ಬ್ರೇಕಿಂಗ್ ನ್ಯೂಸ್
07-04-25 07:01 pm Mangalore Correspondent ಕರಾವಳಿ
ಮಂಗಳೂರು, ಎ.6 : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಶಾಫಿ ಬೆಳ್ಳಾರೆಯನ್ನು ಬೆಳ್ತಂಗಡಿ ಕೋರ್ಟಿಗೆ ಹಾಜರುಪಡಿಸಿದ ವೇಳೆ ಪೊಲೀಸ್ ಭದ್ರತೆ ನಡುವಲ್ಲೇ ಯುವಕನೊಬ್ಬ ಮುತ್ತಿಟ್ಟ ಪ್ರಸಂಗ ನಡೆದಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿ ಶಾಫಿ ಬೆಳ್ಳಾರೆಯನ್ನು ಬೆಳ್ತಂಗಡಿ ಪೊಲೀಸರು ಬಾಡಿ ವಾರೆಂಟ್ ಪಡೆದು ನ್ಯಾಯಾಲಯಕ್ಕೆ ಕರೆತರುತ್ತಿದ್ದಾಗ ಕೋರ್ಟ್ ಆವರಣದಲ್ಲೇ ಎಸ್ಡಿಪಿಐ ಕಾರ್ಯಕರ್ತನೊಬ್ಬ ಮುತ್ತು ನೀಡಿದ್ದಾನೆ. ಪೊಲೀಸರು ಹಿಡಿದುಕೊಂಡಿದ್ದಾಗಲೇ ಶಾಫಿಯನ್ನು ಬರಸೆಳೆದು ಹಣೆಗೆ ಮುತ್ತು ನೀಡಿದ್ದು ಇದರ ವಿಡಿಯೋವನ್ನು ಮೊಬೈಲ್ ನಲ್ಲಿ ಸೆರೆಹಿಡಿದು ವೈರಲ್ ಮಾಡಲಾಗಿದೆ.





2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಸ್ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ಅವಹೇಳನಕಾರಿ ಭಾಷಣ ಮಾಡಿದ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ಬಾಡಿ ವಾರೆಂಟ್ ನಲ್ಲಿ ಕರೆತಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. ಎರಡು ವರ್ಷಗಳ ಹಿಂದೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಶಾಫಿಯನ್ನು ಬಂಧಿಸಿ ದೇಶದ್ರೋಹ ಕಾಯ್ದೆಯಡಿ ಕೇಸು ದಾಖಲಿಸಿದ್ದರು. ಕೋರ್ಟಿಗೆ ಕರೆತರುತ್ತಿದ್ದಾಗಲೇ ಶಾಫಿ ಬೆಳ್ಳಾರೆಯನ್ನು ನೋಡಲು ಬಂದಿದ್ದ ಕಾರ್ಯಕರ್ತನೊಬ್ಬ ಮುತ್ತಿಟ್ಟು ಗ್ರೇಟ್ ಅನ್ನುವ ರೀತಿ ಶಹಭಾಷ್ ನೀಡಿದ್ದಾನೆ. ಪ್ರೀ ಪ್ಲಾನ್ ಆಗಿಯೇ ಯುವಕ ಎದುರಲ್ಲಿ ನಿಂತು ಮುತ್ತಿಟ್ಟು ಸುದ್ದಿಯಾಗಿದ್ದಾನೆ.
#Mangalore Activist affiliated with the Social Democratic Party of India (#SDPI) was filmed kissing #ShafiBellare, one of the accused in the high-profile murder case of #PraveenNettaru, while under police security in Mangalore. pic.twitter.com/0XW6iv7fLI
— Headline Karnataka (@hknewsonline) April 7, 2025
Mangalore Activist affiliated with the Social Democratic Party of India (SDPI) was filmed kissing Shafi Bellare, one of the accused in the high-profile murder case of Praveen Nettaru, while under police security in Mangalore.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm