ಬ್ರೇಕಿಂಗ್ ನ್ಯೂಸ್
04-03-25 07:35 pm Mangalore Correspondent ಕರಾವಳಿ
ಮಂಗಳೂರು, ಮಾ.4 : ಪಾವೂರು ಉಳಿಯ, ಆಡಂಕುದ್ರು ಇನ್ನಿತರ ನದಿ ಮಧ್ಯದ ನಡುಗಡ್ಡೆಗಳನ್ನು ಸರಕಾರ ಅವಕಾಶ ಕೊಟ್ಟರೆ ಅತ್ಯುತ್ತಮವಾಗಿ ಪ್ರವಾಸೋದ್ಯಮ ದೃಷ್ಟಿಯಿಂದ ಅಭಿವೃದ್ಧಿ ಪಡಿಸಬಹುದು. ಈ ಹಿಂದೆ ಅಂತಹ ನಡುಗಡ್ಡೆಗಳಲ್ಲಿ ಜಿಲ್ಲಾಧಿಕಾರಿಗಳು ಖಾಸಗಿಯವರಿಗೆ ಒಂದು ಎಕರೆಯಷ್ಟು ಜಾಗವನ್ನು ಅಲಾಟ್ ಮಾಡಿದ್ದರು. ಅವರಿಗೆ ಪರಿಹಾರ ಕೊಟ್ಟು ಜಾಗವನ್ನು ಖಾಸಗಿ ಕಂಪನಿಗಳಿಗೆ ಕೊಟ್ಟರೆ ಒಳ್ಳೆಯದಿತ್ತು. ಸರ್ಕಾರ ಅನುದಾನ ಕೊಡುವುದು ಬೇಡ, ಖಾಸಗಿ ಕಂಪನಿಗಳೇ ಅಲ್ಲಿ ಹೂಡಿಕೆ ಮಾಡಲು ತಯಾರಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ.
ಅಶೋಕ್ ರೈ ಮಾತಿಗೆ ಸ್ಪೀಕರ್ ಯುಟಿ ಖಾದರ್ ಕೂಡ ದನಿಗೂಡಿಸಿದ್ದು, ಪಾವೂರು ಉಳಿಯ ದ್ವೀಪಕ್ಕೆ ತೂಗುಸೇತುವೆ ಪ್ರಸ್ತಾಪ ಇಟ್ಟಿದ್ದೆ. ಆ ಬಗ್ಗೆಯೂ ಸರಕಾರ ಆದ್ಯತೆ ನೀಡಬೇಕು ಎಂದು ಕೇಳಿಕೊಂಡರು. ಇದಕ್ಕುತ್ತರಿಸಿದ ಸಚಿವ ಎಚ್.ಕೆ ಪಾಟೀಲ್, ಶಾಸಕ ಅಶೋಕ್ ರೈಯವರದ್ದು ಉತ್ತಮ ಸಲಹೆ. ನಡುಗಡ್ಡೆಗಳನ್ನು ಅಭಿವೃದ್ಧಿ ಪಡಿಸಿ ಪ್ರವಾಸೋದ್ಯಮ ಬೆಳೆಸಲು ಆದ್ಯತೆ ನೀಡುತ್ತೇನೆ. ಇದಕ್ಕೆ ನಮ್ಮ ಇಲಾಖೆಯ ಕಾರ್ಯದರ್ಶಿಯನ್ನು ಕಳಿಸಿಕೊಟ್ಟು ಜಾಗ ಪರಿಶೀಲನೆ ಮಾಡಿಸುತ್ತೇನೆ, ಜಾಗ ಕೊಟ್ಟರೆ ಕಂಪನಿಯವರು ಅಭಿವೃದ್ಧಿ ಪಡಿಸುವುದಾದರೆ ಉತ್ತಮ ಎಂದು ಹೇಳಿದರು. ಹಾಗೆಯೇ ಪಾವೂರು ಉಳಿಯ ದ್ವೀಪಕ್ಕೆ ತೂಗು ಸೇತುವೆ ರಚಿಸುವ ವಿಚಾರದಲ್ಲಿಯೂ ಗಂಭೀರ ಕ್ರಮ ವಹಿಸುತ್ತೇವೆ ಎಂದರು.
ಗೆಜ್ಜೆಗಿರಿ ಮತ್ತು ನಂದನಬಿತ್ತಿಲು ಅಭಿವೃದ್ಧಿ ಕಾರ್ಯಕ್ಕೂ ಅನುದಾನ ನೀಡಬೇಕು ಎಂದು ಶಾಸಕ ಅಶೋಕ್ ರೈ ಕೇಳಿಕೊಂಡಿದ್ದಾರೆ. ಇದಕ್ಕುತ್ತರಿಸಿದ ಸಚಿವ ಪಾಟೀಲ್, ಮುಂದಿನ ಬಜೆಟ್ ನಲ್ಲಿ ಅದಕ್ಕೆ ಅನುದಾನ ನೀಡುವಂತೆ ಮಾಡುತ್ತೇನೆ ಎಂದರು. ಈಗಾಗಲೇ ಬಿರುಮಲೆ ಬೆಟ್ಟಕ್ಕೆ ಎರಡು ಕೋಟಿ ಅನುದಾನವನ್ನು ಕ್ಷೇತ್ರಾಭಿವೃದ್ಧಿ ಅನುದಾನದಿಂದ ಕೊಟ್ಟಿದ್ದೇನೆ. ಅದರಲ್ಲಿ ಒಂದು ಕೋಟಿ ಅನುದಾನ ಬಿಡುಗಡೆ ಆಗಿದೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಇನ್ನಷ್ಟು ಅನುದಾನದ ಅಗತ್ಯವಿದೆ ಎಂದು ಹೇಳಿದರು.
"MLA Ashok Rai Advocates for Islands to Boost Mangalore Tourism; Minister HK Patil Offers Support"
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm