ಬ್ರೇಕಿಂಗ್ ನ್ಯೂಸ್
04-03-25 07:35 pm Mangalore Correspondent ಕರಾವಳಿ
ಮಂಗಳೂರು, ಮಾ.4 : ಪಾವೂರು ಉಳಿಯ, ಆಡಂಕುದ್ರು ಇನ್ನಿತರ ನದಿ ಮಧ್ಯದ ನಡುಗಡ್ಡೆಗಳನ್ನು ಸರಕಾರ ಅವಕಾಶ ಕೊಟ್ಟರೆ ಅತ್ಯುತ್ತಮವಾಗಿ ಪ್ರವಾಸೋದ್ಯಮ ದೃಷ್ಟಿಯಿಂದ ಅಭಿವೃದ್ಧಿ ಪಡಿಸಬಹುದು. ಈ ಹಿಂದೆ ಅಂತಹ ನಡುಗಡ್ಡೆಗಳಲ್ಲಿ ಜಿಲ್ಲಾಧಿಕಾರಿಗಳು ಖಾಸಗಿಯವರಿಗೆ ಒಂದು ಎಕರೆಯಷ್ಟು ಜಾಗವನ್ನು ಅಲಾಟ್ ಮಾಡಿದ್ದರು. ಅವರಿಗೆ ಪರಿಹಾರ ಕೊಟ್ಟು ಜಾಗವನ್ನು ಖಾಸಗಿ ಕಂಪನಿಗಳಿಗೆ ಕೊಟ್ಟರೆ ಒಳ್ಳೆಯದಿತ್ತು. ಸರ್ಕಾರ ಅನುದಾನ ಕೊಡುವುದು ಬೇಡ, ಖಾಸಗಿ ಕಂಪನಿಗಳೇ ಅಲ್ಲಿ ಹೂಡಿಕೆ ಮಾಡಲು ತಯಾರಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ.
ಅಶೋಕ್ ರೈ ಮಾತಿಗೆ ಸ್ಪೀಕರ್ ಯುಟಿ ಖಾದರ್ ಕೂಡ ದನಿಗೂಡಿಸಿದ್ದು, ಪಾವೂರು ಉಳಿಯ ದ್ವೀಪಕ್ಕೆ ತೂಗುಸೇತುವೆ ಪ್ರಸ್ತಾಪ ಇಟ್ಟಿದ್ದೆ. ಆ ಬಗ್ಗೆಯೂ ಸರಕಾರ ಆದ್ಯತೆ ನೀಡಬೇಕು ಎಂದು ಕೇಳಿಕೊಂಡರು. ಇದಕ್ಕುತ್ತರಿಸಿದ ಸಚಿವ ಎಚ್.ಕೆ ಪಾಟೀಲ್, ಶಾಸಕ ಅಶೋಕ್ ರೈಯವರದ್ದು ಉತ್ತಮ ಸಲಹೆ. ನಡುಗಡ್ಡೆಗಳನ್ನು ಅಭಿವೃದ್ಧಿ ಪಡಿಸಿ ಪ್ರವಾಸೋದ್ಯಮ ಬೆಳೆಸಲು ಆದ್ಯತೆ ನೀಡುತ್ತೇನೆ. ಇದಕ್ಕೆ ನಮ್ಮ ಇಲಾಖೆಯ ಕಾರ್ಯದರ್ಶಿಯನ್ನು ಕಳಿಸಿಕೊಟ್ಟು ಜಾಗ ಪರಿಶೀಲನೆ ಮಾಡಿಸುತ್ತೇನೆ, ಜಾಗ ಕೊಟ್ಟರೆ ಕಂಪನಿಯವರು ಅಭಿವೃದ್ಧಿ ಪಡಿಸುವುದಾದರೆ ಉತ್ತಮ ಎಂದು ಹೇಳಿದರು. ಹಾಗೆಯೇ ಪಾವೂರು ಉಳಿಯ ದ್ವೀಪಕ್ಕೆ ತೂಗು ಸೇತುವೆ ರಚಿಸುವ ವಿಚಾರದಲ್ಲಿಯೂ ಗಂಭೀರ ಕ್ರಮ ವಹಿಸುತ್ತೇವೆ ಎಂದರು.
ಗೆಜ್ಜೆಗಿರಿ ಮತ್ತು ನಂದನಬಿತ್ತಿಲು ಅಭಿವೃದ್ಧಿ ಕಾರ್ಯಕ್ಕೂ ಅನುದಾನ ನೀಡಬೇಕು ಎಂದು ಶಾಸಕ ಅಶೋಕ್ ರೈ ಕೇಳಿಕೊಂಡಿದ್ದಾರೆ. ಇದಕ್ಕುತ್ತರಿಸಿದ ಸಚಿವ ಪಾಟೀಲ್, ಮುಂದಿನ ಬಜೆಟ್ ನಲ್ಲಿ ಅದಕ್ಕೆ ಅನುದಾನ ನೀಡುವಂತೆ ಮಾಡುತ್ತೇನೆ ಎಂದರು. ಈಗಾಗಲೇ ಬಿರುಮಲೆ ಬೆಟ್ಟಕ್ಕೆ ಎರಡು ಕೋಟಿ ಅನುದಾನವನ್ನು ಕ್ಷೇತ್ರಾಭಿವೃದ್ಧಿ ಅನುದಾನದಿಂದ ಕೊಟ್ಟಿದ್ದೇನೆ. ಅದರಲ್ಲಿ ಒಂದು ಕೋಟಿ ಅನುದಾನ ಬಿಡುಗಡೆ ಆಗಿದೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಇನ್ನಷ್ಟು ಅನುದಾನದ ಅಗತ್ಯವಿದೆ ಎಂದು ಹೇಳಿದರು.
"MLA Ashok Rai Advocates for Islands to Boost Mangalore Tourism; Minister HK Patil Offers Support"
02-04-26 03:56 pm
HK News Staffer
ಮಗನ ರೋಗ ಗುಣಪಡಿಸಲು ಸ್ವಂತ ಮಗಳನ್ನೇ ಕೊಂದ ತಾಯಿ! ಮ...
02-04-26 02:46 pm
ಕೈಚೀಲ ಖರೀದಿಯಲ್ಲಿ ಅವ್ಯವಹಾರ; ಐಎಎಸ್ ಅಧಿಕಾರಿ ರೋಹಿ...
01-04-26 10:51 pm
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm