ಬ್ರೇಕಿಂಗ್ ನ್ಯೂಸ್
12-03-25 09:17 pm Udupi Correspondent ಕರಾವಳಿ
ಉಡುಪಿ, ಮಾ.12 : ಇತ್ತೀಚೆಗೆ ಮಣಿಪಾಲದಲ್ಲಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಚೇಸಿಂಗ್ ಮಾಡಿಯೂ ತಪ್ಪಿಸಿಕೊಂಡಿದ್ದ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಹಿರಿಯಡ್ಕದಲ್ಲಿ ಮಣಿಪಾಲ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬುಧವಾರ ಸಂಜೆ ಹಿರಿಯಡ್ಕದಲ್ಲಿರುವ ಮಾಹಿತಿ ಪಡೆದು ಮಣಿಪಾಲ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ, ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ್ದಕ್ಕಾಗಿ ಮಣಿಪಾಲ ಇನ್ಸ್ ಪೆಕ್ಟರ್ ದೇವರಾಜು ಫೈರ್ ಮಾಡಿದ್ದಾರೆ.
ಮಾ.4ರಂದು ಥಾರ್ ಜೀಪಿನಲ್ಲಿ ತನ್ನ ಕಾಸರಗೋಡು ಮೂಲದ ಪ್ರೇಯಸಿ ಜೊತೆಗೆ ಮಣಿಪಾಲಕ್ಕೆ ಬಂದಿದ್ದ ಇಸಾಕ್ ಬಂಧನಕ್ಕೆ ಬೆಂಗಳೂರಿನ ನೆಲಮಂಗಲ ಪೊಲೀಸರು ಬಲೆ ಬೀಸಿದ್ದರು. ದರೋಡೆ ಪ್ರಕರಣದಲ್ಲಿ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸಿದ್ದರೂ, ಮಣಿಪಾಲ- ಉಡುಪಿ ಮಧ್ಯೆ ಹಲವು ವಾಹನಗಳಿಗೆ ಡಿಕ್ಕಿಯಾಗಿಸಿ ರಾತ್ರಿ ವೇಳೆ ಪರಾರಿಯಾಗಿದ್ದ.
ಆನಂತರ ಉಡುಪಿ ಪೊಲೀಸರು ಆತನ ಪ್ರೇಯಸಿಯನ್ನು ಬಂಧಿಸಿ ಕಸ್ಟಡಿಗೆ ಪಡೆದಿದ್ದರು. ಆದರೆ, ಇಸಾಕ್ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ. ಉಡುಪಿಯಲ್ಲೇ ಇರುವ ಬಗ್ಗೆ ಮಾಹಿತಿ ಪಡೆದು ಕಾರ್ಯಾಚರಣೆ ಮುಂದುವರಿಸಲಾಗಿತ್ತು. ಇದೀಗ ಹಿರಿಯಡ್ಕದಲ್ಲಿ ಪೊಲೀಸರು ಶೂಟೌಟ್ ಮಾಡಿ ಬಂಧನ ಮಾಡಿದ್ದಾರೆ.
ಬೆಂಗಳೂರಿನ ನೆಲಮಂಗಲ ಠಾಣೆ ವ್ಯಾಪ್ತಿಯಲ್ಲಿ ಪುತ್ತೂರು ಮೂಲದ ಉದ್ಯಮಿಯನ್ನು ದರೋಡೆಗೈದ ಬಗ್ಗೆ ಪ್ರಕರಣ ದಾಖಲಾಗಿತ್ತು. ಗರುಡ ಗ್ಯಾಂಗ್ ಸದಸ್ಯರು ಕೃತ್ಯ ನಡೆಸಿರುವ ಮಾಹಿತಿ ಮೇರೆಗೆ ಪೊಲೀಸರು ಇಸಾಕ್ ಬೆನ್ನು ಹತ್ತಿದ್ದರು. ಮಣಿಪಾಲ ಠಾಣೆಯಲ್ಲಿ ಇಸಾಕ್ ಮತ್ತು ಆತನ ಪ್ರೇಯಸಿ ವಿರುದ್ಧ ಕೊಲೆಯತ್ನ ಹಾಗೂ ಆರ್ಮ್ಸ್ ಆಕ್ಟಿನಡಿ ಕೇಸು ದಾಖಲಿಸಲಾಗಿತ್ತು.
Udupi Police open fire on Notorious Garuda Gang criminal Isaac, hospitalised. A shootout took place in Hiriyadka, Udupi, when the police were transporting arrested notorious criminal Isaac, a most-wanted member of the Garuda Gang along with three others. The operation was carried out by Manipal police sub-inspector Devaraj and his team.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm