ಬ್ರೇಕಿಂಗ್ ನ್ಯೂಸ್
05-04-25 01:16 pm Mangaluru Staff ಕರಾವಳಿ
ಮಂಗಳೂರು, ಎ.5: ಮಂಗಳೂರಿನ ಜೈಲು ಆವರಣದಲ್ಲಿ 5ಜಿ ಜಾಮರ್ ಯಂತ್ರ ಅಳವಡಿಸಿ ತೊಂದರೆ ಆಗಿರುವುದನ್ನು ವಿರೋಧಿಸಿ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜೈಲಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಜೈಲಿನ ಮುಂದೆ ಪ್ರತಿಭಟನಾ ಸಭೆ ನಡೆಸಿ ಒಳಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಜೈಲಿನಲ್ಲಿ ಏಕಾಏಕಿ 5ಜಿ ಜಾಮರ್ ಅಳವಡಿಸಿದ್ದರಿಂದ ಸುತ್ತಮುತ್ತಲಿನ ಕಚೇರಿ, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಜೈಲು ವಿಭಾಗದ ಡಿಜಿ, ಗೃಹ ಸಚಿವರು, ಪೊಲೀಸ್ ಕಮಿಷನರ್ ಗೆ ದೂರಿತ್ತರೂ ಕ್ರಮ ಕೈಗೊಂಡಿಲ್ಲ. ಸಾರ್ವಜನಿಕರು ತೊಂದರೆ ಎದುರಿಸಿದರೂ ಕಾಂಗ್ರೆಸ್ ಸರ್ಕಾರ ಮೌನ ವಹಿಸಿದೆ. ನಮ್ಮ ಸರ್ಕಾರ ಇರುತ್ತಿದ್ದರೆ ಜೈಲಿಗೆ ನುಗ್ಗಿ ಜಾಮರ್ ಕಿತ್ತು ಬಿಸಾಕುತ್ತಿದ್ದೆ ಎಂದು ಹೇಳಿದರು.
ಈಗಲೂ ನಾವು ಜೈಲಿಗೆ ಹೋಗಲು ಸಿದ್ಧ, ಜೈಲಿನಲ್ಲಿ ಹೇಗೂ ಮೊಬೈಲ್ ಸಿಗುತ್ತದೆ, ತೊಂದ್ರೆ ಇಲ್ಲ ಎಂದು ಹೇಳಿದ ಕಾಮತ್, ಜೈಲಿನ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿದರೆ ಜಾಮರ್ ಅಗತ್ಯವಿದೆಯೇ? ಇವರು ಸರಿಯಾಗಿ ಕೆಲಸ ಮಾಡದ ಕಾರಣಕ್ಕೆ ಜಾಮರ್ ಹಾಕಿದ್ದಾರೆ. ಮೂಗಿನಲ್ಲಿ ನೆಗಡಿ ಆಗಿದೆಯೆಂದು ಮೂಗು ಕತ್ತರಿಸುತ್ತೀರಾ..? ಇದು ಕಾಂಗ್ರೆಸ್ ಸರ್ಕಾರದ ಜನವಿರೋಧಿ ನಡೆಯಲ್ಲವೇ ಎಂದು ಪ್ರಶ್ನಿಸಿದರು.
ಪ್ರತಿಭಟನೆ ಸಭೆಯ ಬಳಿಕ ಕಾರ್ಯಕರ್ತರು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಜೈಲಿನ ಒಳನುಗ್ಗಲು ಯತ್ನಿಸಿದ್ದಾರೆ. ಈ ವೇಳೆ, ಮೊದಲೇ ತಯಾರಾಗಿದ್ದ 50ಕ್ಕೂ ಹೆಚ್ಚು ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಂಧನ ಮಾಡಿದ್ದಾರೆ.
MLA Vedavyas Kamath led a protest outside Mangalore Jail today over the installation of jammers within the facility, which have been a controversial topic in recent weeks. The situation intensified when several BJP members, rallying behind Kamath's cause, attempted to enter the jail grounds to demand answers from the authorities regarding the jammers. Law enforcement swiftly intervened, resulting in the detention of the protestors amid escalating tensions.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm