ಬ್ರೇಕಿಂಗ್ ನ್ಯೂಸ್
15-04-25 09:21 pm Mangalore Correspondent ಕರಾವಳಿ
ಮಂಗಳೂರು, ಎ.15 : ಸುರತ್ಕಲ್ ನಲ್ಲಿ ನಡೆದ ಮದುವೆಗೆ ಮುಂಬೈನಿಂದ ಬಂದಿದ್ದ ಹತ್ತು ಮಂದಿಯಿದ್ದ ಕುಟುಂಬವೊಂದು ಎನ್ಐಟಿಕೆ ಬಳಿಯ ಬೀಚ್ ಗೆ ತೆರಳಿದ್ದು, ಅಲ್ಲಿ ಸಮುದ್ರದ ಅಲೆಗಳೊಂದಿಗೆ ಈಜಾಡುತ್ತಿದ್ದಾಗ ಇಬ್ಬರು ಹದಿಹರೆಯದ ವಿದ್ಯಾರ್ಥಿಗಳು ನೀರಿಗೆ ಬಿದ್ದು ಸಮುದ್ರ ಪಾಲಾಗಿದ್ದಾರೆ.
ಮುಂಬೈನಲ್ಲಿ ದ್ವಿತೀಯ ಪಿಯುಸಿ ಮುಗಿಸಿರುವ ಧ್ಯಾನ್ ಬಂಜನ್ (18) ಮತ್ತು ಈಚೆಗಷ್ಟೇ ಎಸ್ಎಸ್ಎಲ್ ಸಿ ಮುಗಿಸಿದ್ದ ಹನೀಶ್ ಕುಲಾಲ್ (15) ನೀರುಪಾಲಾದವರು. ಹತ್ತು ಮಂದಿಯ ಕುಟುಂಬ ಸುರತ್ಕಲ್ ಸಮೀಪದ ಸೂರಿಂಜೆಯ ಪ್ರಖ್ಯಾತ್ ಎಂಬವರ ಮನೆಗೆ ಮದುವೆ ಕಾರ್ಯಕ್ರಮಕ್ಕೆಂದು ಬಂದಿತ್ತು. ಮಂಗಳವಾರ ಸಂಜೆ 5.30ರ ವೇಳೆಗೆ ಎನ್ಐಟಿಕೆ ಬೀಚ್ ಬಳಿಗೆ ಬಂದಿದ್ದು ಸಮುದ್ರದಲ್ಲಿ ನೀರಾಟಕ್ಕಿಳಿದಿದ್ದರು.
ನೀರಿನಲ್ಲಿ ಆಡುತ್ತಿದ್ದಾಗಲೇ ಧ್ಯಾನ್ ಮತ್ತು ಹನೀಶ್ ಕುಲಾಲ್ ನೀರಿನ ಅಲೆಯಲ್ಲಿ ಸಿಲುಕಿದ್ದು, ಈ ವೇಳೆ ಲೈಫ್ ಗಾರ್ಡ್ ಸಿಬಂದಿ ಪ್ರದೀಪ್ ಆಚಾರ್ಯ ಅಲೆಗಳ ಎಡೆಯಿಂದ ಧ್ಯಾನ್ ನನ್ನು ಎಳೆದು ಮೇಲಕ್ಕೆ ತಂದಿದ್ದಾರೆ. ಆದರೆ ಹನೀಶ್ ಕುಲಾಲ್ ಜೀವರಕ್ಷಕ ಸಿಬಂದಿ ಕೈಗೆ ಸಿಗದೆ ನಾಪತ್ತೆಯಾಗಿದ್ದಾರೆ. ಧ್ಯಾನ್ ನನ್ನು ಕೂಡಲೇ ಸುರತ್ಕಲ್ ಪದ್ಮಾವತಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ ಅಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಧ್ಯಾನ್ ಮುಂಬೈನಲ್ಲಿ ನೆಲೆಸಿರುವ ಬೈಂದೂರು ಮೂಲದ ವಿವೇಕಾನಂದ ಬಂಜನ್ ಅವರ ಪುತ್ರನಾಗಿದ್ದು, ಹನೀಶ್ ಕುಲಾಲ್ ಮುಂಬೈನಲ್ಲಿ ನೆಲೆಸಿರುವ ಮಂಗಳೂರು ಮೂಲದ ಉಮೇಶ್ ಕುಲಾಲ್ ಅವರ ಪುತ್ರನೆಂದು ಸುರತ್ಕಲ್ ಪೊಲೀಸರು ತಿಳಿಸಿದ್ದಾರೆ. ಹನೀಶ್ ಪತ್ತೆಗಾಗಿ ಲೈಫ್ ಗಾರ್ಡ್ ಸಿಬಂದಿ ಮತ್ತು ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heartbreaking incident, two youths from Mumbai drowned at Surathkal Beach in Mangalore. The deceased have been identified as Dhyan, 18, and Hanish Kulal, 15. The unfortunate event occurred while the families were celebrating a wedding function in Surathkal. Following the ceremony, Dhyan and Hanish, along with their family, decided to visit the beach. Witnesses report that the youths were enjoying the water when they encountered difficulties, leading to the tragic drowning.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm