ಬ್ರೇಕಿಂಗ್ ನ್ಯೂಸ್
16-03-25 02:05 pm Mangalore Correspondent ಕರಾವಳಿ
ಮಂಗಳೂರು, ಮಾ.16 : ಮಂಗಳೂರು ಜೈಲಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬ ತನ್ನ ಶಾಲನ್ನೇ ಕಿಟಕಿಗೆ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಭಾನುವಾರ ನಸುಕಿನ 4ರಿಂದ 4.50ರ ನಡುವೆ ಘಟನೆ ನಡೆದಿದೆ. ಮೂಡುಬಿದ್ರೆ ಠಾಣೆಯಲ್ಲಿ ಪೋಕ್ಸೋ ಕೇಸು ದಾಖಲಾಗಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ಪ್ರಕಾಶ್ ಗೋಪಾಲ ಮೂಲ್ಯ (50) ಮಾ.11ರಂದು ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದು ಮಂಗಳೂರು ಜೈಲು ಸೇರಿದ್ದ. ಜೈಲಿನ ಟಾಯ್ಲೆಟ್ ಒಳಗಡೆಯ ಕಿಟಕಿಗೆ ನೇಣು ಹಾಕಿದ್ದು ಕೆಲವೊತ್ತಲ್ಲಿ ಜೈಲು ಸಿಬಂದಿ ಗಮನಿಸಿ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾನೆ. ಪೋಕ್ಸೋ ಪ್ರಕರಣದಲ್ಲಿ ಜಾಮೀನು ಸಿಗೋದಿಲ್ಲ, ಯಾರು ಕೂಡ ಜೈಲಿನಿಂದ ಬಿಡಿಸಲು ಬರೋದಿಲ್ಲ ಅಂತ ಸಾವಿಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.
ಮೂಡುಬಿದ್ರೆ ಲಾಡಿಯಲ್ಲಿ ನೆಲೆಸಿದ್ದ ಪ್ರಕಾಶ್ ಬೆಳಗಾವಿ ಮೂಲದ ಕೂಲಿ ಕಾರ್ಮಿಕನಾಗಿದ್ದು ವಿಪರೀತ ಕುಡಿತದ ಚಟ ಹೊಂದಿದ್ದ. ಅಲ್ಲಿಯೇ ಪರಿಸರದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿದ್ದಲ್ಲದೆ, ಅದರ ವಿಡಿಯೋ ಮಾಡಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದ. ಆತನ ಮೊಬೈಲ್ ನಲ್ಲಿ ವಿಡಿಯೋ ಸಿಕ್ಕಿದ್ದು ಪೊಲೀಸರು ವಶಕ್ಕೆ ಪಡೆದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದರು.
ಮನೆಯಲ್ಲಿ ಪತ್ನಿಗೆ ಕುಡಿದು ಬಂದು ಹೊಡೆಯುತ್ತಿದ್ದುದರಿಂದ ಬಂಧನ ಆಗಿದ್ದರೂ ನೋಡಲು ಬಂದಿರಲಿಲ್ಲ. ಹೀಗಾಗಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿದ್ದಾನೆ ಎನ್ನುವ ಮಾಹಿತಿ ಪೊಲೀಸರದ್ದು. ಜೈಲಿನಲ್ಲಿ ಆತ್ಮಹತ್ಯೆ ಆಗಿರುವ ಬಗ್ಗೆ ಮಂಗಳೂರಿನ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
POSCO Accused in Mangalore Commits Suicide in Jail. The deceased has been identified as Prakash Gopal Moolya (43). As per preliminary information, the prisoner hanged himself using a towel tied to the window grille in the toilet of Barrack ‘B’, Cell No. 2 of the jail. The incident was immediately noticed by the duty staff, and he was rushed to Government Wenlock Hospital, Mangalore, in the jail’s official vehicle. However, doctors declared him brought dead after examination.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm