ಬ್ರೇಕಿಂಗ್ ನ್ಯೂಸ್
11-03-25 10:10 pm Mangalore Correspondent ಕರಾವಳಿ
ಮಂಗಳೂರು, ಮಾ.11: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ರೈಲಿನ ಇಂಜಿನ್ ತಾಂತ್ರಿಕ ವೈಫಲ್ಯದಿಂದ ಕೆಟ್ಟು ಹಳಿಯ ಮಧ್ಯೆ ಬಾಕಿಯಾಗಿದ್ದರಿಂದ ಮಂಗಳವಾರ ಸಂಜೆಯ ವೇಳೆಗೆ ಎರಡು ಗಂಟೆ ಕಾಲ ರೈಲು ಸಂಚಾರ ವ್ಯತ್ಯಯಗೊಂಡು ಪ್ರಯಾಣಿಕರು ತೊಂದರೆ ಅನುಭವಿಸಿದರು.
ಮಂಗಳೂರು – ಚೆನ್ನೈ ಎಕ್ಸ್ ಪ್ರೆಸ್ ರೈಲಿಗೆ ಜೋಡಿಸಲು ಯಾರ್ಡ್ ನಿಂದ ಸಂಜೆ ನಾಲ್ಕು ಗಂಟೆಯ ವೇಳೆಗೆ ಇಂಜಿನ್ ತರಿಸಲಾಗಿತ್ತು. ಇಂಜಿನ್ ಸ್ಟೇಶನ್ ಪ್ಲಾಟ್ ಫಾರಂ ಕಡೆಗೆ ಬರುತ್ತಿದ್ದಾಗಲೇ ಹಳಿಯ ಮಧ್ಯೆ ಕೆಟ್ಟು ನಿಂತಿದ್ದರಿಂದ ಹೋಗುವ ಮತ್ತು ಬರುವ ರೈಲುಗಳ ಸಂಚಾರಕ್ಕೆ ತೊಡಕಾಗಿತ್ತು. ಇದರಿಂದಾಗಿ ತಿರುವನಂತಪುರ ಮತ್ತು ಕೊಯಂಬತ್ತೂರಿನಿಂದ ಬಂದಿದ್ದ ರೈಲು ಉಳ್ಳಾಲದ ನೇತ್ರಾವತಿ ಸೇತುವೆ ಬಳಿಯಲ್ಲೇ ಬಾಕಿಯಾಗಿದ್ದವು. 4.40 ಮತ್ತು 5.20ಕ್ಕೆ ಬಂದಿದ್ದ ರೈಲುಗಳು ಸ್ಟೇಶನ್ ತಲುಪದೆ ಪ್ರಯಾಣಿಕರು ಎರಡು ಗಂಟೆ ಕಾಲ ರೈಲಿನಲ್ಲೇ ಕುಳಿತು ತೊಂದರೆ ಅನುಭವಿಸಿದರು. ಇತ್ತ ಅವರನ್ನು ಬರಮಾಡಿಕೊಳ್ಳಲು ಬಂದಿದ್ದ ಸಂಬಂಧಿಕರು ಕೂಡ ಕಾದು ಕುಳಿತುಕೊಳ್ಳುವಂತಾಗಿತ್ತು.
ಹಳಿಯಲ್ಲಿ ಇಂಜಿನ್ ಕೆಟ್ಟು ನಿಂತಿದ್ದರಿಂದ ಎಲ್ಲ ರೈಲುಗಳಿಗೂ ರೆಡ್ ಸಿಗ್ನಲ್ ನೀಡಲಾಗಿತ್ತು. ಸಂಜೆ 6.45ಕ್ಕೆ ತಾಂತ್ರಿಕ ಸಮಸ್ಯೆ ಸರಿಯಾಗಿದ್ದು, ಬಳಿಕ ಅರ್ಧಕ್ಕೆ ಉಳಿದಿದ್ದ ರೈಲುಗಳಿಗೆ ಬರುವುದಕ್ಕೆ ಅವಕಾಶ ನೀಡಲಾಯಿತು. ಅಷ್ಟರಲ್ಲಿ ಬಹುತೇಕ ಪ್ರಯಾಣಿಕರು ರೈಲಿನಿಂದ ಇಳಿದು ಹಳಿಯಲ್ಲಿ ನಡೆಯುತ್ತ ಬಂದಿದ್ದರು. ವಯಸ್ಸಾದವರು ಮಾತ್ರ ರೈಲಿನಲ್ಲಿ ಉಳಿದುಕೊಂಡಿದ್ದರು. ಇತ್ತ ಮಂಗಳೂರು ಸೆಂಟ್ರಲ್ ಕಡೆಯಿಂದ ನಿರ್ಗಮಿಸುವ ರೈಲುಗಳೂ ವಿಳಂಬವಾಗಿ ಹೊರಟಿದ್ದು, ರಾತ್ರಿ ಎಂಟು ಗಂಟೆ ವೇಳೆಗೆ ಎಲ್ಲವೂ ಸರಿಯಾಯ್ತು ಎಂದು ರೈಲ್ವೇ ಪಿಆರ್ ಓ ದೇವಾನಂದ್ ತಿಳಿಸಿದ್ದಾರೆ.
Train services at Mangalore Central Railway Station faced disruptions today due to a malfunction in the engine of the Mangalore-Chennai Central train. The incident occurred shortly after the train departed from the yard and was preparing to attach to its bogies.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 12:09 pm
HK News Staffer
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm