ಬ್ರೇಕಿಂಗ್ ನ್ಯೂಸ್
15-03-25 01:47 pm Mangalore Correspondent ಕರಾವಳಿ
ಮಂಗಳೂರು, ಮಾ.15 : ಕನ್ನಡ, ತುಳು ಭಾಷಾ ಸಾಹಿತ್ಯ ಲೋಕದ ಹಿರಿಯ ವಿದ್ವಾಂಸ, ನಿವೃತ್ತ ಪ್ರಾಂಶುಪಾಲ ಡಾ. ವಾಮನ ನಂದಾವರ(81) ನಿಧನರಾಗಿದ್ದಾರೆ. ಅವರು ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿದ್ದರು.
ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಮೂಲದ ಇವರು ಕನ್ನಡ ಹಾಗೂ ತುಳು ಭಾಷಾ ಸಾಹಿತ್ಯಕ್ಕೆ ಬಹಳಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಒಂದು ಬಾರಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಬಡ ಕುಟುಂಬದಲ್ಲಿ ಜನಿಸಿದ್ದ ವಾಮನ ನಂದಾವರ ಅವರು ಮುದುಂಗಾರು ಕಟ್ಟೆ ಸರ್ಕಾರಿ ಶಾಲೆ, ಪಾಣೆಮಂಗಳೂರಿನ ಎಸ್.ವಿ.ಎಸ್ ಶಾಲೆ ಹಾಗೂ ಶ್ರೀಭಾರತಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ, ಕುರ್ನಾಡು ಬೋರ್ಡ್ ಹೈಸ್ಕೂಲು, ಕೋಟೆಕಾರಿನ ಆನಂದಾಶ್ರಮ ಪ್ರೌಢಶಾಲೆಗಳಲ್ಲಿ ಪ್ರೌಢಶಿಕ್ಷಣ, ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ಬಿ.ಎಸ್ಸಿ ಪದವಿ, ಮಂಗಳೂರು ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಇಡಿ ಪದವಿ ಪಡೆದಿದ್ದರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂ.ಎ (ಕನ್ನಡ), ಅಣ್ಣಾಮಲೈ ವಿಶ್ವವಿದ್ಯಾಲಯದಲ್ಲಿ ಎಂ.ಇಡಿ ಪದವಿ ಪಡೆದಿದ್ದರು.
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರೊ. ಬಿ.ಎ.ವಿವೇಕ ರೈ ಮಾರ್ಗದರ್ಶನದಲ್ಲಿ ರಚಿಸಿದ್ದ 'ಕೋಟಿ ಚೆನ್ನಯ ಜಾನಪದೀಯ ಅಧ್ಯಯನ’ ಮಹಾ ಪ್ರಬಂಧಕ್ಕೆ ಪಿಎಚ್.ಡಿ ಪಡೆದಿದ್ದರು. ಬೆಂಗಳೂರಿನ ಚನ್ನೇನಹಳ್ಳಿ ಜನಸೇವಾ ವಿದ್ಯಾಕೇಂದ್ರದಲ್ಲಿ ಸಹಾಯಕ ಅಧ್ಯಾಪಕರಾಗಿ ಶಿಕ್ಷಣ ವೃತ್ತಿ ಆರಂಭಿಸಿದ್ದ ಅವರು, ಮಂಗಳೂರಿನ ಸೇಂಟ್ ಆನ್ಸ್ ಪ್ರೌಢಶಾಲೆಯಲ್ಲಿ ಸಹಾಯಕ ಅಧ್ಯಾಪಕರಾಗಿ, ಸೇಂಟ್ ಆನ್ಸ್ ಮಹಿಳಾ ಶಿಕ್ಷಕ-ಶಿಕ್ಷಣ ತರಬೇತಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಹಾಗೂ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಸ್ಥಾಪಕ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ. ತುಳು, ಕನ್ನಡ ಭಾಷೆಗಳಲ್ಲಿ ಹಲವಾರು ಕೃತಿಗಳನ್ನು ರಚಿಸಿದ್ದಾರೆ.
ತುಳು ಪಠ್ಯ ಪುಸ್ತಕ ಸಮಿತಿ, ತುಳು ನಿಘಂಟು ಯೋಜನೆಯಲ್ಲಿ ಹಾಗೂ ತುಳು ಜಾನಪದ ಪತ್ರಿಕೆ ಮಂಡಳಿಯಲ್ಲಿ ಸೇವೆ ಸಲ್ಲಿಸಿದ್ದರು. ಬಂಟ್ವಾಳ ತಾಲ್ಲೂಕಿನ 12ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
Senior Scholar Dr Vamana Nandavar (81), Prominent Figure in Tulu and Kannada Literature, Passes Away in Mangalore.
17-07-25 04:50 pm
Bangalore Correspondent
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 04:14 pm
Mangalore Correspondent
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
Mangalore Rain, School College Holiday: ಕರಾವಳ...
16-07-25 10:52 pm
17-07-25 02:30 pm
Mangalore Correspondent
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am