ಬ್ರೇಕಿಂಗ್ ನ್ಯೂಸ್
17-03-25 11:02 pm Udupi Correspondent ಕರಾವಳಿ
ಉಡುಪಿ, ಮಾ.17 : ಮಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ್ ರೈಲು ಆರಂಭಿಸಬೇಕು ಎಂಬ ಬೇಡಿಕೆ ಈಡೇರುವ ಲಕ್ಷಣ ಇದೆ. ಗೋವಾ - ಮಂಗಳೂರು ನಡುವಿನ ರೈಲನ್ನು ಮುಂಬೈಗೆ ವಿಸ್ತರಣೆ ಮಾಡುವಂತೆ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದು ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಸದ್ಯ ಮಂಗಳೂರು ನಗರದಿಂದ ಗೋವಾಕ್ಕೆ ವಂದೇ ಭಾರತ್ ರೈಲು ಸಂಚಾರ ನಡೆಸುತ್ತಿದೆ. ಈ ರೈಲಿಗೆ ಪ್ರಯಾಣಿಕರ ಕೊರತೆ ಇರುವುದರಿಂದ ಕೇರಳಕ್ಕೆ ವಿಸ್ತರಿಸುವ ಬೇಡಿಕೆ ಇದೆ. ಇದೇ ವೇಳೆ, ಇದೇ ರೈಲನ್ನು ಮಂಗಳೂರು-ಮುಂಬೈ ನಡುವೆ ಸಂಚರಿಸುವಂತೆ ಮಾಡಬೇಕು ಎನ್ನುವ ಬೇಡಿಕೆ ಬಲವಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತು ರೈಲ್ವೇ ಸಚಿವರಿಗೆ ಮನವಿ ನೀಡಿರುವುದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲು ರದ್ದಾಗಬಹುದೆಂಬ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಈ ರೈಲನ್ನು ರದ್ದು ಮಾಡದೇ ಮುಂಬೈ ವರೆಗೆ ವಿಸ್ತರಿಸಿ ಓಡಿಸುವಂತೆ ರೈಲ್ವೇ ಸಚಿವರನ್ನು ಉಡುಪಿ ಸಂಸದರು ಕೋರಿದ್ದಾರೆ. ಸಚಿವರು ತಕ್ಷಣವೇ ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲನ್ನು ರದ್ದು ಮಾಡದಂತೆಯೂ ಮತ್ತು ಅದನ್ನು ಮುಂಬಯಿ ವಿಸ್ತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು ಎಂದು ಕೋಟ ಶ್ರೀನಿವಾಸ ಪೂಜಾರಿ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಮಂಗಳೂರು- ಉಡುಪಿ ನಗರಗಳ ಹೆಚ್ಚಿನ ಜನರು ಮುಂಬೈನಲ್ಲಿರುವುದು ಮತ್ತು ಈ ಭಾಗದ ಆರ್ಥಿಕ ಆಯಾಮಗಳ ವರದಿಯನ್ನು ಸಚಿವರಿಗೆ ನೀಡಿದ್ದು , ಮುಂಬೈ ವಿಸ್ತರಣೆಯ ಅಗತ್ಯವನ್ನೂ ತಿಳಿಸಿದ್ದಾರೆ. ಇದಲ್ಲದೆ, ಮುಂದೆ ಸ್ಲೀಪರ್ ವಂದೇ ಭಾರತ್ ರೈಲು ಬಿಡುಗಡೆಯಾದಾಗ ಆದ್ಯತೆಯ ಮೇರೆಗೆ ಮಂಗಳೂರು -ಮುಂಬೈ ಮಧ್ಯೆ ಅದನ್ನು ಓಡಿಸುವಂತೆಯೂ ಸಂಸದ ಶ್ರೀನಿವಾಸ ಪೂಜಾರಿ ಅವರು ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.
Mangalore Mumbai Vande Bharat train is imminent, to Railway Minister assures Udupi MP Srinivasa Poojary regarding the request.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 05:39 pm
HK News Staffer
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm