ಬ್ರೇಕಿಂಗ್ ನ್ಯೂಸ್
11-03-25 10:10 pm Mangalore Correspondent ಕರಾವಳಿ
ಮಂಗಳೂರು, ಮಾ.11: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ರೈಲಿನ ಇಂಜಿನ್ ತಾಂತ್ರಿಕ ವೈಫಲ್ಯದಿಂದ ಕೆಟ್ಟು ಹಳಿಯ ಮಧ್ಯೆ ಬಾಕಿಯಾಗಿದ್ದರಿಂದ ಮಂಗಳವಾರ ಸಂಜೆಯ ವೇಳೆಗೆ ಎರಡು ಗಂಟೆ ಕಾಲ ರೈಲು ಸಂಚಾರ ವ್ಯತ್ಯಯಗೊಂಡು ಪ್ರಯಾಣಿಕರು ತೊಂದರೆ ಅನುಭವಿಸಿದರು.
ಮಂಗಳೂರು – ಚೆನ್ನೈ ಎಕ್ಸ್ ಪ್ರೆಸ್ ರೈಲಿಗೆ ಜೋಡಿಸಲು ಯಾರ್ಡ್ ನಿಂದ ಸಂಜೆ ನಾಲ್ಕು ಗಂಟೆಯ ವೇಳೆಗೆ ಇಂಜಿನ್ ತರಿಸಲಾಗಿತ್ತು. ಇಂಜಿನ್ ಸ್ಟೇಶನ್ ಪ್ಲಾಟ್ ಫಾರಂ ಕಡೆಗೆ ಬರುತ್ತಿದ್ದಾಗಲೇ ಹಳಿಯ ಮಧ್ಯೆ ಕೆಟ್ಟು ನಿಂತಿದ್ದರಿಂದ ಹೋಗುವ ಮತ್ತು ಬರುವ ರೈಲುಗಳ ಸಂಚಾರಕ್ಕೆ ತೊಡಕಾಗಿತ್ತು. ಇದರಿಂದಾಗಿ ತಿರುವನಂತಪುರ ಮತ್ತು ಕೊಯಂಬತ್ತೂರಿನಿಂದ ಬಂದಿದ್ದ ರೈಲು ಉಳ್ಳಾಲದ ನೇತ್ರಾವತಿ ಸೇತುವೆ ಬಳಿಯಲ್ಲೇ ಬಾಕಿಯಾಗಿದ್ದವು. 4.40 ಮತ್ತು 5.20ಕ್ಕೆ ಬಂದಿದ್ದ ರೈಲುಗಳು ಸ್ಟೇಶನ್ ತಲುಪದೆ ಪ್ರಯಾಣಿಕರು ಎರಡು ಗಂಟೆ ಕಾಲ ರೈಲಿನಲ್ಲೇ ಕುಳಿತು ತೊಂದರೆ ಅನುಭವಿಸಿದರು. ಇತ್ತ ಅವರನ್ನು ಬರಮಾಡಿಕೊಳ್ಳಲು ಬಂದಿದ್ದ ಸಂಬಂಧಿಕರು ಕೂಡ ಕಾದು ಕುಳಿತುಕೊಳ್ಳುವಂತಾಗಿತ್ತು.
ಹಳಿಯಲ್ಲಿ ಇಂಜಿನ್ ಕೆಟ್ಟು ನಿಂತಿದ್ದರಿಂದ ಎಲ್ಲ ರೈಲುಗಳಿಗೂ ರೆಡ್ ಸಿಗ್ನಲ್ ನೀಡಲಾಗಿತ್ತು. ಸಂಜೆ 6.45ಕ್ಕೆ ತಾಂತ್ರಿಕ ಸಮಸ್ಯೆ ಸರಿಯಾಗಿದ್ದು, ಬಳಿಕ ಅರ್ಧಕ್ಕೆ ಉಳಿದಿದ್ದ ರೈಲುಗಳಿಗೆ ಬರುವುದಕ್ಕೆ ಅವಕಾಶ ನೀಡಲಾಯಿತು. ಅಷ್ಟರಲ್ಲಿ ಬಹುತೇಕ ಪ್ರಯಾಣಿಕರು ರೈಲಿನಿಂದ ಇಳಿದು ಹಳಿಯಲ್ಲಿ ನಡೆಯುತ್ತ ಬಂದಿದ್ದರು. ವಯಸ್ಸಾದವರು ಮಾತ್ರ ರೈಲಿನಲ್ಲಿ ಉಳಿದುಕೊಂಡಿದ್ದರು. ಇತ್ತ ಮಂಗಳೂರು ಸೆಂಟ್ರಲ್ ಕಡೆಯಿಂದ ನಿರ್ಗಮಿಸುವ ರೈಲುಗಳೂ ವಿಳಂಬವಾಗಿ ಹೊರಟಿದ್ದು, ರಾತ್ರಿ ಎಂಟು ಗಂಟೆ ವೇಳೆಗೆ ಎಲ್ಲವೂ ಸರಿಯಾಯ್ತು ಎಂದು ರೈಲ್ವೇ ಪಿಆರ್ ಓ ದೇವಾನಂದ್ ತಿಳಿಸಿದ್ದಾರೆ.
Train services at Mangalore Central Railway Station faced disruptions today due to a malfunction in the engine of the Mangalore-Chennai Central train. The incident occurred shortly after the train departed from the yard and was preparing to attach to its bogies.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm