ಬ್ರೇಕಿಂಗ್ ನ್ಯೂಸ್
03-03-25 08:49 pm Mangalore Correspondent ಕರಾವಳಿ
ಮಂಗಳೂರು, ಮಾ.3: ಶಕ್ತಿನಗರದಲ್ಲಿ ಮಂದಿರದ ಬ್ರಹ್ಮಕಲಶಕ್ಕೆ ಹೋಗಿದ್ದಾಗ ಕಾಂಗ್ರೆಸ್ಸಿಗರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ವಿರುದ್ಧ ಸುಳ್ಳು ಪ್ರಕರಣ ದಾಖಲು ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಪ್ರೆಸ್ ಮೀಟ್ ನಲ್ಲಿ ಕುಳಿತು ಶಾಸಕರು ಹಲ್ಲೆ ನಡೆಸಿದ್ದಾರೆ ಎಂದು ಹೇಳುವ ಬದಲು ದೂರು ಕೊಟ್ಟ ವ್ಯಕ್ತಿಯೇ, ನಾವು ನೀವೆಲ್ಲರೂ ನಂಬುವ ಕೊರಗಜ್ಜನ ಸನ್ನಿಧಿಗೆ ಅಥವಾ ಕದ್ರಿ ದೇವಸ್ಥಾನಕ್ಕೆ ಬಂದು ಆಣೆ ಪ್ರಮಾಣ ಮಾಡಲು ಸಿದ್ಧರಿದ್ದಾರೆಯೇ ? ದೈವ, ದೇವರುಗಳ ಮೇಲೆ ನಂಬಿಕೆಯಿದ್ದರೆ ಸತ್ಯ ಪ್ರಮಾಣಕ್ಕೆ ಬರಲಿ. ನಮ್ಮ ಶಾಸಕರು ಯಾವುದೇ ಆಣೆ ಪ್ರಮಾಣಕ್ಕೆ ಸಿದ್ಧರಿದ್ದಾರೆ ಎಂದು ಬಿಜೆಪಿ ವಕ್ತಾರ ರಾಜಗೋಪಾಲ್ ರೈ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಕ್ತಿನಗರದ ಕೃಷ್ಣಮಂದಿರದಲ್ಲಿ ನಡೆಯುತ್ತಿದ್ದ ಬ್ರಹ್ಮಕಲಶೋತ್ಸವಕ್ಕೆ ಶಾಸಕರು ಬಂದ ಸಂದರ್ಭದಲ್ಲಿ ಒಂದಷ್ಟು ತಮಾಷೆಯ ಮಾತುಕತೆಗಳು ಆಗಿದ್ದವು. ಶಾಸಕರು ಅದಕ್ಕೆ ನಯವಾಗಿಯೇ ಉತ್ತರಿಸಿ ಕಾರ್ಯಕ್ರಮ ಮುಗಿಸಿ ಹೊರಡುವ ವೇಳೆ ಕೆಲವೊಂದು ಕಾಂಗ್ರೆಸ್ಸಿಗರು "ಶಾಸಕರನ್ನು ಬಿಡಬಾರದು, ಮುತ್ತಿಗೆ ಹಾಕಬೇಕು" ಎಂದು ಜನರಲ್ಲಿ ಗೊಂದಲ ಸೃಷ್ಟಿಸಿದ್ದಾರೆ. ಆನಂತರ, ಕಾಂಗ್ರೆಸ್ಸಿಗನೊಬ್ಬ ತನ್ನ ಶರ್ಟ್ ತಾನೇ ಹರಿದುಕೊಂಡು, ಆಸ್ಪತ್ರೆಗೆ ಹೋಗಿ ಮಲಗಿ ಶಾಸಕರ ವಿರುದ್ಧವೇ ದೂರು ನೀಡಿ ಪ್ರಕರಣ ದಾಖಲು ಮಾಡಿದ್ದಾರೆ.
ಇವತ್ತು ಪ್ರೆಸ್ ಮೀಟ್ ಮಾಡಿದ ಪದ್ಮರಾಜ್, ಹರೀಶ್ ಕುಮಾರ್, ಪ್ರಕಾಶ್ ಸಾಲ್ಯಾನ್ ಯಾರೂ ಸಹ ಆ ಸಂದರ್ಭದಲ್ಲಿ ಇರಲಿಲ್ಲ. ಆದರೂ ಸಹ ಇವರೆಲ್ಲರೂ ಬಾಯಿಗೆ ಬಂದ ಹಾಗೆ ಹೇಳಿಕೆಯನ್ನು ಕೊಡುತ್ತಿದ್ದಾರೆ. ಶಾಸಕರು ತಮ್ಮ ಭಾಷಣದಲ್ಲಿ ಪ್ರಚೋದನೆ ಮಾಡಿದರು ಎಂದು ಒಬ್ಬರು ಹೇಳಿದರೆ, ಹಲ್ಲೆಗೊಳಗಾದ ಪರಿಶಿಷ್ಟ ಸಮುದಾಯದ ವ್ಯಕ್ತಿ ಅಲ್ಲಿ ಇರಲೇ ಇಲ್ಲ ಎಂದು ಇನ್ನೊಬ್ಬರು ಹೇಳುತ್ತಾರೆ. ಅವರ ಹೇಳಿಕೆಗಳಲ್ಲೇ ಗೊಂದಲ ಇಟ್ಟುಕೊಂಡು ಪ್ರೆಸ್ ಮೀಟ್ ಮಾಡುತ್ತಾರೆಂದರೆ ಇವರಿಗೆ ಮಾನ ಮರ್ಯಾದೆ ಇದೆಯಾ.?
ನಮ್ಮ ಪ್ರಶ್ನೆ ಇಷ್ಟೇ, ವಿನಾಕಾರಣ ನಮ್ಮ ಶಾಸಕರ ಮೇಲೆ ಸುಳ್ಳು ಪ್ರಕರಣ ದಾಖಲು ಮಾಡಿದ್ದು ಏಕೆ? ಇವತ್ತು ಕ್ಷೇತ್ರದ ಒಬ್ಬ ಜನಪ್ರಿಯ ಶಾಸಕರ ಮೇಲೆಯೇ ಸುಳ್ಳು ಕೇಸು ದಾಖಲಿಸುತ್ತಾರೆಂದರೆ, ಇನ್ನು ಸಾಮಾನ್ಯ ಜನರ ಗತಿ ಏನು? ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಕಾನೂನನ್ನು ಹೇಗೆ ದುರುಪಯೋಗ ಪಡೆಸಿಕೊಳ್ಳುತ್ತಿದೆ ಎಂಬುದಕ್ಕೆ ಇದು ಸಾಕ್ಷಿ. ಈ ಹಿಂದೆ ನಮ್ಮ ಸರ್ಕಾರವೂ ಅಧಿಕಾರದಲ್ಲಿ ಇತ್ತು. ಆದರೆ ವಿರೋಧ ಪಕ್ಷಗಳ ಯಾವ ನಾಯಕರ ಮೇಲೂ ಇಂತಹ ಕುತಂತ್ರ ಬುದ್ಧಿ ತೋರಿಸಿಲ್ಲ. ಆದರೂ ಕಾಂಗ್ರೆಸ್ಸಿನ ಇಂತಹ ಕುತಂತ್ರಗಳನ್ನು ನಾವು ಕಾನೂನು ಮೂಲಕವೇ ಎದುರಿಸುತ್ತೇವೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮೋಹನ್ ರಾಜ್, ಅರುಣ್ ಜಿ ಶೇಟ್, ಕಿಶೋರ್ ಕೊಟ್ಟಾರಿ, ಶಕೀಲಾ ಕಾವ, ವನಿತಾ ಪ್ರಸಾದ್ ಉಪಸ್ಥಿತರಿದ್ದರು.
The Bharatiya Janata Party (BJP) has accused the Congress government in Karnataka of orchestrating false cases against BJP leaders, including MLAs, as part of a political vendetta. BJP spokesperson Raj Gopal Rai alleged that the recent case against MLA Vedavyas Kamath was fabricated with the intention of maligning him.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm