ಬ್ರೇಕಿಂಗ್ ನ್ಯೂಸ್
01-04-25 09:12 pm Mangalore Correspondent ಕರಾವಳಿ
ಮಂಗಳೂರು, ಎ.1 : ಮಂಗಳೂರು ನಗರ ಮಧ್ಯದ ಕೊಡಿಯಾಲಬೈಲಿನ ಜೈಲಿನಲ್ಲಿ ಜಾಮರ್ ಅಳವಡಿಸಿರುವುದರಿಂದ ಸುತ್ತಮುತ್ತಲಿನ ಸರಕಾರಿ, ಖಾಸಗಿ ಕಚೇರಿ ಇನ್ನಿತರ ಕೆಲಸ ಮಾಡುತ್ತಿರುವವರು ಮತ್ತು ಇತರ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಎದುರಾಗಿದೆ. ಇದರ ಬಗ್ಗೆ ಈಗಾಗಲೇ ಬಂಧೀಖಾನೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಕೊಟ್ಟಿದ್ದೇವೆ. ಇನ್ನು ಮೂರು ದಿನ ಸಮಯ ಕೊಡುತ್ತೇವೆ, ಜಾಮರ್ ಯಂತ್ರ ಸರಿಯಾಗದಿದ್ದರೆ ಜೈಲಿನ ಒಳಗೆ ನುಗ್ಗಿ ಜಾಮರ್ ಯಂತ್ರವನ್ನು ಕಿತ್ತು ಬಿಸಾಕುತ್ತೇವೆ ಎಂದು ಶಾಸಕ ವೇದವ್ಯಾಸ ಕಾಮತ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಶಾಸಕ ಕಾಮತ್, ಜೈಲಿನಲ್ಲಿ ಸಿಬಂದಿ ಮತ್ತು ಅಧಿಕಾರಿಗಳು ತಮ್ಮ ಕೆಲಸ ಸರಿಯಾಗಿ ಮಾಡಿದರೆ ಕೈದಿಗಳಿಗೆ ಮೊಬೈಲ್ ಹೇಗೆ ಸಿಗುತ್ತದೆ. ಅವರ ಕೈಗೆ ಮೊಬೈಲ್ ಕೊಡುವುದು ಯಾರೆಂದು ಪ್ರಶ್ನೆ ಬರುತ್ತದೆ. ಇವರು ಸರಿಯಾಗಿ ಕೆಲಸ ಮಾಡದಿರುವುದರಿಂದಲೇ ಜಾಮರ್ ಅಳವಡಿಸುವ ಪ್ರಮೇಯ ಬಂದಿದೆ. ಆದರೆ ಯಾವ ಜಾಮರ್ ಇದ್ದರೂ ಅದನ್ನು ಜೈಲಿನ ಒಳಗಡೆ ಸೀಮಿತಗೊಳಿಸಿ, ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ ಎಂದು ಜೈಲು ಅಧಿಕಾರಿಗಳಿಗೆ ಮನವಿ ಕೊಟ್ಟಿದ್ದೇವೆ. ಜಿಲ್ಲಾಡಳಿತ, ಪೊಲೀಸ್ ಕಮಿಷನರ್ ಅವರಿಗೂ ಮನವಿ ನೀಡಿದ್ದೇವೆ. ರಾಜ್ಯ ಸರಕಾರದ ಉನ್ನತ ಅಧಿಕಾರಿಗಳಿಗೂ ತಿಳಿಸಿದ್ದೇವೆ.
ನಗರ ಮಧ್ಯ ಇರುವ ಜೈಲಿನಲ್ಲಿ ಏಕಾಏಕಿ ಜಾಮರ್ ಅಳವಡಿಸಿ ಜನರಿಗೆ ತೊಂದರೆ ಕೊಡುವುದನ್ನು ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ನಾವು ಎಪ್ರಿಲ್ 4ರಂದು ಬಿಜೆಪಿ ಕಾರ್ಯಕರ್ತರು ಸೇರಿಕೊಂಡು ರಾಸ್ತಾರೋಕೊ ನಡೆಸಿ ಜೈಲಿಗೆ ನುಗ್ಗುತ್ತೇವೆ, ಜಾಮರ್ ಯಂತ್ರವನ್ನು ಕಿತ್ತು ಬಿಸಾಕುತ್ತೇವೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ಕೈದಿಗಳಿಗೆ ಮೊಬೈಲ್ ನೀಡುವುದು, ಅದನ್ನು ಕಂಟ್ರೋಲ್ ಮಾಡಕ್ಕಾಗದ ಸ್ಥಿತಿಯಾಗಿರುವುದಕ್ಕೆ ಕಾಂಗ್ರೆಸ್ ಆಡಳಿತ ಕಾರಣ. ಇವರಿಂದಾಗಿಯೇ ಕೈದಿಗಳು ಜೈಲಿನಲ್ಲಿದ್ದುಕೊಂಡೇ ಮೊಬೈಲ್ ನಲ್ಲಿ ಧಮಕಿ ಹಾಕುವ ಸ್ಥಿತಿ ಬಂದಿದೆ. ಅದನ್ನು ನಿಯಂತ್ರಣ ಮಾಡಲಾಗದ ಅಧಿಕಾರಿ ವರ್ಗ ಈಗ ಜೈಲಿನೊಳಗೆ ಜಾಮರ್ ಹಾಕಿದ್ದಾರೆ ಎಂದು ಕಾಮತ್ ಹೇಳಿದ್ದಾರೆ.
Mangalore MLA Vedavyas Kamath has threatened to demolish the controversial "Jammer" installation following ongoing unresolved issues that have raised significant concerns among prison authorities. The Jammer, intended to block mobile signals within the vicinity of correctional facilities, has become a point of contention amid allegations of ineffective operation and safety concerns.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm