ಬ್ರೇಕಿಂಗ್ ನ್ಯೂಸ್
12-03-25 06:25 pm Mangalore Correspondent ಕರಾವಳಿ
ಪುತ್ತೂರು, ಮಾ.12 : ಸುಡು ಬಿಸಿಲಿನಿಂದ ಕಂಗೆಟ್ಟಿದ್ದ ಕರಾವಳಿಯ ಕೆಲವು ಕಡೆ ಬೇಸಗೆ ಮಳೆಯಾಗಿದೆ. ಪುತ್ತೂರು ತಾಲೂಕಿನ ಸವಣೂರು, ಸುಳ್ಯ, ಕಡಬ ತಾಲೂಕಿನ ಹಲವೆಡೆ ಮಳೆಯಾಗಿದ್ದು ಸುಟ್ಟು ಹೋಗಿದ್ದ ಇಳೆಗೆ ಮಳೆರಾಯನ ಸಿಂಚನವಾಗಿದೆ.
ಕಳೆದ ಎರಡು ವಾರದಿಂದ ಬಿಸಿಲ ಬೇಗೆ ವಿಪರೀತವಾಗಿ ಏರಿಕೆಯಾಗಿದ್ದು, ಉಷ್ಣಾಂಶ 40 ಸೆಲ್ಸಿಯಸ್ ಗಡಿ ದಾಟಿದೆ. ಮಧ್ಯಾಹ್ನ ವೇಳೆಗೆ ಭಾರೀ ಬಿಸಿಲಿನ ಕಾರಣ ಜನರು ಹೊರಗೆ ಹೋಗದ ಸ್ಥಿತಿಯಾಗಿತ್ತು. ಹಿಂದೆಂದೂ ಕಂಡರಿಯದ ಬಿಸಿಲಿನ ಝಳಕ್ಕೆ ಜನರು ಹೈರಾಣಾಗಿದ್ದರು. ಇದರ ಬೆನ್ನಲೇ ಬುಧವಾರ ಸಂಜೆ ನಾಲ್ಕು ಗಂಟೆ ವೇಳೆಗೆ ಪುತ್ತೂರು, ಸುಳ್ಯ ಆಸುಪಾಸಿನಲ್ಲಿ ಮಳೆ ಸುರಿದಿದ್ದು ಇಳೆಯನ್ನು ತಂಪಾಗಿಸಿದೆ.




ಈ ಹಿಂದೆಲ್ಲ ಮಾರ್ಚ್ ತಿಂಗಳಿನಲ್ಲಿ ಕರಾವಳಿ ಕರ್ನಾಟಕದಲ್ಲಿ ಮಳೆ ಬೀಳುವ ವಾಡಿಕೆ ಇಲ್ಲ. ಆದರೆ ಈ ಬಾರಿ ಕಡಬ, ಸುಳ್ಯ , ಪುತ್ತೂರು ತಾಲೂಕಿನ ಕೆಲವಡೆ ಅರ್ಧ ಗಂಟೆ ಕಾಲ ಮಳೆ ಬಿದ್ದಿದೆ. ಕಡಬ ತಾಲೂಕಿನ ಸವಣೂರು, ಚಾರ್ವಾಕದಲ್ಲಿ ಅರ್ಧ ಗಂಟೆಗೂ ಹೆಚ್ಚು ಮಳೆಯಾಗಿದೆ. ಪುತ್ತೂರು ಪೇಟೆಯಲ್ಲಿ ಹನಿ ಮಳೆಯಾದರೆ ಕೆಲವು ಕಡೆ ಸಿಡಿಲು ಸಹಿತ ಮಳೆಯಾಗಿದೆ. ಗ್ರಾಮೀಣ ಭಾಗದಲ್ಲಿ ಸಾಧಾರಣ ಮಳೆ ಸುರಿದಿದೆ.
ದಿಢೀರ್ ಸುರಿದ ಮಳೆಯಿಂದಾಗಿ, ಆಂಗಳದಲ್ಲಿ ಅಡಿಕೆ ಒಣಗಿಸಲು ಹಾಕಿದ ಕೃಷಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಕಾಲಿಕ ಮಳೆ ಗೇರು, ಅಡಿಕೆ ಕೃಷಿಗೆ ಮಾರಕವಾಗಿದ್ದು, ಹಿಂಗಾರದಲ್ಲಿ ನೀರು ನಿಂತರೆ ನಾಳೆಯ ಬಿಸಿಲಿಗೆ ಕರಟಿ ಹೋಗುವ ಸಾಧ್ಯತೆಯಿದೆ. ಎಳೆಯ ಅಡಿಕೆ ಉದುರಿ ಬೀಳುವ ಸಾಧ್ಯತೆ ಇರುತ್ತದೆ.
ಭಾರತೀಯ ಹವಾಮಾನ ಇಲಾಖೆ ಮಾರ್ಚ್ 11 ರಿಂದ 4 ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಈಗಲೇ ಬಿಸಿಲು ಹೆಚ್ಚಾಗಿರುವುದರಿಂದ ಎಪ್ರಿಲ್ ತಿಂಗಳಿನಲ್ಲಿ ಬಹುತೇಕ ಪೂರ್ವ ಮುಂಗಾರು ರಾಜ್ಯಕ್ಕೆ ಕಾಲಿಡುವ ಸಾಧ್ಯತೆ ಹೆಚ್ಚಾಗಿದೆ.
In a surprising turn of weather, the towns of Sullia and Kadaba in Coastal Karnataka experienced sudden rains, providing much-needed relief from the oppressive heat that has gripped the region in recent days. Residents had been enduring soaring temperatures, with the mercury rising consistently above seasonal norms, leading to discomfort and concerns about health and water scarcity.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 12:09 pm
HK News Staffer
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm