ಬ್ರೇಕಿಂಗ್ ನ್ಯೂಸ್
12-03-25 06:25 pm Mangalore Correspondent ಕರಾವಳಿ
ಪುತ್ತೂರು, ಮಾ.12 : ಸುಡು ಬಿಸಿಲಿನಿಂದ ಕಂಗೆಟ್ಟಿದ್ದ ಕರಾವಳಿಯ ಕೆಲವು ಕಡೆ ಬೇಸಗೆ ಮಳೆಯಾಗಿದೆ. ಪುತ್ತೂರು ತಾಲೂಕಿನ ಸವಣೂರು, ಸುಳ್ಯ, ಕಡಬ ತಾಲೂಕಿನ ಹಲವೆಡೆ ಮಳೆಯಾಗಿದ್ದು ಸುಟ್ಟು ಹೋಗಿದ್ದ ಇಳೆಗೆ ಮಳೆರಾಯನ ಸಿಂಚನವಾಗಿದೆ.
ಕಳೆದ ಎರಡು ವಾರದಿಂದ ಬಿಸಿಲ ಬೇಗೆ ವಿಪರೀತವಾಗಿ ಏರಿಕೆಯಾಗಿದ್ದು, ಉಷ್ಣಾಂಶ 40 ಸೆಲ್ಸಿಯಸ್ ಗಡಿ ದಾಟಿದೆ. ಮಧ್ಯಾಹ್ನ ವೇಳೆಗೆ ಭಾರೀ ಬಿಸಿಲಿನ ಕಾರಣ ಜನರು ಹೊರಗೆ ಹೋಗದ ಸ್ಥಿತಿಯಾಗಿತ್ತು. ಹಿಂದೆಂದೂ ಕಂಡರಿಯದ ಬಿಸಿಲಿನ ಝಳಕ್ಕೆ ಜನರು ಹೈರಾಣಾಗಿದ್ದರು. ಇದರ ಬೆನ್ನಲೇ ಬುಧವಾರ ಸಂಜೆ ನಾಲ್ಕು ಗಂಟೆ ವೇಳೆಗೆ ಪುತ್ತೂರು, ಸುಳ್ಯ ಆಸುಪಾಸಿನಲ್ಲಿ ಮಳೆ ಸುರಿದಿದ್ದು ಇಳೆಯನ್ನು ತಂಪಾಗಿಸಿದೆ.




ಈ ಹಿಂದೆಲ್ಲ ಮಾರ್ಚ್ ತಿಂಗಳಿನಲ್ಲಿ ಕರಾವಳಿ ಕರ್ನಾಟಕದಲ್ಲಿ ಮಳೆ ಬೀಳುವ ವಾಡಿಕೆ ಇಲ್ಲ. ಆದರೆ ಈ ಬಾರಿ ಕಡಬ, ಸುಳ್ಯ , ಪುತ್ತೂರು ತಾಲೂಕಿನ ಕೆಲವಡೆ ಅರ್ಧ ಗಂಟೆ ಕಾಲ ಮಳೆ ಬಿದ್ದಿದೆ. ಕಡಬ ತಾಲೂಕಿನ ಸವಣೂರು, ಚಾರ್ವಾಕದಲ್ಲಿ ಅರ್ಧ ಗಂಟೆಗೂ ಹೆಚ್ಚು ಮಳೆಯಾಗಿದೆ. ಪುತ್ತೂರು ಪೇಟೆಯಲ್ಲಿ ಹನಿ ಮಳೆಯಾದರೆ ಕೆಲವು ಕಡೆ ಸಿಡಿಲು ಸಹಿತ ಮಳೆಯಾಗಿದೆ. ಗ್ರಾಮೀಣ ಭಾಗದಲ್ಲಿ ಸಾಧಾರಣ ಮಳೆ ಸುರಿದಿದೆ.
ದಿಢೀರ್ ಸುರಿದ ಮಳೆಯಿಂದಾಗಿ, ಆಂಗಳದಲ್ಲಿ ಅಡಿಕೆ ಒಣಗಿಸಲು ಹಾಕಿದ ಕೃಷಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಕಾಲಿಕ ಮಳೆ ಗೇರು, ಅಡಿಕೆ ಕೃಷಿಗೆ ಮಾರಕವಾಗಿದ್ದು, ಹಿಂಗಾರದಲ್ಲಿ ನೀರು ನಿಂತರೆ ನಾಳೆಯ ಬಿಸಿಲಿಗೆ ಕರಟಿ ಹೋಗುವ ಸಾಧ್ಯತೆಯಿದೆ. ಎಳೆಯ ಅಡಿಕೆ ಉದುರಿ ಬೀಳುವ ಸಾಧ್ಯತೆ ಇರುತ್ತದೆ.
ಭಾರತೀಯ ಹವಾಮಾನ ಇಲಾಖೆ ಮಾರ್ಚ್ 11 ರಿಂದ 4 ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಈಗಲೇ ಬಿಸಿಲು ಹೆಚ್ಚಾಗಿರುವುದರಿಂದ ಎಪ್ರಿಲ್ ತಿಂಗಳಿನಲ್ಲಿ ಬಹುತೇಕ ಪೂರ್ವ ಮುಂಗಾರು ರಾಜ್ಯಕ್ಕೆ ಕಾಲಿಡುವ ಸಾಧ್ಯತೆ ಹೆಚ್ಚಾಗಿದೆ.
In a surprising turn of weather, the towns of Sullia and Kadaba in Coastal Karnataka experienced sudden rains, providing much-needed relief from the oppressive heat that has gripped the region in recent days. Residents had been enduring soaring temperatures, with the mercury rising consistently above seasonal norms, leading to discomfort and concerns about health and water scarcity.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm