ಬ್ರೇಕಿಂಗ್ ನ್ಯೂಸ್
04-03-25 10:58 pm Mangalore Correspondent ಕರಾವಳಿ
ಬಂಟ್ವಾಳ, ಮಾ.4 : ವಿಟ್ಲ ಸಮೀಪದ ಮಾಡತ್ತಡ್ಕ ಎಂಬಲ್ಲಿ ಕಲ್ಲಿನ ಕೋರೆಯಲ್ಲಿ ಭಾರೀ ಸ್ಪೋಟ ಸಂಭವಿಸಿದ್ದು ಆಸುಪಾಸಿನ 15ಕ್ಕು ಮಿಕ್ಕಿ ಮನೆಗಳಿಗೆ ಹಾನಿಯಾಗಿದೆ. ಮಧ್ಯಾಹ್ನದ ವೇಳೆಗೆ ಭಾರೀ ಸದ್ದಿನೊಂದಿಗೆ ಸ್ಫೋಟ ಸಂಭವಿಸಿದ್ದು, ಪರಿಸರದ ಐದು ಗ್ರಾಮಗಳ ಜನರು ಭಯದಿಂದ ನಲುಗಿ ಹೋಗಿದ್ದಾರೆ.
ಕಲ್ಲಿನ ಕೋರೆಯಲ್ಲಿ ಇರಿಸಲಾಗಿದ್ದ ನೂರಕ್ಕೂ ಮಿಕ್ಕಿದ ಜಿಲೆಟಿನ್ ಕಡ್ಡಿ, 50 ಕ್ಕೂ ಮಿಕ್ಕಿದ ಡಿಟೋನೇಟರ್ ಗಳು ಬಿಸಿಲಿನ ಝಳಕ್ಕೆ ಬೆಂಕಿ ಹತ್ತಿಕೊಂಡು ಬ್ಲಾಸ್ಟ್ ಆಗಿದ್ದು, ಅಕ್ಕಪಕ್ಕದ ಮನೆಗಳಿಗೆ ಹಾನಿಯಾಗಿದೆ.





ಬಂಟ್ವಾಳ ತಾಲೂಕಿನ ವಿಡ್ಲ ಮುಡ್ನೂರು ಗ್ರಾಮದ ಮಾಡತ್ತಡ್ಕ ಎಂಬಲ್ಲಿ ಘಟನೆ ಸಂಭವಿಸಿದೆ. ಸುಮಾರು 12 ವರ್ಷಗಳಿಂದ ಎನ್.ಎಸ್ ಕ್ರಶರ್ ಎನ್ನುವ ಸಂಸ್ಥೆ ಕಪ್ಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದು ಅಕ್ರಮವಾಗಿ ಸ್ಫೋಟಕಗಳನ್ನು ಸಂಗ್ರಹಿಸಲಾಗಿತ್ತು. ಸ್ಪೋಟಗೊಂಡ ಪ್ರದೇಶ ಸಂಪೂರ್ಣ ಛಿದ್ರ ಛಿದ್ರವಾಗಿ ಹೋಗಿದೆ. ಸ್ಟೋಟದ ಘರ್ಷಣೆಗೆ ಸುಮಾರು 20 ಮೀಟರ್ ದೂರದಲ್ಲಿದ್ದ ಮನೆಗಳ ಗೋಡೆಗಳಲ್ಲಿ ಬಿರುಕು ಬಿದ್ದಿದೆ, ಕಿಟಕಿ ಗಾಜುಗಳು ಪುಡಿಯಾಗಿದ್ದು, ಮೇಲ್ಛಾವಣಿ ಕುಸಿದು ಬಿದ್ದಿವೆ. ಸುಮಾರು 12 ಮನೆಗಳಿಗೆ ಹೆಚ್ಚಿನ ಹಾನಿಯಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಪರಿಸರದ ಸುಮಾರು ಇನ್ನೂರು ಮೀಟರ್ ವ್ಯಾಪ್ತಿಯಲ್ಲಿ ಪ್ರದೇಶದ ಗಿಡ ಮರಗಳ ಎಲೆಗಳು ಚೂರು ಚೂರಾಗಿ ಬಿದ್ದಿರೋದು ಸ್ಪೋಟದ ತೀವ್ರತೆಗೆ ಸಾಕ್ಷಿಯಾಗಿದೆ. ಸ್ಪೋಟದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ನೀರು ಹಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಸ್ಪೋಟಕಗಳನ್ನು ಅಕ್ರಮವಾಗಿ, ಅಜಾಗರೂಕತೆಯಿಂದ ದಾಸ್ತಾನಿರಿಸಿದ ಸಂಸ್ಥೆಯ ವಿರುದ್ಧ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕ್ರಶರ್ ಗೆ ಸಂಬಂಧಿಸಿದ ಯಂತ್ರೋಪಕರಣಗಳನ್ನೂ ವಶಪಡಿಸಿಕೊಳ್ಳಲು ಪೋಲೀಸರು ಕ್ರಮ ಕೈಗೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಯತೀಶ್ ಭೇಟಿ ನೀಡಿದ್ದು 50ಕ್ಕು ಹೆಚ್ಚು ಡಿಟೋನೇಟರ್ ಇಟ್ಟಿರುವುದು ಬಿಸಿಲ ಝಳಕ್ಕೆ ಸ್ಫೋಟಗೊಂಡಿದೆ ಎಂದು ತಿಳಿಸಿದ್ದಾರೆ.
A sudden explosion at a local quarry in Vitla resulted in significant damage to at least 15 houses in the vicinity. The blast, which occurred earlier today, sent shockwaves through the area, prompting immediate response from local authorities.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm