent ಕರಾವಳಿ
ಮಂಗಳೂರು, ಫೆ.25: ಸೈಬರ್ ವಂಚನೆ ಪ್ರಕರಣದ ಆರೋಪಿಗಳ ಜೊತೆಗೆ ಸುತ್ತಾಟಕ್ಕೆ ಹೋಗಿ ಪೊಲೀಸರು ಸೆಲ್ಫಿ ತೆಗೆದುಕೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಘಟನೆ ಸಂಬಂಧಿಸಿ ಉರ್ವಾ ಠಾಣೆಯ ಹೆಡ್ ಕಾನ್ಸ್ ಟೇಬಲ್ ಪೀಟರ್ ಡಿಸೋಜ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಜೊತೆಗೆ, ಒಟ್ಟು ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಇನ್ಸ್ ಪೆಕ್ಟರ್ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಮುಂದಾಗಿದ್ದಾರೆ.
ಆರೋಪಿಗಳ ಜೊತೆಗೆ ಪೊಲೀಸ್ ಸಿಬಂದಿ ಸೆಲ್ಫಿ ತೆಗೆದುಕೊಳ್ಳುವುದು ಇಲಾಖೆಯ ಶಿಸ್ತನ್ನು ಉಲ್ಲಂಘಿಸಿದಂತೆ. ಹೀಗಾಗಿ ಸೆಲ್ಫಿ ತೆಗೆದುಕೊಂಡ ಸಿಬಂದಿ ಪೀಟರ್ ಡಿಸೋಜ ಅವರನ್ನು ಇಲಾಖಾ ತನಿಖೆ ಬಾಕಿಯಿರಿಸಿ ತಕ್ಷಣಕ್ಕೆ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಸಿಸಿಬಿ ಎಸಿಪಿ ಮನೋಜ್ ನಾಯ್ಕ್ ಅವರು ಪ್ರಾಥಮಿಕ ತನಿಖೆ ನಡೆಸಿದ್ದು, ಮೇಲ್ನೋಟಕ್ಕೆ ತಪ್ಪು ಕಂಡುಬಂದ ಹಿನ್ನೆಲೆಯಲ್ಲಿ ಕ್ರಮ ಜರುಗಿಸಿದ್ದಾರೆ.
ಅಮೆಜಾನ್ ಕಂಪನಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಆರೋಪಿಗಳನ್ನು ಕಸ್ಟಡಿಗೆ ಪಡೆದ ಸಂದರ್ಭದಲ್ಲಿ ಪೊಲೀಸರು ರಾಜಸ್ಥಾನಕ್ಕೆ ತೆರಳಿದಾಗ ಸೆಲ್ಫಿ ತೆಗೆದುಕೊಂಡಿದ್ದರು ಎನ್ನಲಾಗಿದೆ. ಪ್ರಕರಣದ ತನಿಖೆಯ ಹೊಣೆಯನ್ನು ಉರ್ವಾ ಇನ್ಸ್ ಪೆಕ್ಟರ್ ವಹಿಸಿಕೊಂಡಿದ್ದರು. ಈ ವೇಳೆ, ಬೆಂಗಳೂರು ಏರ್ಪೋರ್ಟ್ ನಿಂದ ರಾಜಸ್ಥಾನದ ಜೈಪುರಕ್ಕೆ ಇತರೇ ಸಿಬಂದಿಯೊಂದಿಗೆ ವಿಮಾನದಲ್ಲಿ ತೆರಳಿದ್ದರು. ವಿಮಾನದ ಟಿಕೆಟ್ ಮೊತ್ತವನ್ನು ಉರ್ವಾ ಇನ್ಸ್ ಪೆಕ್ಟರ್ ಅವರೇ ಖಾಸಗಿಯಾಗಿ ಭರಿಸಿದ್ದರು. ಆರೋಪಿಗಳು ಟಿಕೆಟ್ ವ್ಯವಸ್ಥೆ ಮಾಡಿರಲಿಲ್ಲ.
ಇದಲ್ಲದೆ, ಪೊಲೀಸ್ ಠಾಣೆಯ ಸಿಸಿಟಿವಿಯನ್ನು ಚೆಕ್ ಮಾಡಲಾಗಿದ್ದು, ಕಸ್ಟಡಿ ಸಂದರ್ಭದಲ್ಲಿ ಠಾಣೆಯ ಲಾಕಪ್ ನಲ್ಲಿಯೇ ಆರೋಪಿಗಳನ್ನು ಇರಿಸಿಕೊಳ್ಳಲಾಗಿತ್ತು. ವಿಚಾರಣೆ ಸಲುವಾಗಿ ಮಾತ್ರ ಹೊರಗೆ ಕರೆದೊಯ್ಯಲಾಗಿತ್ತು. ಆರೋಪಿಗಳಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎನ್ನುವ ಆರೋಪದ ಬಗ್ಗೆ ಯಾವುದೇ ಸಾಕ್ಷ್ಯ ಲಭಿಸಿಲ್ಲ ಎಂದು ಎಸಿಪಿ ಮನೋಜ್ ನಾಯ್ಕ್ ಅವರು, ಕಮಿಷನರ್ ಅವರಿಗೆ ವರದಿ ನೀಡಿದ್ದಾರೆ. ಮೂಡುಬಿದ್ರೆಯ ಕಾಲೇಜು ವಿದ್ಯಾರ್ಥಿಗಳು ಠಾಣೆಗೆ ಭೇಟಿ ನೀಡಿದ್ದಾಗ, ಠಾಣೆಯೊಳಗೆ ಕುಳಿತುಕೊಂಡಿದ್ದ ಆರೋಪಿ ಎದ್ದು ನಿಂತಿದ್ದಾನೆ. ಆದರೆ ವಿದ್ಯಾರ್ಥಿಗಳಿಗೆ ಜಾಗೃತಿ ಶಿಬಿರವನ್ನು ಆರೋಪಿಯಿಂದ ಮಾಡಿಸಿರಲಿಲ್ಲ ಎಂದು ಕಮಿಷನರ್ ಸ್ಪಷ್ಟನೆ ನೀಡಿದ್ದಾರೆ.
Mangalore Police Commissioner Anupam Agrawal has suspended police constable peter dsouza and ordered disciplinary proceedings for taking a selfie with an accused arrested in a cyber crime case.
20-07-25 08:35 pm
Bangalore Correspondent
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
20-07-25 03:06 pm
Mangaluru Correspondent
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm