ಬ್ರೇಕಿಂಗ್ ನ್ಯೂಸ್
15-04-25 09:21 pm Mangalore Correspondent ಕರಾವಳಿ
ಮಂಗಳೂರು, ಎ.15 : ಸುರತ್ಕಲ್ ನಲ್ಲಿ ನಡೆದ ಮದುವೆಗೆ ಮುಂಬೈನಿಂದ ಬಂದಿದ್ದ ಹತ್ತು ಮಂದಿಯಿದ್ದ ಕುಟುಂಬವೊಂದು ಎನ್ಐಟಿಕೆ ಬಳಿಯ ಬೀಚ್ ಗೆ ತೆರಳಿದ್ದು, ಅಲ್ಲಿ ಸಮುದ್ರದ ಅಲೆಗಳೊಂದಿಗೆ ಈಜಾಡುತ್ತಿದ್ದಾಗ ಇಬ್ಬರು ಹದಿಹರೆಯದ ವಿದ್ಯಾರ್ಥಿಗಳು ನೀರಿಗೆ ಬಿದ್ದು ಸಮುದ್ರ ಪಾಲಾಗಿದ್ದಾರೆ.
ಮುಂಬೈನಲ್ಲಿ ದ್ವಿತೀಯ ಪಿಯುಸಿ ಮುಗಿಸಿರುವ ಧ್ಯಾನ್ ಬಂಜನ್ (18) ಮತ್ತು ಈಚೆಗಷ್ಟೇ ಎಸ್ಎಸ್ಎಲ್ ಸಿ ಮುಗಿಸಿದ್ದ ಹನೀಶ್ ಕುಲಾಲ್ (15) ನೀರುಪಾಲಾದವರು. ಹತ್ತು ಮಂದಿಯ ಕುಟುಂಬ ಸುರತ್ಕಲ್ ಸಮೀಪದ ಸೂರಿಂಜೆಯ ಪ್ರಖ್ಯಾತ್ ಎಂಬವರ ಮನೆಗೆ ಮದುವೆ ಕಾರ್ಯಕ್ರಮಕ್ಕೆಂದು ಬಂದಿತ್ತು. ಮಂಗಳವಾರ ಸಂಜೆ 5.30ರ ವೇಳೆಗೆ ಎನ್ಐಟಿಕೆ ಬೀಚ್ ಬಳಿಗೆ ಬಂದಿದ್ದು ಸಮುದ್ರದಲ್ಲಿ ನೀರಾಟಕ್ಕಿಳಿದಿದ್ದರು.
ನೀರಿನಲ್ಲಿ ಆಡುತ್ತಿದ್ದಾಗಲೇ ಧ್ಯಾನ್ ಮತ್ತು ಹನೀಶ್ ಕುಲಾಲ್ ನೀರಿನ ಅಲೆಯಲ್ಲಿ ಸಿಲುಕಿದ್ದು, ಈ ವೇಳೆ ಲೈಫ್ ಗಾರ್ಡ್ ಸಿಬಂದಿ ಪ್ರದೀಪ್ ಆಚಾರ್ಯ ಅಲೆಗಳ ಎಡೆಯಿಂದ ಧ್ಯಾನ್ ನನ್ನು ಎಳೆದು ಮೇಲಕ್ಕೆ ತಂದಿದ್ದಾರೆ. ಆದರೆ ಹನೀಶ್ ಕುಲಾಲ್ ಜೀವರಕ್ಷಕ ಸಿಬಂದಿ ಕೈಗೆ ಸಿಗದೆ ನಾಪತ್ತೆಯಾಗಿದ್ದಾರೆ. ಧ್ಯಾನ್ ನನ್ನು ಕೂಡಲೇ ಸುರತ್ಕಲ್ ಪದ್ಮಾವತಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ ಅಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಧ್ಯಾನ್ ಮುಂಬೈನಲ್ಲಿ ನೆಲೆಸಿರುವ ಬೈಂದೂರು ಮೂಲದ ವಿವೇಕಾನಂದ ಬಂಜನ್ ಅವರ ಪುತ್ರನಾಗಿದ್ದು, ಹನೀಶ್ ಕುಲಾಲ್ ಮುಂಬೈನಲ್ಲಿ ನೆಲೆಸಿರುವ ಮಂಗಳೂರು ಮೂಲದ ಉಮೇಶ್ ಕುಲಾಲ್ ಅವರ ಪುತ್ರನೆಂದು ಸುರತ್ಕಲ್ ಪೊಲೀಸರು ತಿಳಿಸಿದ್ದಾರೆ. ಹನೀಶ್ ಪತ್ತೆಗಾಗಿ ಲೈಫ್ ಗಾರ್ಡ್ ಸಿಬಂದಿ ಮತ್ತು ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heartbreaking incident, two youths from Mumbai drowned at Surathkal Beach in Mangalore. The deceased have been identified as Dhyan, 18, and Hanish Kulal, 15. The unfortunate event occurred while the families were celebrating a wedding function in Surathkal. Following the ceremony, Dhyan and Hanish, along with their family, decided to visit the beach. Witnesses report that the youths were enjoying the water when they encountered difficulties, leading to the tragic drowning.
04-06-25 10:48 pm
Bangalore Correspondent
RCB celebration, Bangalore, Stampede, update:...
04-06-25 09:07 pm
R Ashok, RCB, Bangalore, Death: ಕಿಲ್ಲರ್ RCB ;...
04-06-25 08:06 pm
RCB Victory Celebration, Death, Stampede, Ban...
04-06-25 06:21 pm
ಕ್ಷಮೆ ಕೇಳಲ್ಲ, ಮಾತುಕತೆಗೆ ಸಿದ್ಧ ; ಹೈಕೋರ್ಟಿನಲ್ಲಿ...
03-06-25 10:50 pm
04-06-25 05:05 pm
HK News Desk
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
04-06-25 10:43 pm
Mangalore Correspondent
Mangalore Police, Social Media, Arrest: ಜಾಲತಾ...
04-06-25 09:34 pm
RCB, Mangalore celebration, IPL Cricket 2025:...
04-06-25 02:26 pm
Bomb Threat, Mangalore, Kanachur Hospital: ದೇ...
04-06-25 01:38 pm
ಮಂಗಳೂರಿನಲ್ಲಿ ಟಿಂಟ್ ಗ್ಲಾಸ್ ಕಾರುಗಳ ವಿರುದ್ಧ ವಿಶೇ...
03-06-25 08:13 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm