ಬ್ರೇಕಿಂಗ್ ನ್ಯೂಸ್
30-03-25 02:39 pm Mangalore Correspondent ಕರಾವಳಿ
ಉಳ್ಳಾಲ, ಮಾ.30: ಲಕೋಟೆಯೊಂದರಲ್ಲಿ ಸಂಸ್ಕರಿಸಿಟ್ಟ ಮಾನವ ಅಸ್ಥಿಗಳು ಕುಂಪಲ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ಪತ್ತೆಯಾಗಿದ್ದು, ಘಟನೆಯಿಂದ ಬೇಸ್ತು ಬಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಅಸ್ಥಿಗಳ ಹಿಂದಿನ ಅಸಲಿಯತ್ತನ್ನ ಪತ್ತೆ ಹಚ್ಚಿದ್ದಾರೆ.
ಶನಿವಾರ ನಡುರಾತ್ರಿ ಚಿತ್ರಾಂಜಲಿ ನಗರದ ಮನೆಯ ಆವರಣದ ಬಳಿ ಪ್ರಯೋಗಾಲಯದ ಮಾದರಿಯ ಅಸ್ಥಿಗಳು ಲಕೋಟೆಯಲ್ಲಿ ಸಂಸ್ಕರಿಸಿದ ರೀತಿಯಲ್ಲಿ ಪತ್ತೆಯಾಗಿದ್ದು ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿ ಸ್ಥಳದಲ್ಲಿ ಸಾಕಷ್ಟು ಜನರು ಜಮಾಯಿಸಿದ್ದರು. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಉಳ್ಳಾಲ ಪೊಲೀಸರು ಅಸ್ಥಿಗಳು ತುಂಬಿದ್ದ ಲಕೋಟೆಯನ್ನ ವಶಕ್ಕೆ ಪಡೆದಿದ್ದರು.



ಮಹಿಳೆಯ ಎಡವಟ್ಟು, ಬೇಸ್ತು ಬಿದ್ದ ಜನರು
ಚಿತ್ರಾಂಜಲಿ ನಗರದಲ್ಲಿ ದೊರೆತ ಅಸ್ಥಿಗಳನ್ನ ಸ್ಥಳೀಯ ಮಹಿಳೆಯೇ ತನ್ನ ಮನೆಯ ಆವರಣದ ಬಳಿ ಎಸೆದಿರುವ ವಿಚಾರ ಪೊಲೀಸರ ವಿಚಾರಣೆಯಲ್ಲಿ ತಿಳಿದು ಬಂದಿದೆ. ಮಹಿಳೆಯು ಮಂಗಳೂರಿನ ವೈದ್ಯರೋರ್ವರ ಮನೆಯಲ್ಲಿ ಕೆಲಸಕ್ಕಿದ್ದು ನಿವೃತ್ತಿ ಹೊಂದಿದ್ದ ವೈದ್ಯರು ಮನೆ ಬಿಟ್ಟು ಹೋದಾಗ ಮನೆಯಲ್ಲಿದ್ದ ಕೆಲ ಸಾಮಾಗ್ರಿಗಳನ್ನ ಮಹಿಳೆ ತಂದಿದ್ದರೆನ್ನಲಾಗಿದೆ. ವೈದ್ಯರ ಮನೆಯಿಂದ ತಂದಿದ್ದ ಸಂಸ್ಕರಿಸಿಡಲಾದ ಅಸ್ಥಿಗಳ ಲಕೋಟೆಯನ್ನ ಮಹಿಳೆಯು ತನ್ನ ಮನೆಯ ಕಂಪೌಡ್ ಬಳಿ ಎಸೆದಿದ್ದರೆನ್ನಲಾಗಿದೆ.
ಕಳೆದ ವಾರ ಚಿತ್ರಾಂಜಲಿ ನಗರದಲ್ಲಿ ಸ್ಥಳೀಯ ಸಂಘಟನೆಯೊಂದರ ವಾರ್ಷಿಕೋತ್ಸವ ನಡೆದಿತ್ತು. ವಾರ್ಷಿಕೋತ್ಸವದ ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡಿದ್ದ ಯುವಕನೋರ್ವನ ಬಾಡಿಗೆ ಕಾಸ್ಟ್ಯೂಮ್ ಈ ಪ್ರದೇಶದಲ್ಲೇ ಕಳೆದು ಹೋಗಿತ್ತು. ನಿನ್ನೆ ರಾತ್ರಿ ಯುವಕನು ಕಾಸ್ಟ್ಯೂಮ್ ಹುಡುಕಲು ಬಂದಾಗ ಅಸ್ಥಿಗಳ ಲಕೋಟೆ ದೊರೆತಿದೆ. ಅಸ್ಥಿಗಳನ್ನ ಕಂಡು ಹೌಹಾರಿದ ಯುವಕ ಊರೆಲ್ಲಾ ಸುದ್ದಿ ಹಬ್ಬಿಸಿದ್ದು, ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಒಟ್ಟಾರೆ ಮಹಿಳೆ ಮಾಡಿದ ಎಡವಟ್ಟಿನಿಂದಾಗಿ ಊರವರು ಮತ್ತು ಪೊಲೀಸರು ಅಸ್ಥಿಗಳ ಬಗ್ಗೆ ನಾನಾ ರೀತಿಯ ಹುಳಗಳನ್ನ ತಲೆಗೆ ಬಿಟ್ಟು ರಾತ್ರಿ ನಿದ್ದೆಗೆಡುವಂತಾಗಿತ್ತು.
Mangalore Processed Human Remains Found in Envelope Spark Panic in Kumpala as Mysterious Shadow Haunts Residents.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm