ಬ್ರೇಕಿಂಗ್ ನ್ಯೂಸ್
27-02-25 03:11 pm Mangalore Correspondent ಕರಾವಳಿ
ಬಂಟ್ವಾಳ, ಫೆ.27 : ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬವರ ಪುತ್ರ, ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿ ಎರಡು ದಿನ ಕಳೆದರೂ ಆತನ ಬಗ್ಗೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆಂದು ಸ್ಥಳೀಯ ಗ್ರಾಮಸ್ಥರು ಫರಂಗಿಪೇಟೆ ಪೊಲೀಸ್ ಹೊರ ಠಾಣೆಗೆ ಗುರುವಾರ ಬೆಳಗ್ಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಈ ಸಂದರ್ಭ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದ ಪ್ರತಿಭಟನಕಾರರು ಮುಂದಿನ 24 ಗಂಟೆಯ ಒಳಗಾಗಿ ಬಾಲಕನನ್ನು ಪತ್ತೆ ಮಾಡಬೇಕು, ತಪ್ಪಿದ್ದಲ್ಲಿ ಮತ್ತೆ ಪ್ರತಿಭಟನೆ ನಡೆಸುತ್ತೇವೆ, ಶನಿವಾರ ಫರಂಗಿಪೇಟೆ ಬಂದ್ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಇದೇ ವೇಳೆ, ಎಡಿಷನಲ್ ಎಸ್ಪಿ ರಾಜೇಂದ್ರ ಅವರ ಜೊತೆ ಪ್ರತಿಭಟನಕಾರರು ಮಾತುಕತೆ ನಡೆಸಿದರು.



ಬಳಿಕ ಫರಂಗಿಪೇಟೆಯ ಆಂಜನೇಯ ದೇವಸ್ಥಾನದಲ್ಲಿ ಗ್ರಾಮಸ್ಥರು ಸಭೆ ನಡೆಸಿ ಮಾ.1 ರಂದು ಶನಿವಾರ ಬೆಳಗ್ಗಿನಿಂದ ಫರಂಗಿಪೇಟೆಯ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಗೊಳಿಸಿ ಪ್ರತಿಭಟನೆ ಮಾಡಲು ತೀರ್ಮಾನಿಸಲಾಯಿತು. ಈ ಪ್ರತಿಭಟನೆ ಯಶಸ್ವಿಯಾಗಲು ಎಲ್ಲಾ ಸಂಘ ಸಂಸ್ಥೆಗಳು, ಸ್ಥಳೀಯ ಆರು ಗ್ರಾಮಗಳ ಗ್ರಾಮಸ್ಥರು, ವ್ಯಾಪಾರಿಗಳು, ಸಹಕಾರ ನೀಡುವಂತೆ ಕೋರಿದರು.
ಈ ಸಂದರ್ಭ ಹಿಂದು ಸಂಘಟನೆಗಳ ಪ್ರಮುಖರಾದ ಭರತ್ ಕುಮ್ಡೇಲು, ಉಮೇಶ್ ಶೆಟ್ಟಿ ಬರ್ಕೆ, ಪ್ರಸಾದ್ ಕುಮಾರ್, ಮನೋಜ್ ಆಚಾರ್ಯ ನಾಣ್ಯ, ಪದ್ಮನಾಭ ಶೆಟ್ಟಿ ಕಿದೆಬೆಟ್ಟು, ಧನರಾಜ್, ಚಂದ್ರಶೇಖರ ಗಾಂಭೀರ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರಿನ ಕಪಿತಾನಿಯೋ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ದಿಗಂತ್(17) ಫೆ.25ರಂದು ಸಂಜೆ ಆಂಜನೇಯ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಬಳಿಕ ನಾಪತ್ತೆಯಾಗಿದ್ದ. ಹುಡುಕಾಡಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ಮನೆ ಸಮೀಪದ ರೈಲ್ವೇ ಹಳಿಯಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಪೊಲೀಸರು ಬಾಲಕನ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಪೊಲೀಸ್ ಹೊರ ಠಾಣೆಗೆ ಸ್ಥಳೀಯರು ಮುತ್ತಿಗೆ ಹಾಕಿದ್ದಾರೆ.
Mangalore PUC student missing from Farangipete, residents protest over negligence of police. A 17-year-old student from Farangipete, studying in the second year of a pre-university college in Mangaluru, has gone missing.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm