ಬ್ರೇಕಿಂಗ್ ನ್ಯೂಸ್
05-03-25 09:30 pm Mangalore Correspondent ಕರಾವಳಿ
ಮಂಗಳೂರು, ಮಾ.5 : ಫರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸಭೆ ಅಧಿವೇಶನದಲ್ಲಿ ಸ್ಪೀಕರ್ ಯುಟಿ ಖಾದರ್ ಅವರೇ ಪ್ರಸ್ತಾಪ ಎತ್ತಿದ್ದು, ತನಿಖೆಯ ಪ್ರಗತಿ ಎಷ್ಟರ ಮಟ್ಟಿಗೆ ಆಗಿದೆ ಎನ್ನುವ ಬಗ್ಗೆ ಸಂಬಂಧಪಟ್ಟ ಸಚಿವರಲ್ಲಿ ಪ್ರಶ್ನೆ ಎತ್ತಿದ್ದಾರೆ.
ಹೆತ್ತವರು ತುಂಬ ಚಿಂತೆಗೆ ಒಳಗಾಗಿದ್ದಾರೆ, ನನ್ನ ಕ್ಷೇತ್ರದ ಫರಂಗಿಪೇಟೆಯಲ್ಲಿ ಘಟನೆಯಾಗಿದ್ದು, ರಾಜ್ಯ ಸರಕಾರದ ತನಿಖೆ ಏನು ಮಾಡಿದೆ ಎಂದು ಸ್ಪೀಕರ್ ಕೇಳಿದ್ದಾರೆ. ಗೃಹ ಸಚಿವರ ಅನುಪಸ್ಥಿತಿಯಲ್ಲಿ ಉತ್ತರ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪಿಯುಸಿ ವಿದ್ಯಾರ್ಥಿ ದಿಗಂತ್ ಮಂಗಳೂರಿನ ಕಪಿತಾನಿಯೋ ಶಾಲೆಯಲ್ಲಿ ಕಲಿಯುತ್ತಿದ್ದು, ಫೆ.25ರಂದು ದೇವಸ್ಥಾನಕ್ಕೆಂದು ಹೇಳಿ ಹೋದಾತ ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಮಂಗಳೂರು ಎಸ್ಪಿ ಜೊತೆಗೆ ಮಾತುಕತೆ ನಡೆಸಿದ್ದು, ಏಳು ಪೊಲೀಸ್ ತಂಡಗಳನ್ನು ರಚಿಸಿದ್ದಾರೆ. ಆತ ಎಲ್ಲಿಗೆ ಹೋಗಿದ್ದಾನೆ, ಏನಾಗಿದ್ದಾನೆ ಅನ್ನುವ ಕಾಳಜಿ ಇದೆ. ಪೊಲೀಸರು ಸೂಕ್ತ ರೀತಿಯಲ್ಲಿ ತನಿಖೆ ನಡೆಸಲಿದ್ದಾರೆ ಎಂದು ಹೇಳಿದರು.
ಇದೇ ವೇಳೆ, ಇದೇ ವಿಚಾರ ಪ್ರಸ್ತಾಪಿಸಿದ ಕಾರ್ಕಳ ಶಾಸಕ ಸುನಿಲ್ ಕುಮಾರ್, ದಿಗಂತ್ ನಾಪತ್ತೆ ಪ್ರಕರಣದ ಬಗ್ಗೆ ನಮ್ಮ ಅಲ್ಲಿನ ಶಾಸಕರು ಕೂಡ ದನಿಯೆತ್ತಿದ್ದಾರೆ. ಫರಂಗಿಪೇಟೆಯನ್ನು ಬಂದ್ ಮಾಡಿ ಪ್ರತಿಭಟನೆ ಮಾಡಿದ್ದಾರೆ. ಏಳು ಪೊಲೀಸ್ ತಂಡಗಳನ್ನು ರಚಿಸಿದರೆ ಸಾಲದು, ರಾಜ್ಯ ಸರಕಾರ ಈ ಬಗ್ಗೆ ಗಂಭೀರ ಪರಿಗಣಿಸಿ ತನಿಖೆ ನಡೆಸಬೇಕಾಗಿದೆ ಎಂದು ಹೇಳಿದರು. ರಾಜ್ಯ ಸರಕಾರ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದೆ, ಆತನ ಫೋನ್ ಡಿಟೇಲ್ಸ್ ತೆಗೆದಿದ್ದಾರೆ. ಫೋನನ್ನು ಓಪನ್ ಮಾಡದಂತೆ 16 ಪಿನ್ ಹಾಕಿದ್ದ. ಯಾರಿಗೆಲ್ಲ ಕರೆ ಹೋಗಿದೆ ಎನ್ನುವ ಬಗ್ಗೆಯೂ ತನಿಖೆ ನಡೆಸಿದ್ದಾರೆ. ಈ ವಿಷಯದ ಬಗ್ಗೆ ಸ್ಪೀಕರ್ ಸಾಹೇಬ್ರು ಕೂಡ ಸ್ಪೀಕರ್ ಜೊತೆಗೆ ಸಂಪರ್ಕದಲ್ಲಿದ್ದಾರೆ. ನಾನು ವಿಷಯ ತಿಳಿದ ಕೂಡಲೇ ಸದನಕ್ಕೆ ಮಾಹಿತಿ ನೀಡುತ್ತೇನೆ ಎಂದು ಸಚಿವ ಬಂಗಾರಪ್ಪ ಹೇಳಿದ್ದಾರೆ.
ಇದೇ ವೇಳೆ, ದಿಗಂತ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಾನಾ ಆಯಾಮಗಳಿಂದ ತನಿಖೆ ನಡೆಸುತ್ತಿದ್ದರೂ, ಸರಿಯಾದ ಮಾಹಿತಿ ಲಭಿಸಿಲ್ಲ ಎನ್ನಲಾಗುತ್ತಿದೆ. ಬಂಟ್ವಾಳ ಪೊಲೀಸರು ಪ್ರಕರಣದ ಹಿಂದೆ ಬಿದ್ದಿದ್ದು ಎಸ್ಪಿ ಯತೀಶ್ ವಿಶೇಷ ಮುತುವರ್ಜಿ ವಹಿಸಿದ್ದಾರೆ. ಸ್ಥಳೀಯ ಪೊಲೀಸರು ಯಾವುದೇ ಮಾಹಿತಿ ನೀಡುತ್ತಿಲ್ಲ, ಎಸ್ಪಿ ಅವರನ್ನೇ ಕೇಳಬೇಕು ಎನ್ನುತ್ತಿದ್ದಾರೆ. ಅಂತೆ ಕಂತೆಗಳ ಬಗ್ಗೆ ಚರ್ಚೆಯಾಗುತ್ತಿದ್ದರೂ, ಸೂಕ್ತ ಮಾಹಿತಿಯನ್ನು ಪೊಲೀಸರೇ ನೀಡಬೇಕಾಗಿದೆ.
Mangalore student Diganth missing case, topic raised in assembly by speaker and MLAs.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm