ಬ್ರೇಕಿಂಗ್ ನ್ಯೂಸ್
15-03-25 04:11 pm Mangalore Correspondent ಕರಾವಳಿ
ಮಂಗಳೂರು, ಮಾ.15 : 13 ವರ್ಷದ ಹುಡುಗನೊಬ್ಬ ಅಪಾರ್ಟ್ಮೆಂಟ್ ಕಟ್ಟಡದ ಐದನೇ ಮಹಡಿಯಿಂದ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ನಗರದ ಮೇರಿಹಿಲ್ ಬಳಿಯಲ್ಲಿ ಶನಿವಾರ (ಮಾ.15) ಬೆಳಗ್ಗೆ ನಡೆದಿದೆ.
ಏಳನೇ ಕ್ಲಾಸ್ ಓದುತ್ತಿದ್ದ ಸಮರ್ಜಿತ್ ಭಂಡಾರಿ(13) ದುರಂತ ಸಾವಿಗೀಡಾದ ವಿದ್ಯಾರ್ಥಿ. ಬೆಳಗ್ಗೆ 5.30ರಿಂದ 6 ಗಂಟೆ ನಡುವೆ ಘಟನೆ ನಡೆದಿದ್ದು, ಕೂಡಲೇ ಮನೆಯವರು ಬಾಲಕನನ್ನು ಎಜೆ ಆಸ್ಪತ್ರೆಗೆ ಕರೆತಂದಿದ್ದರು. ಆದರೆ ತಲೆ ಮತ್ತು ಬೆನ್ನು ಮೂಳೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಅಷ್ಟರಲ್ಲಿಯೇ ಮೃತಪಟ್ಟಿದ್ದಾನೆ. ಆಸ್ಪತ್ರೆ ಆವರಣದಲ್ಲಿ ಕುಟುಂಬಸ್ಥರು. ಅಪಾರ್ಟ್ಮೆಂಟಿನ ಇತರ ಕುಟುಂಬ ಸದಸ್ಯರು ಸೇರಿದ್ದು ಎಲ್ಲರೂ ಶಾಕ್ ಗೆ ಒಳಗಾಗಿದ್ದರು. ಮನೆಯವರು ತೀವ್ರ ಆಘಾತಕ್ಕೆ ಒಳಗಾಗಿದ್ದರು. ಕಾವೂರು ಠಾಣೆಯಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ.
ಹುಡುಗನಿಗೆ ಪರೀಕ್ಷೆ ನಡೆಯುತ್ತಿದ್ದು ಎಕ್ಸಾಂ ಭಯದಲ್ಲಿ ಏನೋ ಮಾಡಿರಬೇಕು. ಇವರ ಮನೆ ಎರಡನೇ ಮಹಡಿಯಲ್ಲಿದ್ದು, ಎಲ್ಲಿಂದ ಬಿದ್ದಿದ್ದಾನೆಂದು ಸರಿಯಾಗಿ ಮಾಹಿತಿ ಇಲ್ಲ. ಮನೆಯವರ ಹೇಳಿಕೆ ಪ್ರಕಾರ ಐದನೇ ಮಹಡಿಯೆಂದು ಕೇಸು ದಾಖಲಿಸಿದ್ದೇವೆ. ಕಟ್ಟಡದಿಂದ ಸ್ವಲ್ಪ ದೂರಕ್ಕೆ ಹೋಗಿ ಬಿದ್ದಿದ್ದಾನೆ. ಕಟ್ಟಡದಲ್ಲಿ ಆರಡಿ ಎತ್ತರಕ್ಕೆ ಗ್ರಿಲ್ಸ್ ಇದೆ, ಅದರ ಎಡೆಯಲ್ಲಿ ಆಕಸ್ಮಿಕವಾಗಿ ಬೀಳುವ ಸಾಧ್ಯತೆ ಇಲ್ಲ ಎಂದು ಕಾವೂರು ಇನ್ಸ್ ಪೆಕ್ಟರ್ ತಿಳಿಸಿದ್ದಾರೆ. ಪರೀಕ್ಷೆ ಭಯದಲ್ಲಿ ಈ ರೀತಿ ಮಾಡಿದ್ದಾನೆಯೇ ಅಥವಾ ಬೇರಾವುದೇ ಕಾರಣ ಇದೆಯೇ ಎಂದು ತನಿಖೆ ಮಾಡುತ್ತಿದ್ದೇವೆ ಎಂದಿದ್ದಾರೆ.
ಸಮರ್ಜಿತ್ ಓದುವುದರಲ್ಲಿ ಮತ್ತು ಶಾಲೆಯಲ್ಲಿ ಭಾರೀ ಚುರುಕಾಗಿದ್ದ ಹುಡುಗ. ಯೂಟ್ಯೂಬ್ ಮಾಡಿಯೂ ಸಣ್ಣ ವಯಸ್ಸಿನಲ್ಲೇ ಚುರುಕುತನ ತೋರಿಸಿದ್ದ. ಹುಡುಗನ ಹಠಾತ್ ಸಾವು ಕುಟುಂಬಕ್ಕೆ ತೀವ್ರ ಶಾಕ್ ನೀಡಿದೆ.
13 Year Old Boy Falls from Apartment Building in Mary Hill, Mangalore. The deceased has been identified as Master Samarjit Bhandary. Following the incident, a case has been registered under Unnatural Death Report.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm