Puttur suicide, Bangalore: ಹತ್ತು ತಿಂಗಳ ಹಿಂದೆ ಮದುವೆಯಾಗಿದ್ದ ಪುತ್ತೂರಿನ ಯುವತಿ ಬೆಂಗಳೂರಿನಲ್ಲಿ ಆತ್ಮಹತ್ಯೆ ; ಕೆಲಸ ಹುಡುಕಿ ಸಂಬಂಧಿಕರ ಮನೆಯಲ್ಲಿದ್ದಾಕೆ ಸಾವು ! 

03-03-25 09:59 pm       Mangalore Correspondent   ಕರಾವಳಿ

ಪುತ್ತೂರು ಮೂಲದ ನವವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಸಾವಿನ ಬಗ್ಗೆ ಹೆತ್ತವರು ಸಂಶಯ ವ್ಯಕ್ತಪಡಿಸಿದ್ದಾರೆ. 

ಪುತ್ತೂರು, ಮಾ.3 : ಪುತ್ತೂರು ಮೂಲದ ನವವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಸಾವಿನ ಬಗ್ಗೆ ಹೆತ್ತವರು ಸಂಶಯ ವ್ಯಕ್ತಪಡಿಸಿದ್ದಾರೆ. 

ಪೂಜಾಶ್ರೀ (23) ನೇಣಿಗೆ ಶರಣಾದ ಮಹಿಳೆ. ಈಕೆ ಪುತ್ತೂರಿನ ಕಾಣಿಯೂರು ಗ್ರಾಮದ ಬಾಕಿಮಾರು ನಿವಾಸಿಯಾಗಿದ್ದು, ಬೆಳ್ತಂಗಡಿಯ ಪಡಂಗಡಿ ಬರಾಯ ನಿವಾಸಿ ಪ್ರಕಾಶ್ ಎಂಬವರನ್ನು 10 ತಿಂಗಳ ಹಿಂದೆ ಮದುವೆಯಾಗಿದ್ದರು. ಕೆಲಸ ಹುಡುಕುವುದಕ್ಕಾಗಿ ಎರಡು ತಿಂಗಳ ಹಿಂದೆ ಪೂಜಾಶ್ರೀಯನ್ನು ಪತಿ ಪ್ರಕಾಶ್ ಬೆಂಗಳೂರಿನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಕಳುಹಿಸಿಕೊಟ್ಟಿದ್ದರು. 

ಸಂಬಂಧಿಕರ ಮನೆಯಲ್ಲಿದ್ದ ಪೂಜಾಶ್ರೀ ಅಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕಾಶ್ ಬರಾಯ ಗ್ರಾಮದಲ್ಲಿ ಕೃಷಿ ಮಾಡಿಕೊಂಡಿದ್ದು ಪತ್ನಿ ಕೆಲಸ ಮಾಡುವ ಹಂಬಲ ವ್ಯಕ್ತಪಡಿಸಿದ್ದಕ್ಕೆ ಬೆಂಗಳೂರಿಗೆ ಕಳಿಸಿದ್ದರು. ಆದರೆ ಸೂಕ್ತ ಕೆಲಸ ಸಿಗದ ಕಾರಣವೋ ಏನೋ ಸಾವಿಗೆ ಶರಣಾಗಿದ್ದಾರೆ.  

ಪೂಜಾಶ್ರೀ ಆತ್ಮಹತ್ಯೆಗೇನು ಕಾರಣವೆಂದು ತಿಳಿದುಬಂದಿಲ್ಲ. ಆದರೆ ದಿಢೀರ್ ಆಗಿ ಆತ್ಮಹತ್ಯೆ ಮಾಡಿಕೊಂಡಿದ್ದರ ಬಗ್ಗೆ ಹೆತ್ತವರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಬೆಂಗಳೂರಿನ ಜಾಲಹಳ್ಳಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Puttur newly wed girl commits suicide in Bangalore. The deceased has been identified as Poojashree. Police are now investigating the case