ಬ್ರೇಕಿಂಗ್ ನ್ಯೂಸ್
22-03-25 03:15 pm Mangalore Correspondent ಕರಾವಳಿ
ಸುಳ್ಯ, ಮಾರ್ಚ್ 22 : ನಾಯಿಮರಿಯೊಂದು ಕಡಿತಕ್ಕೊಳಗಾಗಿದ್ದ ಮಹಿಳೆಯೊಬ್ಬರು ರೇಬಿಸ್ ಕಾಯಿಲೆಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಸುಳ್ಯ ಗಡಿಭಾಗ ಸಂಪಾಜೆಯಲ್ಲಿ ನಡೆದಿದೆ.
ಸುಳ್ಯ ಗಡಿಭಾಗದ ಸಂಪಾಜೆಯಲ್ಲಿ ಘಟನೆ ನಡೆದಿದ್ದು ಕಲ್ಲುಗುಂಡಿ ಬಳಿಯ 42 ವರ್ಷದ ಮಹಿಳೆಗೆ ಫೆಬ್ರವರಿ 7ರಂದು ಅರಂತೋಡಿನಲ್ಲಿ ತೋಟದ ಕೆಲಸಕ್ಕೆ ತೆರಳಿದ್ದಾಗ ನಾಯಿ ಮರಿಯೊಂದು ಅವರಿಗೆ ಕಚ್ಚಿತ್ತು. ಆದರೆ ಮಹಿಳೆ ಈ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ ಹಾಗೂ ಚಿಕಿತ್ಸೆಯನ್ನೂ ಪಡೆದಿರಲಿಲ್ಲ. ಸೋಮವಾರ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದಲ್ಲದೆ, ವಿಚಿತ್ರವಾಗಿ ವರ್ತಿಸತೊಡಗಿದ್ದರು. ಹಾಗಾಗಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು.
ಈ ವೇಳೆ ನೀರನ್ನು ನೋಡಿ ಬೊಬ್ಬೆ ಹಾಕುವುದು ಸಹಿತ ವಿಚಿತ್ರ ವರ್ತನೆ ತೋರುತ್ತಿದ್ದ ಆಕೆಯೊಂದಿಗೆ ವೈದ್ಯರು ಪೂರಕ ಮಾಹಿತಿ ಕೇಳಿದಾಗ ನಾಯಿ ಕಚ್ಚಿದ್ದ ಬಗ್ಗೆ ತಿಳಿಸಿದ್ದರು. ಬಳಿಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಾರ್ಚ್ 20ರಂದು ಮಹಿಳೆ ಮೃತಪಟ್ಟಿದ್ದಾರೆ. ಇತ್ತ ಆ ನಾಯಿ ಮರಿ ಕಾಣದಾಗಿದ್ದು ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ತಾಲೂಕು ವೈದ್ಯಾಧಿಕಾರಿ ಸಲಹೆಯಂತೆ ನಾಯಿ ಸಂಪರ್ಕಕ್ಕೆ ಬಂದ ಎಲ್ಲರೂ ಏಂಟಿ ರೇಬಿಸ್ ಚುಚ್ಚುಮದ್ದು ಪಡೆಯುವಂತೆ ಸೂಚಿಸಿದ್ದಾರೆ.
In a tragic incident, a 42-year-old woman has died from rabies in Sampaje, a town in Sullia, Mangalore. The woman reportedly contracted the virus after being bitten by dog.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm