ಬ್ರೇಕಿಂಗ್ ನ್ಯೂಸ್
26-02-25 10:15 pm Mangalore Correspondent ಕರಾವಳಿ
ಮಂಗಳೂರು, ಫೆ.26: ಎರಡು ದಿನಗಳ ಹಿಂದೆ ಫೆ.24ರಂದು ಕುತ್ತಾರಿನಲ್ಲಿ ಕೆಲಸ ಇದೆಯೆಂದು ಹೇಳಿ ಕೋಣಾಜೆ ಗ್ರಾಮದ ತನ್ನ ಮನೆಯಿಂದ ತೆರಳಿದ್ದ ಮಹಮ್ಮದ್ ಆಸಿಫ್ (38) ಎಂಬವರು ಮರಳಿ ಬಾರದೆ ನಾಪತ್ತೆಯಾಗಿದ್ದಾರೆ ಎಂದು ಕೋಣಾಜೆ ಠಾಣೆಗೆ ದೂರು ನೀಡಲಾಗಿದೆ.
ಮಹಮ್ಮದ್ ಆಸಿಫ್ ಈ ಹಿಂದೆ ಮೂರು ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯ ಸಿದ್ಲಿಪುರ ಎಂಬಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು. ಎಂಟು ತಿಂಗಳ ಹಿಂದೆ ಇವರಿಗೆ ಮದುವೆಯಾಗಿತ್ತು. ಶಿವಮೊಗ್ಗದಲ್ಲಿ ಮಂಗಳೂರು ಮೂಲದ ಅಬ್ದುಲ್ ಅಜೀಜ್ ಎಂಬವರಿಗೆ ಸೇರಿದ ಕೆಐ ಕನೆಕ್ಷನ್ ಎಂಬವರ ಕಂಪನಿಯಲ್ಲಿ ಕಟ್ಟಡ ಕೆಲಸ ಮಾಡಿಕೊಂಡಿದ್ದರು. ಇತ್ತೀಚೆಗೆ ಇವರಿಗೆ ಮದುವೆಯಾಗಿ ಅಲ್ಲಿ ಹೋಗಿ ಬರುವುದಕ್ಕೆ ಸಮಸ್ಯೆ ಆಗಿದ್ದರಿಂದ ಕುತ್ತಾರಿನಲ್ಲಿ ಇದೇ ಕಂಪನಿಯ ಕಟ್ಟಡ ಕೆಲಸ ಇದ್ದುದರಿಂದ ಅಲ್ಲಿ ದುಡಿಯುವುದಕ್ಕೆ ಸೂಚಿಸಲಾಗಿತ್ತು.
ಅದರಂತೆ, ಹತ್ತು ದಿನಗಳಿಂದ ಕುತ್ತಾರಿನಲ್ಲಿ ಕೆಲಸಕ್ಕೆ ಹೋಗಿ ಬರುತ್ತಿದ್ದರು. ಆದರೆ ಫೆ.24ರಂದು ಬೆಳಗ್ಗೆ ಕುತ್ತಾರಿಗೆ ಕೆಲಸಕ್ಕೆಂದು ತೆರಳಿದವರು ಮರಳಿ ಬಂದಿಲ್ಲ. ಹೀಗಾಗಿ ಈತನ ತಮ್ಮ ಕೋಣಾಜೆ ಠಾಣೆಗೆ ಬಂದು ನಾಪತ್ತೆ ದೂರು ನೀಡಿದ್ದಾರೆ. ಪೊಲೀಸರು ಮೊಬೈಲ್ ಲೊಕೇಶನ್ ನೋಡಿದಾಗ, ಕೊನೆಯ ಬಾರಿಗೆ ಶಿವಮೊಗ್ಗದಲ್ಲಿ ಕಾಣಿಸಿದ್ದು ಆನಂತರ ಸ್ವಿಚ್ ಆಫ್ ಆಗಿದೆ. ಹೀಗಾಗಿ ಯಾರಾದರೂ ಮಹಮ್ಮದ್ ಆಸಿಫ್ ನನ್ನು ನೋಡಿದರೆ 0824-2220800, 220536 ಅಥವಾ 9480802350 ನಂಬರಿಗೆ ಕರೆ ಮಾಡಿ ತಿಳಿಸಲು ಕೋಣಾಜೆ ಪೊಲೀಸರು ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಪತ್ತೆ
ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ (17) ನಾಪತ್ತೆಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್(17) ನಾಪತ್ತೆಯಾದ ವಿದ್ಯಾರ್ಥಿ. ಫೆ.25ರಂದು ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ದೇವಸ್ಥಾನಕ್ಕೂ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದಾನೆ. ಬಳಿಕ ಹುಡುಕಾಡಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ರೈಲ್ವೇ ಹಳಿಯಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
The Mangalore Police are seeking public assistance in locating two missing individuals: Mohammad Asif (38 years old) - Last seen in Konaje. Diganth (17 years old) - A student pursuing his PUC, last seen in Farangipete.
If you have any information regarding their whereabouts, please contact the authorities.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm