ಬ್ರೇಕಿಂಗ್ ನ್ಯೂಸ್
30-03-25 02:39 pm Mangalore Correspondent ಕರಾವಳಿ
ಉಳ್ಳಾಲ, ಮಾ.30: ಲಕೋಟೆಯೊಂದರಲ್ಲಿ ಸಂಸ್ಕರಿಸಿಟ್ಟ ಮಾನವ ಅಸ್ಥಿಗಳು ಕುಂಪಲ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ಪತ್ತೆಯಾಗಿದ್ದು, ಘಟನೆಯಿಂದ ಬೇಸ್ತು ಬಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಅಸ್ಥಿಗಳ ಹಿಂದಿನ ಅಸಲಿಯತ್ತನ್ನ ಪತ್ತೆ ಹಚ್ಚಿದ್ದಾರೆ.
ಶನಿವಾರ ನಡುರಾತ್ರಿ ಚಿತ್ರಾಂಜಲಿ ನಗರದ ಮನೆಯ ಆವರಣದ ಬಳಿ ಪ್ರಯೋಗಾಲಯದ ಮಾದರಿಯ ಅಸ್ಥಿಗಳು ಲಕೋಟೆಯಲ್ಲಿ ಸಂಸ್ಕರಿಸಿದ ರೀತಿಯಲ್ಲಿ ಪತ್ತೆಯಾಗಿದ್ದು ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿ ಸ್ಥಳದಲ್ಲಿ ಸಾಕಷ್ಟು ಜನರು ಜಮಾಯಿಸಿದ್ದರು. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಉಳ್ಳಾಲ ಪೊಲೀಸರು ಅಸ್ಥಿಗಳು ತುಂಬಿದ್ದ ಲಕೋಟೆಯನ್ನ ವಶಕ್ಕೆ ಪಡೆದಿದ್ದರು.



ಮಹಿಳೆಯ ಎಡವಟ್ಟು, ಬೇಸ್ತು ಬಿದ್ದ ಜನರು
ಚಿತ್ರಾಂಜಲಿ ನಗರದಲ್ಲಿ ದೊರೆತ ಅಸ್ಥಿಗಳನ್ನ ಸ್ಥಳೀಯ ಮಹಿಳೆಯೇ ತನ್ನ ಮನೆಯ ಆವರಣದ ಬಳಿ ಎಸೆದಿರುವ ವಿಚಾರ ಪೊಲೀಸರ ವಿಚಾರಣೆಯಲ್ಲಿ ತಿಳಿದು ಬಂದಿದೆ. ಮಹಿಳೆಯು ಮಂಗಳೂರಿನ ವೈದ್ಯರೋರ್ವರ ಮನೆಯಲ್ಲಿ ಕೆಲಸಕ್ಕಿದ್ದು ನಿವೃತ್ತಿ ಹೊಂದಿದ್ದ ವೈದ್ಯರು ಮನೆ ಬಿಟ್ಟು ಹೋದಾಗ ಮನೆಯಲ್ಲಿದ್ದ ಕೆಲ ಸಾಮಾಗ್ರಿಗಳನ್ನ ಮಹಿಳೆ ತಂದಿದ್ದರೆನ್ನಲಾಗಿದೆ. ವೈದ್ಯರ ಮನೆಯಿಂದ ತಂದಿದ್ದ ಸಂಸ್ಕರಿಸಿಡಲಾದ ಅಸ್ಥಿಗಳ ಲಕೋಟೆಯನ್ನ ಮಹಿಳೆಯು ತನ್ನ ಮನೆಯ ಕಂಪೌಡ್ ಬಳಿ ಎಸೆದಿದ್ದರೆನ್ನಲಾಗಿದೆ.
ಕಳೆದ ವಾರ ಚಿತ್ರಾಂಜಲಿ ನಗರದಲ್ಲಿ ಸ್ಥಳೀಯ ಸಂಘಟನೆಯೊಂದರ ವಾರ್ಷಿಕೋತ್ಸವ ನಡೆದಿತ್ತು. ವಾರ್ಷಿಕೋತ್ಸವದ ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡಿದ್ದ ಯುವಕನೋರ್ವನ ಬಾಡಿಗೆ ಕಾಸ್ಟ್ಯೂಮ್ ಈ ಪ್ರದೇಶದಲ್ಲೇ ಕಳೆದು ಹೋಗಿತ್ತು. ನಿನ್ನೆ ರಾತ್ರಿ ಯುವಕನು ಕಾಸ್ಟ್ಯೂಮ್ ಹುಡುಕಲು ಬಂದಾಗ ಅಸ್ಥಿಗಳ ಲಕೋಟೆ ದೊರೆತಿದೆ. ಅಸ್ಥಿಗಳನ್ನ ಕಂಡು ಹೌಹಾರಿದ ಯುವಕ ಊರೆಲ್ಲಾ ಸುದ್ದಿ ಹಬ್ಬಿಸಿದ್ದು, ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಒಟ್ಟಾರೆ ಮಹಿಳೆ ಮಾಡಿದ ಎಡವಟ್ಟಿನಿಂದಾಗಿ ಊರವರು ಮತ್ತು ಪೊಲೀಸರು ಅಸ್ಥಿಗಳ ಬಗ್ಗೆ ನಾನಾ ರೀತಿಯ ಹುಳಗಳನ್ನ ತಲೆಗೆ ಬಿಟ್ಟು ರಾತ್ರಿ ನಿದ್ದೆಗೆಡುವಂತಾಗಿತ್ತು.
Mangalore Processed Human Remains Found in Envelope Spark Panic in Kumpala as Mysterious Shadow Haunts Residents.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm