ಬ್ರೇಕಿಂಗ್ ನ್ಯೂಸ್
17-03-25 11:29 am Mangalore Correspondent ಕರಾವಳಿ
ಉಳ್ಳಾಲ, ಮಾ.17 : ವೃದ್ಧ ತಾಯಿ ಜೊತೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಕಾಡು ಹಂದಿ ದಿಢೀರ್ ಅಡ್ಡ ಬಂದ ಪರಿಣಾಮ ತಾಯಿ ರಸ್ತೆಗೆಸೆಯಲ್ಪಟ್ಟು ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ಹರೇಕಳ ಗ್ರಾಮದ ಖಂಡಿಗ ಎಂಬಲ್ಲಿ ಸಂಭವಿಸಿದೆ.
ಹರೇಕಳ ಗ್ರಾಮದ ಪೊಲ್ಕೆ ಮೇಗಿನಮನೆ ನಿವಾಸಿ ದೇವಕಿ ಮಾಣೈ (72) ಮೃತ ಮಹಿಳೆ. ವರದರಾಜ್ ಮಾಣೈ ಅವರು ತನ್ನ ತಾಯಿ ದೇವಕಿ ಮಾಣೈ ಅವರನ್ನ ಶನಿವಾರ ರಾತ್ರಿ ಬಜಾಲಿನ ಸಂಬಂಧಿಕರ ಮನೆಯಿಂದ ಸ್ಕೂಟರಿನಲ್ಲಿ ಕುಳ್ಳಿರಿಸಿ ಅಡ್ಯಾರು-ಪಾವೂರು ಮಾರ್ಗವಾಗಿ ಹರೇಕಳದ ಮನೆಗೆ ಮರಳುತ್ತಿದ್ದ ವೇಳೆ ದಾರಿ ಮಧ್ಯದ ಖಂಡಿಗ ಎಂಬಲ್ಲಿ ಹಳೇ ಪಂಚಾಯತ್ ಕಚೇರಿ ಕಟ್ಟಡದ ಬಳಿಯ ಗುಡ್ಡ ಪ್ರದೇಶದಿಂದ ಕಾಡು ಹಂದಿ ದಿಢೀರ್ ಆಗಿ ರಸ್ತೆ ಕಡೆ ಧಾವಿಸಿತ್ತು. ಈ ವೇಳೆ ಸ್ಕೂಟರ್ ಚಲಾಯಿಸುತ್ತಿದ್ದ ವರದರಾಜ್ ಅವರು ವಿಚಲಿತರಾಗಿ ಹಠಾತ್ತನೆ ಬ್ರೇಕ್ ಹೊಡೆದ ಪರಿಣಾಮ ತಾಯಿ ಮತ್ತು ಮಗ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಗಂಭೀರ ಗಾಯಗೊಂಡ ದೇವಕಿ ಅವರಿಗೆ ಹರೇಕಳದ ಕ್ಲಿನಿಕ್ ಒಂದರಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೃತ ದೇವಕಿ ಅವರ ಪತಿ ಭೋಜ ಮಾಣೈ ಅವರು ಆರು ತಿಂಗಳ ಹಿಂದೆಯಷ್ಟೇ ಅಲ್ಪಕಾಲದ ಅನಾರೋಗ್ಯದಿಂದ ಮೃತಪಟ್ಟಿದ್ದರು. ದೇವಕಿ ಅವರು ಓರ್ವ ಪುತ್ರ, ಇಬ್ಬರು ಪುತ್ರಿಯರು ಮತ್ತು ಮೊಮ್ಮಕ್ಕಳನ್ನ ಅಗಲಿದ್ದಾರೆ. ಘಟನೆ ಕುರಿತು ದೇವಕಿ ಮಾಣೈ ಅವರ ಅಳಿಯ ರವೀಂದ್ರ ಭಂಡಾರಿ ನೀಡಿದ ದೂರಿನಂತೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Tragic Accident in Harekala Mangalore, Wild Boar Leads to Fatal Crash, Claims Life of 72 Year old Woman. The deceased has been identified as Devika. A devastating accident occurred late Saturday night when a man riding a scooter with his elderly mother lost control after a wild boar suddenly crossed their path. The unexpected encounter resulted in the woman being thrown onto the road, leading to a tragic turn of events.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm