ಬ್ರೇಕಿಂಗ್ ನ್ಯೂಸ್
15-03-25 04:11 pm Mangalore Correspondent ಕರಾವಳಿ
ಮಂಗಳೂರು, ಮಾ.15 : 13 ವರ್ಷದ ಹುಡುಗನೊಬ್ಬ ಅಪಾರ್ಟ್ಮೆಂಟ್ ಕಟ್ಟಡದ ಐದನೇ ಮಹಡಿಯಿಂದ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ನಗರದ ಮೇರಿಹಿಲ್ ಬಳಿಯಲ್ಲಿ ಶನಿವಾರ (ಮಾ.15) ಬೆಳಗ್ಗೆ ನಡೆದಿದೆ.
ಏಳನೇ ಕ್ಲಾಸ್ ಓದುತ್ತಿದ್ದ ಸಮರ್ಜಿತ್ ಭಂಡಾರಿ(13) ದುರಂತ ಸಾವಿಗೀಡಾದ ವಿದ್ಯಾರ್ಥಿ. ಬೆಳಗ್ಗೆ 5.30ರಿಂದ 6 ಗಂಟೆ ನಡುವೆ ಘಟನೆ ನಡೆದಿದ್ದು, ಕೂಡಲೇ ಮನೆಯವರು ಬಾಲಕನನ್ನು ಎಜೆ ಆಸ್ಪತ್ರೆಗೆ ಕರೆತಂದಿದ್ದರು. ಆದರೆ ತಲೆ ಮತ್ತು ಬೆನ್ನು ಮೂಳೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಅಷ್ಟರಲ್ಲಿಯೇ ಮೃತಪಟ್ಟಿದ್ದಾನೆ. ಆಸ್ಪತ್ರೆ ಆವರಣದಲ್ಲಿ ಕುಟುಂಬಸ್ಥರು. ಅಪಾರ್ಟ್ಮೆಂಟಿನ ಇತರ ಕುಟುಂಬ ಸದಸ್ಯರು ಸೇರಿದ್ದು ಎಲ್ಲರೂ ಶಾಕ್ ಗೆ ಒಳಗಾಗಿದ್ದರು. ಮನೆಯವರು ತೀವ್ರ ಆಘಾತಕ್ಕೆ ಒಳಗಾಗಿದ್ದರು. ಕಾವೂರು ಠಾಣೆಯಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ.
ಹುಡುಗನಿಗೆ ಪರೀಕ್ಷೆ ನಡೆಯುತ್ತಿದ್ದು ಎಕ್ಸಾಂ ಭಯದಲ್ಲಿ ಏನೋ ಮಾಡಿರಬೇಕು. ಇವರ ಮನೆ ಎರಡನೇ ಮಹಡಿಯಲ್ಲಿದ್ದು, ಎಲ್ಲಿಂದ ಬಿದ್ದಿದ್ದಾನೆಂದು ಸರಿಯಾಗಿ ಮಾಹಿತಿ ಇಲ್ಲ. ಮನೆಯವರ ಹೇಳಿಕೆ ಪ್ರಕಾರ ಐದನೇ ಮಹಡಿಯೆಂದು ಕೇಸು ದಾಖಲಿಸಿದ್ದೇವೆ. ಕಟ್ಟಡದಿಂದ ಸ್ವಲ್ಪ ದೂರಕ್ಕೆ ಹೋಗಿ ಬಿದ್ದಿದ್ದಾನೆ. ಕಟ್ಟಡದಲ್ಲಿ ಆರಡಿ ಎತ್ತರಕ್ಕೆ ಗ್ರಿಲ್ಸ್ ಇದೆ, ಅದರ ಎಡೆಯಲ್ಲಿ ಆಕಸ್ಮಿಕವಾಗಿ ಬೀಳುವ ಸಾಧ್ಯತೆ ಇಲ್ಲ ಎಂದು ಕಾವೂರು ಇನ್ಸ್ ಪೆಕ್ಟರ್ ತಿಳಿಸಿದ್ದಾರೆ. ಪರೀಕ್ಷೆ ಭಯದಲ್ಲಿ ಈ ರೀತಿ ಮಾಡಿದ್ದಾನೆಯೇ ಅಥವಾ ಬೇರಾವುದೇ ಕಾರಣ ಇದೆಯೇ ಎಂದು ತನಿಖೆ ಮಾಡುತ್ತಿದ್ದೇವೆ ಎಂದಿದ್ದಾರೆ.
ಸಮರ್ಜಿತ್ ಓದುವುದರಲ್ಲಿ ಮತ್ತು ಶಾಲೆಯಲ್ಲಿ ಭಾರೀ ಚುರುಕಾಗಿದ್ದ ಹುಡುಗ. ಯೂಟ್ಯೂಬ್ ಮಾಡಿಯೂ ಸಣ್ಣ ವಯಸ್ಸಿನಲ್ಲೇ ಚುರುಕುತನ ತೋರಿಸಿದ್ದ. ಹುಡುಗನ ಹಠಾತ್ ಸಾವು ಕುಟುಂಬಕ್ಕೆ ತೀವ್ರ ಶಾಕ್ ನೀಡಿದೆ.
13 Year Old Boy Falls from Apartment Building in Mary Hill, Mangalore. The deceased has been identified as Master Samarjit Bhandary. Following the incident, a case has been registered under Unnatural Death Report.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm