ಬ್ರೇಕಿಂಗ್ ನ್ಯೂಸ್
12-03-25 06:25 pm Mangalore Correspondent ಕರಾವಳಿ
ಪುತ್ತೂರು, ಮಾ.12 : ಸುಡು ಬಿಸಿಲಿನಿಂದ ಕಂಗೆಟ್ಟಿದ್ದ ಕರಾವಳಿಯ ಕೆಲವು ಕಡೆ ಬೇಸಗೆ ಮಳೆಯಾಗಿದೆ. ಪುತ್ತೂರು ತಾಲೂಕಿನ ಸವಣೂರು, ಸುಳ್ಯ, ಕಡಬ ತಾಲೂಕಿನ ಹಲವೆಡೆ ಮಳೆಯಾಗಿದ್ದು ಸುಟ್ಟು ಹೋಗಿದ್ದ ಇಳೆಗೆ ಮಳೆರಾಯನ ಸಿಂಚನವಾಗಿದೆ.
ಕಳೆದ ಎರಡು ವಾರದಿಂದ ಬಿಸಿಲ ಬೇಗೆ ವಿಪರೀತವಾಗಿ ಏರಿಕೆಯಾಗಿದ್ದು, ಉಷ್ಣಾಂಶ 40 ಸೆಲ್ಸಿಯಸ್ ಗಡಿ ದಾಟಿದೆ. ಮಧ್ಯಾಹ್ನ ವೇಳೆಗೆ ಭಾರೀ ಬಿಸಿಲಿನ ಕಾರಣ ಜನರು ಹೊರಗೆ ಹೋಗದ ಸ್ಥಿತಿಯಾಗಿತ್ತು. ಹಿಂದೆಂದೂ ಕಂಡರಿಯದ ಬಿಸಿಲಿನ ಝಳಕ್ಕೆ ಜನರು ಹೈರಾಣಾಗಿದ್ದರು. ಇದರ ಬೆನ್ನಲೇ ಬುಧವಾರ ಸಂಜೆ ನಾಲ್ಕು ಗಂಟೆ ವೇಳೆಗೆ ಪುತ್ತೂರು, ಸುಳ್ಯ ಆಸುಪಾಸಿನಲ್ಲಿ ಮಳೆ ಸುರಿದಿದ್ದು ಇಳೆಯನ್ನು ತಂಪಾಗಿಸಿದೆ.
ಈ ಹಿಂದೆಲ್ಲ ಮಾರ್ಚ್ ತಿಂಗಳಿನಲ್ಲಿ ಕರಾವಳಿ ಕರ್ನಾಟಕದಲ್ಲಿ ಮಳೆ ಬೀಳುವ ವಾಡಿಕೆ ಇಲ್ಲ. ಆದರೆ ಈ ಬಾರಿ ಕಡಬ, ಸುಳ್ಯ , ಪುತ್ತೂರು ತಾಲೂಕಿನ ಕೆಲವಡೆ ಅರ್ಧ ಗಂಟೆ ಕಾಲ ಮಳೆ ಬಿದ್ದಿದೆ. ಕಡಬ ತಾಲೂಕಿನ ಸವಣೂರು, ಚಾರ್ವಾಕದಲ್ಲಿ ಅರ್ಧ ಗಂಟೆಗೂ ಹೆಚ್ಚು ಮಳೆಯಾಗಿದೆ. ಪುತ್ತೂರು ಪೇಟೆಯಲ್ಲಿ ಹನಿ ಮಳೆಯಾದರೆ ಕೆಲವು ಕಡೆ ಸಿಡಿಲು ಸಹಿತ ಮಳೆಯಾಗಿದೆ. ಗ್ರಾಮೀಣ ಭಾಗದಲ್ಲಿ ಸಾಧಾರಣ ಮಳೆ ಸುರಿದಿದೆ.
ದಿಢೀರ್ ಸುರಿದ ಮಳೆಯಿಂದಾಗಿ, ಆಂಗಳದಲ್ಲಿ ಅಡಿಕೆ ಒಣಗಿಸಲು ಹಾಕಿದ ಕೃಷಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಕಾಲಿಕ ಮಳೆ ಗೇರು, ಅಡಿಕೆ ಕೃಷಿಗೆ ಮಾರಕವಾಗಿದ್ದು, ಹಿಂಗಾರದಲ್ಲಿ ನೀರು ನಿಂತರೆ ನಾಳೆಯ ಬಿಸಿಲಿಗೆ ಕರಟಿ ಹೋಗುವ ಸಾಧ್ಯತೆಯಿದೆ. ಎಳೆಯ ಅಡಿಕೆ ಉದುರಿ ಬೀಳುವ ಸಾಧ್ಯತೆ ಇರುತ್ತದೆ.
ಭಾರತೀಯ ಹವಾಮಾನ ಇಲಾಖೆ ಮಾರ್ಚ್ 11 ರಿಂದ 4 ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಈಗಲೇ ಬಿಸಿಲು ಹೆಚ್ಚಾಗಿರುವುದರಿಂದ ಎಪ್ರಿಲ್ ತಿಂಗಳಿನಲ್ಲಿ ಬಹುತೇಕ ಪೂರ್ವ ಮುಂಗಾರು ರಾಜ್ಯಕ್ಕೆ ಕಾಲಿಡುವ ಸಾಧ್ಯತೆ ಹೆಚ್ಚಾಗಿದೆ.
In a surprising turn of weather, the towns of Sullia and Kadaba in Coastal Karnataka experienced sudden rains, providing much-needed relief from the oppressive heat that has gripped the region in recent days. Residents had been enduring soaring temperatures, with the mercury rising consistently above seasonal norms, leading to discomfort and concerns about health and water scarcity.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 02:30 pm
Mangalore Correspondent
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am