ಬ್ರೇಕಿಂಗ್ ನ್ಯೂಸ್
08-03-25 02:06 pm Mangalore Correspondent ಕರಾವಳಿ
ಮಂಗಳೂರು, ಮಾ.8 : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಕೆ ಮಾಡಬಾರದೆಂದು 5ಜಿ ಮೇಲ್ದರ್ಜೆಗೇರಿಸಿದ ಜಾಮರ್ ಅಳವಡಿಸಿದ್ದು ಸದ್ರಿ ಉಪಕರಣಗಳನ್ನು ಉಪ್ಪು ಸುರಿದು ನಿಷ್ಕ್ರಿಯಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಕೈದಿಗಳ ವಿರುದ್ದ ಜೈಲು ಅಧೀಕ್ಷಕರು ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಹಿಂದೆ 2ಜಿ/3ಜಿ ಮಾದರಿಯ 5 ಮೊಬೈಲ್ ಜಾಮರ್ ಉಪಕರಣಗಳನ್ನು ಜೈಲಿನಲ್ಲಿ ಅಳವಡಿಸಲಾಗಿತ್ತು. ಅದನ್ನು 5ಜಿ ಆಗಿ ಮೇಲ್ದರ್ಜೆಗೇರಿಸಲು ಟಿಐಸಿಎಲ್ ಸಂಸ್ಥೆಗೆ ವಹಿಸಲಾಗಿತ್ತು. ಅದರಂತೆ 5ಜಿ ಜಾಮರ್ ಉಪಕರಣಗಳನ್ನು ಅಳವಡಿಸಿದ್ದು ಅದನ್ನು ಇಲಾಖೆಯ ವಶಕ್ಕೆ ನೀಡಬೇಕಾದ ಕೆಲಸ ಮಾತ್ರ ಬಾಕಿ ಇತ್ತು. ಅಷ್ಟರಲ್ಲಿ ಜೈಲಿನ ಎ ಮತ್ತು ಬಿ ವಿಭಾಗಗಳಲ್ಲಿ ಜಾಮರ್ ಉಪಕರಣಗಳನ್ನು ಉಪ್ಪು ಸುರಿದು ಕೆಡಿಸಲು ಪ್ರಯತ್ನ ಮಾಡಿದ್ದಾರೆ.
ಈ ಬಗ್ಗೆ ಸಂಸ್ಥೆಯವರು ಕಾರಾಗೃಹ ಇಲಾಖೆ ಮಹಾನಿರ್ದೇಶಕರಿಗೆ ವರದಿ ನೀಡಿದ್ದಾರೆ. ವರದಿಯ ಆಧಾರದಲ್ಲಿ ಜೈಲಿನ ಸಿಸಿ ಕೆಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ 9 ಮಂದಿ ವಿಚಾರಣಾಧೀನ ಕೈದಿಗಳು ಜಾಮರ್ ಉಪಕರಣವನ್ನು ಕೆಡಿಸಲು ಯತ್ನಿಸಿರುವುದು ಕಂಡು ಬಂದಿದೆ ಎಂದು ಜೈಲು ಅಧೀಕ್ಷಕರು ತಿಳಿಸಿದ್ದಾರೆ. ಜಾಮರ್ ಅಳವಡಿಸಿದ್ದರಿಂದ ಸ್ಥಳೀಯವಾಗಿ ಆಸುಪಾಸಿನಲ್ಲಿ ಮೊಬೈಲ್ ಸೇವೆಯಲ್ಲಿ ವ್ಯತ್ಯಯವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜೈಲಿನಲ್ಲಿ ಮೊಬೈಲ್ ಬಳಕೆಗೆ ಅವಕಾಶ ಇಲ್ಲ. ಆದರೂ, ಕೈದಿಗಳು ಅಕ್ರಮವಾಗಿ ಮೊಬೈಲ್ ಬಳಸುತ್ತಿದ್ದಾರೆ ಎನ್ನುವುದು ಆರೋಪ. ಹೀಗಾಗಿ ಮೊಬೈಲ್ ಮೇಲೆ ಕಡಿವಾಣ ಹಾಕಲು ರೇಂಜ್ ಸಿಗದಂತೆ ಮಾಡಲು ಜೈಲು ಅಧೀಕ್ಷಕರು ಪ್ರಬಲ ಜಾಮರ್ ಹಾಕಲು ಮುಂದಾಗಿದ್ದಾರೆ.
Jammer in Mangalore jail, jail inmates try to destroy jammer, Jai authorities file case at barke station.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 06:33 pm
Mangalore Correspondent
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm