ಬ್ರೇಕಿಂಗ್ ನ್ಯೂಸ್
05-03-25 09:30 pm Mangalore Correspondent ಕರಾವಳಿ
ಮಂಗಳೂರು, ಮಾ.5 : ಫರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸಭೆ ಅಧಿವೇಶನದಲ್ಲಿ ಸ್ಪೀಕರ್ ಯುಟಿ ಖಾದರ್ ಅವರೇ ಪ್ರಸ್ತಾಪ ಎತ್ತಿದ್ದು, ತನಿಖೆಯ ಪ್ರಗತಿ ಎಷ್ಟರ ಮಟ್ಟಿಗೆ ಆಗಿದೆ ಎನ್ನುವ ಬಗ್ಗೆ ಸಂಬಂಧಪಟ್ಟ ಸಚಿವರಲ್ಲಿ ಪ್ರಶ್ನೆ ಎತ್ತಿದ್ದಾರೆ.
ಹೆತ್ತವರು ತುಂಬ ಚಿಂತೆಗೆ ಒಳಗಾಗಿದ್ದಾರೆ, ನನ್ನ ಕ್ಷೇತ್ರದ ಫರಂಗಿಪೇಟೆಯಲ್ಲಿ ಘಟನೆಯಾಗಿದ್ದು, ರಾಜ್ಯ ಸರಕಾರದ ತನಿಖೆ ಏನು ಮಾಡಿದೆ ಎಂದು ಸ್ಪೀಕರ್ ಕೇಳಿದ್ದಾರೆ. ಗೃಹ ಸಚಿವರ ಅನುಪಸ್ಥಿತಿಯಲ್ಲಿ ಉತ್ತರ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪಿಯುಸಿ ವಿದ್ಯಾರ್ಥಿ ದಿಗಂತ್ ಮಂಗಳೂರಿನ ಕಪಿತಾನಿಯೋ ಶಾಲೆಯಲ್ಲಿ ಕಲಿಯುತ್ತಿದ್ದು, ಫೆ.25ರಂದು ದೇವಸ್ಥಾನಕ್ಕೆಂದು ಹೇಳಿ ಹೋದಾತ ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಮಂಗಳೂರು ಎಸ್ಪಿ ಜೊತೆಗೆ ಮಾತುಕತೆ ನಡೆಸಿದ್ದು, ಏಳು ಪೊಲೀಸ್ ತಂಡಗಳನ್ನು ರಚಿಸಿದ್ದಾರೆ. ಆತ ಎಲ್ಲಿಗೆ ಹೋಗಿದ್ದಾನೆ, ಏನಾಗಿದ್ದಾನೆ ಅನ್ನುವ ಕಾಳಜಿ ಇದೆ. ಪೊಲೀಸರು ಸೂಕ್ತ ರೀತಿಯಲ್ಲಿ ತನಿಖೆ ನಡೆಸಲಿದ್ದಾರೆ ಎಂದು ಹೇಳಿದರು.
ಇದೇ ವೇಳೆ, ಇದೇ ವಿಚಾರ ಪ್ರಸ್ತಾಪಿಸಿದ ಕಾರ್ಕಳ ಶಾಸಕ ಸುನಿಲ್ ಕುಮಾರ್, ದಿಗಂತ್ ನಾಪತ್ತೆ ಪ್ರಕರಣದ ಬಗ್ಗೆ ನಮ್ಮ ಅಲ್ಲಿನ ಶಾಸಕರು ಕೂಡ ದನಿಯೆತ್ತಿದ್ದಾರೆ. ಫರಂಗಿಪೇಟೆಯನ್ನು ಬಂದ್ ಮಾಡಿ ಪ್ರತಿಭಟನೆ ಮಾಡಿದ್ದಾರೆ. ಏಳು ಪೊಲೀಸ್ ತಂಡಗಳನ್ನು ರಚಿಸಿದರೆ ಸಾಲದು, ರಾಜ್ಯ ಸರಕಾರ ಈ ಬಗ್ಗೆ ಗಂಭೀರ ಪರಿಗಣಿಸಿ ತನಿಖೆ ನಡೆಸಬೇಕಾಗಿದೆ ಎಂದು ಹೇಳಿದರು. ರಾಜ್ಯ ಸರಕಾರ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದೆ, ಆತನ ಫೋನ್ ಡಿಟೇಲ್ಸ್ ತೆಗೆದಿದ್ದಾರೆ. ಫೋನನ್ನು ಓಪನ್ ಮಾಡದಂತೆ 16 ಪಿನ್ ಹಾಕಿದ್ದ. ಯಾರಿಗೆಲ್ಲ ಕರೆ ಹೋಗಿದೆ ಎನ್ನುವ ಬಗ್ಗೆಯೂ ತನಿಖೆ ನಡೆಸಿದ್ದಾರೆ. ಈ ವಿಷಯದ ಬಗ್ಗೆ ಸ್ಪೀಕರ್ ಸಾಹೇಬ್ರು ಕೂಡ ಸ್ಪೀಕರ್ ಜೊತೆಗೆ ಸಂಪರ್ಕದಲ್ಲಿದ್ದಾರೆ. ನಾನು ವಿಷಯ ತಿಳಿದ ಕೂಡಲೇ ಸದನಕ್ಕೆ ಮಾಹಿತಿ ನೀಡುತ್ತೇನೆ ಎಂದು ಸಚಿವ ಬಂಗಾರಪ್ಪ ಹೇಳಿದ್ದಾರೆ.
ಇದೇ ವೇಳೆ, ದಿಗಂತ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಾನಾ ಆಯಾಮಗಳಿಂದ ತನಿಖೆ ನಡೆಸುತ್ತಿದ್ದರೂ, ಸರಿಯಾದ ಮಾಹಿತಿ ಲಭಿಸಿಲ್ಲ ಎನ್ನಲಾಗುತ್ತಿದೆ. ಬಂಟ್ವಾಳ ಪೊಲೀಸರು ಪ್ರಕರಣದ ಹಿಂದೆ ಬಿದ್ದಿದ್ದು ಎಸ್ಪಿ ಯತೀಶ್ ವಿಶೇಷ ಮುತುವರ್ಜಿ ವಹಿಸಿದ್ದಾರೆ. ಸ್ಥಳೀಯ ಪೊಲೀಸರು ಯಾವುದೇ ಮಾಹಿತಿ ನೀಡುತ್ತಿಲ್ಲ, ಎಸ್ಪಿ ಅವರನ್ನೇ ಕೇಳಬೇಕು ಎನ್ನುತ್ತಿದ್ದಾರೆ. ಅಂತೆ ಕಂತೆಗಳ ಬಗ್ಗೆ ಚರ್ಚೆಯಾಗುತ್ತಿದ್ದರೂ, ಸೂಕ್ತ ಮಾಹಿತಿಯನ್ನು ಪೊಲೀಸರೇ ನೀಡಬೇಕಾಗಿದೆ.
Mangalore student Diganth missing case, topic raised in assembly by speaker and MLAs.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm