ಬ್ರೇಕಿಂಗ್ ನ್ಯೂಸ್
17-03-25 11:02 pm Udupi Correspondent ಕರಾವಳಿ
ಉಡುಪಿ, ಮಾ.17 : ಮಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ್ ರೈಲು ಆರಂಭಿಸಬೇಕು ಎಂಬ ಬೇಡಿಕೆ ಈಡೇರುವ ಲಕ್ಷಣ ಇದೆ. ಗೋವಾ - ಮಂಗಳೂರು ನಡುವಿನ ರೈಲನ್ನು ಮುಂಬೈಗೆ ವಿಸ್ತರಣೆ ಮಾಡುವಂತೆ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದು ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಸದ್ಯ ಮಂಗಳೂರು ನಗರದಿಂದ ಗೋವಾಕ್ಕೆ ವಂದೇ ಭಾರತ್ ರೈಲು ಸಂಚಾರ ನಡೆಸುತ್ತಿದೆ. ಈ ರೈಲಿಗೆ ಪ್ರಯಾಣಿಕರ ಕೊರತೆ ಇರುವುದರಿಂದ ಕೇರಳಕ್ಕೆ ವಿಸ್ತರಿಸುವ ಬೇಡಿಕೆ ಇದೆ. ಇದೇ ವೇಳೆ, ಇದೇ ರೈಲನ್ನು ಮಂಗಳೂರು-ಮುಂಬೈ ನಡುವೆ ಸಂಚರಿಸುವಂತೆ ಮಾಡಬೇಕು ಎನ್ನುವ ಬೇಡಿಕೆ ಬಲವಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತು ರೈಲ್ವೇ ಸಚಿವರಿಗೆ ಮನವಿ ನೀಡಿರುವುದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲು ರದ್ದಾಗಬಹುದೆಂಬ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಈ ರೈಲನ್ನು ರದ್ದು ಮಾಡದೇ ಮುಂಬೈ ವರೆಗೆ ವಿಸ್ತರಿಸಿ ಓಡಿಸುವಂತೆ ರೈಲ್ವೇ ಸಚಿವರನ್ನು ಉಡುಪಿ ಸಂಸದರು ಕೋರಿದ್ದಾರೆ. ಸಚಿವರು ತಕ್ಷಣವೇ ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲನ್ನು ರದ್ದು ಮಾಡದಂತೆಯೂ ಮತ್ತು ಅದನ್ನು ಮುಂಬಯಿ ವಿಸ್ತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು ಎಂದು ಕೋಟ ಶ್ರೀನಿವಾಸ ಪೂಜಾರಿ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಮಂಗಳೂರು- ಉಡುಪಿ ನಗರಗಳ ಹೆಚ್ಚಿನ ಜನರು ಮುಂಬೈನಲ್ಲಿರುವುದು ಮತ್ತು ಈ ಭಾಗದ ಆರ್ಥಿಕ ಆಯಾಮಗಳ ವರದಿಯನ್ನು ಸಚಿವರಿಗೆ ನೀಡಿದ್ದು , ಮುಂಬೈ ವಿಸ್ತರಣೆಯ ಅಗತ್ಯವನ್ನೂ ತಿಳಿಸಿದ್ದಾರೆ. ಇದಲ್ಲದೆ, ಮುಂದೆ ಸ್ಲೀಪರ್ ವಂದೇ ಭಾರತ್ ರೈಲು ಬಿಡುಗಡೆಯಾದಾಗ ಆದ್ಯತೆಯ ಮೇರೆಗೆ ಮಂಗಳೂರು -ಮುಂಬೈ ಮಧ್ಯೆ ಅದನ್ನು ಓಡಿಸುವಂತೆಯೂ ಸಂಸದ ಶ್ರೀನಿವಾಸ ಪೂಜಾರಿ ಅವರು ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.
Mangalore Mumbai Vande Bharat train is imminent, to Railway Minister assures Udupi MP Srinivasa Poojary regarding the request.
02-04-26 03:56 pm
HK News Staffer
ಮಗನ ರೋಗ ಗುಣಪಡಿಸಲು ಸ್ವಂತ ಮಗಳನ್ನೇ ಕೊಂದ ತಾಯಿ! ಮ...
02-04-26 02:46 pm
ಕೈಚೀಲ ಖರೀದಿಯಲ್ಲಿ ಅವ್ಯವಹಾರ; ಐಎಎಸ್ ಅಧಿಕಾರಿ ರೋಹಿ...
01-04-26 10:51 pm
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm