ಬ್ರೇಕಿಂಗ್ ನ್ಯೂಸ್
07-04-25 03:03 pm Mangalore Correspondent ಕರಾವಳಿ
ಬಂಟ್ವಾಳ, ಎ.6 : ಬಂಟ್ವಾಳ ತಾಲೂಕಿನ ಅಮ್ಟಾಡಿ ಲೊರೆಟ್ಟೋಪದವು ನಿವಾಸಿ ಜೀವನ್ ತಾವ್ರೋ (37) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಠಾಣೆ ಪೊಲೀಸರು ಇಬ್ಬರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.
ಲೊರೆಟ್ಟೋಪದವಿನಲ್ಲಿ ವೃದ್ಧ ತಂದೆ- ತಾಯಿ ಜೊತೆಗಿದ್ದುಕೊಂಡು ಪ್ರಗತಿಪರ ಕೃಷಿಕರಾಗಿದ್ದ ಜೀವನ್ ತಾವ್ರೋ ಅವರು ಕಳೆದ ಫೆಬ್ರವರಿ 10ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವೇಳೆ, ಹಣಕಾಸು ವಿಚಾರದಲ್ಲಿ ಮೋಸ ಆಗಿರುವುದರ ಬಗ್ಗೆ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟಿದ್ದರು. ಈ ಬಗ್ಗೆ ಬಂಟ್ವಾಳ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದರೂ ತನಿಖೆ ಮುಂದುವರಿದಿರಲಿಲ್ಲ. ಜೀವನ್ ತಾವ್ರೋಗೆ ಮದುವೆ ಆಗಿರಲಿಲ್ಲ. ಗೆಳೆಯರ ಜೊತೆಗೆ ಉತ್ತಮ ಸಂಬಂಧ ಇಟ್ಟುಕೊಂಡಿದ್ದರು.

ಇದೀಗ ಸಂಬಂಧಿಕರ ಒತ್ತಾಯದ ಮೇರೆಗೆ ಘಟನೆ ಸಂಬಂಧಿಸಿ ತನಿಖೆ ನಡೆಸಿದ ವೇಳೆ ಜೀವನ್ ಅವರ ಹತ್ತಿರದ ಗೆಳೆಯರಾಗಿದ್ದ ಕೆಲವರು ಮನೆಗೆ ಬರುವುದನ್ನು ಬಿಟ್ಟು ದೂರ ಉಳಿದಿದ್ದರು. ಇದರಿಂದ ಸಂಶಯದಲ್ಲಿ ಪೊಲೀಸರು ತನಿಖೆ ನಡೆಸಿದಾಗ ಇವರೊಳಗಿನ ಹಣಕಾಸು ವ್ಯವಹಾರದ ಬಗ್ಗೆ ಮಾಹಿತಿ ಸಿಕ್ಕಿತ್ತು. ಪೊಲೀಸರು ಇದೀಗ ಅದೇ ಪರಿಸರದ ಪ್ರವೀಣ್ ಡೇಸಾ ಮತ್ತು ರೋಹನ್ ಪಿಂಟೋ ಎಂಬವರನ್ನು ಬಂಧಿಸಿದ್ದು ಕೋರ್ಟಿಗೆ ಹಾಜರು ಪಡಿಸಿದ್ದಾರೆ. ಇವರ ಪಾತ್ರವೇನು, ಬೇರೆ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬ ವಿಚಾರದಲ್ಲಿ ತನಿಖೆ ಆಗಬೇಕಷ್ಟೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಸೆಕ್ಷನ್ 306 ಅಡಿ ಆತ್ಮಹತ್ಯೆಗೆ ಪ್ರಚೋದನೆಯೆಂದು ಹೆಚ್ಚುವರಿ ಕೇಸು ದಾಖಲಾಗಿದೆ.
Jeevan Tauro suicide case, Two attested by bantwal police in Mangalore. The arrested has been identified as Praveen Desa and Rohan pinto. Jeevan had written a death note where he was cheated financially, based on the death two have been arrested. Jeevan Tauro (38), son of Maxim Tauro & Leticia Tauro, brother of Steeva, Pramila / Sudeep, Passed away on February 10, 2025.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm