ಬ್ರೇಕಿಂಗ್ ನ್ಯೂಸ್
13-03-25 09:20 pm Mangalore Correspondent ಕರಾವಳಿ
ಮಂಗಳೂರು, ಮಾ.13 : ನಗರದ ಬಿಜೈ ಕಾಪಿಕಾಡಿನಲ್ಲಿ ನಿವೃತ್ತ ಬಿಎಸ್ಸೆನ್ನೆಲ್ ಉದ್ಯೋಗಿಯೊಬ್ಬರು ಹಳೆ ದ್ವೇಷದಲ್ಲಿ ನೆರೆಮನೆಯಾತನನ್ನು ಕೊಲ್ಲುವ ಉದ್ದೇಶದಿಂದ ಕಾರನ್ನು ವೇಗವಾಗಿ ಚಲಾಯಿಸಿ ಬೈಕ್ ಮತ್ತು ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿಸಿದ ಘಟನೆ ನಡೆದಿದ್ದು ಕೃತ್ಯದ ವಿಡಿಯೋ ಸೆರೆಯಾಗಿದೆ.
ಬಿಎಸ್ಸೆನ್ನೆಲ್ ಉದ್ಯೋಗಿ ಸತೀಶ್ ಕುಮಾರ್ ಮತ್ತು ಮುರಳಿ ಪ್ರಸಾದ್ ಎಂಬವರು ಅಕ್ಕಪಕ್ಕದ ನಿವಾಸಿಗಳಾಗಿದ್ದು ಯಾವುದೋ ವಿಚಾರಕ್ಕೆ ಜಗಳ ಉಂಟಾಗಿತ್ತು. ಆನಂತರ, ಎಲ್ಲಿ ಸಿಕ್ಕರೂ ಬೈದುಕೊಂಡು ಸಾಗುತ್ತಿದ್ದರು. ಇದೇ ಕೋಪದಲ್ಲಿ ಬೈಕಿನಲ್ಲಿ ಮನೆಯತ್ತ ಬರುತ್ತಿದ್ದ ಮುರಳಿಯನ್ನು ಕೊಲ್ಲುವ ಉದ್ದೇಶದಿಂದ ಸತೀಶ್ ಕುಮಾರ್ ತನ್ನ 800 ಕಾರಿನಲ್ಲಿ ಹಿಂಬದಿಯಿಂದ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು ಡಿಕ್ಕುಪಡಿಸಿದ್ದಾನೆ. ಬಿಜೈ ಆರನೇ ಕ್ರಾಸ್ ನಲ್ಲಿ ಬೈಕ್ ಸವಾರ ಮುಂದಿನಿಂದ ಹೋಗುತ್ತಿದ್ದಾಗ ಅತಿ ವೇಗದಿಂದ ಬಂದ ಕಾರು ಬೈಕಿಗೆ ಡಿಕ್ಕಿಪಡಿಸಿದ್ದಲ್ಲದೆ, ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಗೂ ಡಿಕ್ಕಿಯಾಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.


ಘಟನೆಯಲ್ಲಿ ಬೈಕ್ ಸವಾರ ಮುರುಳಿ ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದರೆ, ಮಹಿಳೆ ಕಾಂಪೌಂಡ್ ಗೋಡೆಯ ಮೇಲಕ್ಕೆ ಎಸೆಯಲ್ಪಟ್ಟು ತಲೆ ಕೆಳಗಾಗಿ ಸಿಕ್ಕಿಕೊಂಡಿದ್ದಾರೆ. ಆನಂತರ ಸ್ಥಳೀಯ ನಿವಾಸಿಗಳು ಓಡಿ ಬಂದು ಗೋಡೆಯಲ್ಲಿ ಸಿಕ್ಕಿಕೊಂಡಿದ್ದ ಮಹಿಳೆಯನ್ನು ಕೆಳಕ್ಕಿಳಿಸಿ ಉಪಚರಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಕಾಲಿಗೆ ಗಂಭೀರ ಗಾಯವಾಗಿದೆ.
ಉರ್ವಾ ಪೊಲೀಸರು ಆರೋಪಿ ಸತೀಶ್ ಕುಮಾರ್ ವಿರುದ್ಧ ಕೊಲೆಯತ್ನ ಕೇಸು ದಾಖಲಿಸಿದ್ದು ಬಂಧಿಸಿದ್ದಾರೆ. ಆತನ ಕಾರನ್ನೂ ವಶಕ್ಕೆ ಪಡೆದಿದ್ದಾರೆ. 2023ರಲ್ಲಿ ಮುರುಳಿ ಪ್ರಸಾದ್ ಅವರ ತಂದೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಸತೀಶ್ ತಾಗಿಸಿಕೊಂಡು ಸಾಗಿದ್ದು ಉರ್ವಾದಲ್ಲಿ ಕೇಸು ದಾಖಲಾಗಿತ್ತು. ಇದೀಗ ಕೊಲೆ ಮಾಡುವ ಉದ್ದೇಶದಿಂದ ಮುರುಳಿ ಪ್ರಸಾದ್ ಮೇಲೆ ಕಾರನ್ನು ಡಿಕ್ಕಿಯಾಗಿಸಿದ್ದಾರೆ. ಈ ಬಗ್ಗೆ ಉರ್ವಾ ಠಾಣೆಯಲ್ಲಿ ಕೊಲೆಯತ್ನ ಮತ್ತು ಪಶ್ಚಿಮ ಸಂಚಾರಿ ಠಾಣೆಯಲ್ಲಿ ಮಹಿಳೆಗೆ ಡಿಕ್ಕಿ ಪಡಿಸಿದ ಬಗ್ಗೆ ಪ್ರಕರಣ ದಾಖಲಾಗಿದೆ.
#Mangalore #accident at #kapikad, Speeding Car Crashes into Cyclist, Woman Thrown Against Wall in Attempted #Murder Case pic.twitter.com/J3iYReOATK
— Headline Karnataka (@hknewsonline) March 13, 2025
Mangalore accident at kapikad, Speeding Car Crashes into Cyclist, Woman Thrown Against Wall in Attempted Murder Case.
02-04-26 03:56 pm
HK News Staffer
ಮಗನ ರೋಗ ಗುಣಪಡಿಸಲು ಸ್ವಂತ ಮಗಳನ್ನೇ ಕೊಂದ ತಾಯಿ! ಮ...
02-04-26 02:46 pm
ಕೈಚೀಲ ಖರೀದಿಯಲ್ಲಿ ಅವ್ಯವಹಾರ; ಐಎಎಸ್ ಅಧಿಕಾರಿ ರೋಹಿ...
01-04-26 10:51 pm
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm