ಬ್ರೇಕಿಂಗ್ ನ್ಯೂಸ್
03-03-25 08:49 pm Mangalore Correspondent ಕರಾವಳಿ
ಮಂಗಳೂರು, ಮಾ.3: ಶಕ್ತಿನಗರದಲ್ಲಿ ಮಂದಿರದ ಬ್ರಹ್ಮಕಲಶಕ್ಕೆ ಹೋಗಿದ್ದಾಗ ಕಾಂಗ್ರೆಸ್ಸಿಗರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ವಿರುದ್ಧ ಸುಳ್ಳು ಪ್ರಕರಣ ದಾಖಲು ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಪ್ರೆಸ್ ಮೀಟ್ ನಲ್ಲಿ ಕುಳಿತು ಶಾಸಕರು ಹಲ್ಲೆ ನಡೆಸಿದ್ದಾರೆ ಎಂದು ಹೇಳುವ ಬದಲು ದೂರು ಕೊಟ್ಟ ವ್ಯಕ್ತಿಯೇ, ನಾವು ನೀವೆಲ್ಲರೂ ನಂಬುವ ಕೊರಗಜ್ಜನ ಸನ್ನಿಧಿಗೆ ಅಥವಾ ಕದ್ರಿ ದೇವಸ್ಥಾನಕ್ಕೆ ಬಂದು ಆಣೆ ಪ್ರಮಾಣ ಮಾಡಲು ಸಿದ್ಧರಿದ್ದಾರೆಯೇ ? ದೈವ, ದೇವರುಗಳ ಮೇಲೆ ನಂಬಿಕೆಯಿದ್ದರೆ ಸತ್ಯ ಪ್ರಮಾಣಕ್ಕೆ ಬರಲಿ. ನಮ್ಮ ಶಾಸಕರು ಯಾವುದೇ ಆಣೆ ಪ್ರಮಾಣಕ್ಕೆ ಸಿದ್ಧರಿದ್ದಾರೆ ಎಂದು ಬಿಜೆಪಿ ವಕ್ತಾರ ರಾಜಗೋಪಾಲ್ ರೈ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಕ್ತಿನಗರದ ಕೃಷ್ಣಮಂದಿರದಲ್ಲಿ ನಡೆಯುತ್ತಿದ್ದ ಬ್ರಹ್ಮಕಲಶೋತ್ಸವಕ್ಕೆ ಶಾಸಕರು ಬಂದ ಸಂದರ್ಭದಲ್ಲಿ ಒಂದಷ್ಟು ತಮಾಷೆಯ ಮಾತುಕತೆಗಳು ಆಗಿದ್ದವು. ಶಾಸಕರು ಅದಕ್ಕೆ ನಯವಾಗಿಯೇ ಉತ್ತರಿಸಿ ಕಾರ್ಯಕ್ರಮ ಮುಗಿಸಿ ಹೊರಡುವ ವೇಳೆ ಕೆಲವೊಂದು ಕಾಂಗ್ರೆಸ್ಸಿಗರು "ಶಾಸಕರನ್ನು ಬಿಡಬಾರದು, ಮುತ್ತಿಗೆ ಹಾಕಬೇಕು" ಎಂದು ಜನರಲ್ಲಿ ಗೊಂದಲ ಸೃಷ್ಟಿಸಿದ್ದಾರೆ. ಆನಂತರ, ಕಾಂಗ್ರೆಸ್ಸಿಗನೊಬ್ಬ ತನ್ನ ಶರ್ಟ್ ತಾನೇ ಹರಿದುಕೊಂಡು, ಆಸ್ಪತ್ರೆಗೆ ಹೋಗಿ ಮಲಗಿ ಶಾಸಕರ ವಿರುದ್ಧವೇ ದೂರು ನೀಡಿ ಪ್ರಕರಣ ದಾಖಲು ಮಾಡಿದ್ದಾರೆ.
ಇವತ್ತು ಪ್ರೆಸ್ ಮೀಟ್ ಮಾಡಿದ ಪದ್ಮರಾಜ್, ಹರೀಶ್ ಕುಮಾರ್, ಪ್ರಕಾಶ್ ಸಾಲ್ಯಾನ್ ಯಾರೂ ಸಹ ಆ ಸಂದರ್ಭದಲ್ಲಿ ಇರಲಿಲ್ಲ. ಆದರೂ ಸಹ ಇವರೆಲ್ಲರೂ ಬಾಯಿಗೆ ಬಂದ ಹಾಗೆ ಹೇಳಿಕೆಯನ್ನು ಕೊಡುತ್ತಿದ್ದಾರೆ. ಶಾಸಕರು ತಮ್ಮ ಭಾಷಣದಲ್ಲಿ ಪ್ರಚೋದನೆ ಮಾಡಿದರು ಎಂದು ಒಬ್ಬರು ಹೇಳಿದರೆ, ಹಲ್ಲೆಗೊಳಗಾದ ಪರಿಶಿಷ್ಟ ಸಮುದಾಯದ ವ್ಯಕ್ತಿ ಅಲ್ಲಿ ಇರಲೇ ಇಲ್ಲ ಎಂದು ಇನ್ನೊಬ್ಬರು ಹೇಳುತ್ತಾರೆ. ಅವರ ಹೇಳಿಕೆಗಳಲ್ಲೇ ಗೊಂದಲ ಇಟ್ಟುಕೊಂಡು ಪ್ರೆಸ್ ಮೀಟ್ ಮಾಡುತ್ತಾರೆಂದರೆ ಇವರಿಗೆ ಮಾನ ಮರ್ಯಾದೆ ಇದೆಯಾ.?
ನಮ್ಮ ಪ್ರಶ್ನೆ ಇಷ್ಟೇ, ವಿನಾಕಾರಣ ನಮ್ಮ ಶಾಸಕರ ಮೇಲೆ ಸುಳ್ಳು ಪ್ರಕರಣ ದಾಖಲು ಮಾಡಿದ್ದು ಏಕೆ? ಇವತ್ತು ಕ್ಷೇತ್ರದ ಒಬ್ಬ ಜನಪ್ರಿಯ ಶಾಸಕರ ಮೇಲೆಯೇ ಸುಳ್ಳು ಕೇಸು ದಾಖಲಿಸುತ್ತಾರೆಂದರೆ, ಇನ್ನು ಸಾಮಾನ್ಯ ಜನರ ಗತಿ ಏನು? ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಕಾನೂನನ್ನು ಹೇಗೆ ದುರುಪಯೋಗ ಪಡೆಸಿಕೊಳ್ಳುತ್ತಿದೆ ಎಂಬುದಕ್ಕೆ ಇದು ಸಾಕ್ಷಿ. ಈ ಹಿಂದೆ ನಮ್ಮ ಸರ್ಕಾರವೂ ಅಧಿಕಾರದಲ್ಲಿ ಇತ್ತು. ಆದರೆ ವಿರೋಧ ಪಕ್ಷಗಳ ಯಾವ ನಾಯಕರ ಮೇಲೂ ಇಂತಹ ಕುತಂತ್ರ ಬುದ್ಧಿ ತೋರಿಸಿಲ್ಲ. ಆದರೂ ಕಾಂಗ್ರೆಸ್ಸಿನ ಇಂತಹ ಕುತಂತ್ರಗಳನ್ನು ನಾವು ಕಾನೂನು ಮೂಲಕವೇ ಎದುರಿಸುತ್ತೇವೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮೋಹನ್ ರಾಜ್, ಅರುಣ್ ಜಿ ಶೇಟ್, ಕಿಶೋರ್ ಕೊಟ್ಟಾರಿ, ಶಕೀಲಾ ಕಾವ, ವನಿತಾ ಪ್ರಸಾದ್ ಉಪಸ್ಥಿತರಿದ್ದರು.
The Bharatiya Janata Party (BJP) has accused the Congress government in Karnataka of orchestrating false cases against BJP leaders, including MLAs, as part of a political vendetta. BJP spokesperson Raj Gopal Rai alleged that the recent case against MLA Vedavyas Kamath was fabricated with the intention of maligning him.
05-04-25 10:17 pm
HK News Desk
HD Kumaraswamy, Congress, D K Shivakumar: ಮಹಮ...
05-04-25 09:43 pm
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಕಾಂ...
05-04-25 08:12 pm
BJP Yatnal; ಬಿಜೆಪಿಯಿಂದ ಉಚ್ಚಾಟನೆಗೊಂಡ ಶಾಸಕ ಬಸನಗ...
05-04-25 02:47 pm
Kalaburagi Accident Mini Bus and Truck: ಕಲಬುರ...
05-04-25 12:21 pm
04-04-25 09:29 pm
HK News Desk
Waqf Controversy, BJP, Kharge: ವಕ್ಫ್ ಆಸ್ತಿ ಕ...
04-04-25 08:50 pm
Waqf Amendment Bill: ಸಂಸತ್ತಿನ ಎರಡೂ ಸದನಗಳಲ್ಲಿ...
04-04-25 12:44 pm
Mangalore MP Brijesh Chowta: ನಿವೃತ್ತ ಸೈನಿಕರ ಅ...
03-04-25 11:10 pm
Waqf Bill, Amit Shah; ಸುದೀರ್ಘ ಚರ್ಚೆ ಬಳಿಕ ಸಂಸತ...
03-04-25 01:04 pm
05-04-25 07:49 pm
Udupi Correspondent
Mangalore Jail, Jammer, Vedavyas Kamath; ಜೈಲಿ...
05-04-25 01:16 pm
Mangalore, Thokkottu: ತೊಕ್ಕೊಟ್ಟು ಫ್ಲೈಓವರ್ ಕೆಳ...
04-04-25 11:07 pm
Mangalore Hotel Moti Mahal closed, Milagres:...
04-04-25 11:00 pm
Mangalore Bus Accident, Uppinangady: ನೀರಕಟ್ಟೆ...
04-04-25 01:39 pm
05-04-25 08:53 pm
Bangalore Correspondent
Cyber Fraud Bangalore, Plusmarts; ಫೇಸ್ಬುಕ್ ಮಹ...
05-04-25 04:27 pm
Anwar Manippady threat, Mangalore crime: ವಕ್ಪ...
04-04-25 03:03 pm
Kalaburagi Murder, Three killed: ಕೌಟುಂಬಿಕ ಕಲಹ...
03-04-25 05:01 pm
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm